BREAKING NEWS

ಬಿಸಿಯೂಟಕ್ಕೆ ಬಂದ ಅಕ್ಕಿಯಲ್ಲಿ ಪ್ಲಾಸ್ಟಿಕ್:‌ ಪೋಷಕರ ಆಕ್ರೋಶ

ಮಡಿಕೇರಿ: ಶಾಲಾ ಮಕ್ಕಳ ಬಿಸಿಯೂಟಕ್ಕೆ ಸರಬರಾಜು ಆಗಬೇಕಿದ್ದ ಅಕ್ಕಿಯಲ್ಲಿ ಮಾತ್ರೆ ಗಾತ್ರದ ಪ್ಲಾಸ್ಟಿಕ್ ವಸ್ತು ಪತ್ತೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ.
ಮಡಿಕೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಫ್ರೌಡಶಾಲಾ ವಿಭಾಗದ ಮಕ್ಕಳ ದಾಸೋಹದ ಬಿಸಿಯೂಟಕ್ಕೆ ಸರಬರಾಜಾಗುವ ಅಕ್ಕಿಯಲ್ಲಿ ಪ್ಲಾಸ್ಟಿಕ್ ಮಣಿಯಂತ ವಸ್ತುಗಳು ಪತ್ತೆಯಾಗಿದ್ದು ಜಿಲ್ಲೆಯಲ್ಲಿನ ಶಾಲಾ ಆಡಳಿತ ಮಂಡಳಿಗಳಿಗೆ ಆತಂಕ ತಂದೊಡ್ಡಿದೆ. ಶಾಲಾ ಮಕ್ಕಳಿಗೆ ಬಿಸಿಯೂಟ ತಯಾರಿ ಮಾಡಲು ಮುಂದಾದ ಅಡುಗೆ ಸಿಬ್ಬಂದಿಗಳು ಅಕ್ಕಿಯನ್ನ ತೊಳೆಯುವ ಸಂಧರ್ಭದಲ್ಲಿ ಪ್ಲಾಸ್ಟಿಕ್ ನಂತ ಮಣಿಗಳು ನೀರಿನಲ್ಲಿ ತೇಲುತ್ತಿರುವುದನ್ನು ಕಂಡಿದ್ದಾರೆ. ತಕ್ಷಣವೇ ಎಚ್ಚೆತ್ತ ಅಡುಗೆ ಸಿಬ್ಬಂದಿ ಶಾಲೆಯ ಮುಖ್ಯಸ್ಥರ ಗಮನಕ್ಕೆ ತಂದಿದ್ದಾರೆ.
ಬಿಸಿಯೂಟಕ್ಕೆ ಸರಬರಾಜಾದ ಅಕ್ಕಿಯನ್ನ ಶಿಕ್ಷಕರು ಪರಿಶೀಲಿಸಿದಾಗ ಶಾಲೆಗೆ ರವಾನೆಯಾದ ಒಂದು ಮೂಟೆಯಲ್ಲಿ ಈ ರೀತಿಯ ಅಕ್ಕಿಯ ರೂಪದಲ್ಲಿರುವ ಮಣಿಗಳು ಪತ್ತೆಯಾಗಿದೆ. ಅಡುಗೆ ಸಿಬ್ಬಂದಿ ಸರಿಯಾಗಿ ಗಮನಿಸದೆ ಅಡುಗೆ ಮಾಡಿದ್ದಲ್ಲಿ ಅನಾಹುತ ನಡೆಯುವ ಸಾಧ್ಯತೆ ಇತ್ತು. ಮಡಿಕೇರಿಯ ಸರ್ಕಾರಿ ಫ್ರೌಡಶಾಲೆಯಲ್ಲಿ 200 ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದು ಬಹುತೇಕರು ಬಡವರ್ಗದ ಮಕ್ಕಳಾಗಿದ್ದಾರೆ. ಬಡ ಮಕ್ಕಳ ಬಿಸಿಯೂಟದ ಅಕ್ಕಿಯನ್ನೂ ಕೂಡ ಕಲಬೆರಕೆ ಮಾಡಿ ಸರಬರಾಜು ಮಾಡಿರುವ ಬಗ್ಗೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಳೆದೆರಡು ವಾರದ ಹಿಂದೆಯಷ್ಟೇ ಬಂದ ಅಕ್ಕಿಯ ಒಂದು ಚೀಲದಲ್ಲಿ ಈ ರೀತಿಯ ಮಣಿಗಳು ಪತ್ತೆಯಾಗಿದ್ದು ಶಾಲಾ ಆಡಳಿತ ಮಂಡಳಿ ಹಾಗೂ ಎಸ್‌ ಡಿಎಂಸಿ ಸದಸ್ಯರು ಅಧಿಕಾರಿಗಳ ಗಮನಕ್ಕೂ ತಂದಿದ್ದು ಸರಬರಾಜಾದ ಅಕ್ಕಿಯನ್ನ ಹಿಂದಿರುಗಿಸಲಾಗಿದೆ. ಮಕ್ಕಳಿಗೆ ಮಾತ್ರಲ್ಲ ಸರಬರಾಜಾಗುವ ಪಡಿತರವಲ್ಲದೆ ನ್ಯಾಯಬೆಲೆ ಅಂಗಡಿಗಳಿಗೂ ಈ ಅಕ್ಕಿ ಸರಬರಾಜಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಜಿಲ್ಲೆಗೆ ಬರುವ ಅಕ್ಕಿ ಬಹುತೇಕ ಹರಿಯಾಣದಿಂದ ಬರುತ್ತಿದೆ ಎನ್ನಲಾಗಿದೆ. ಹರಿಯಾಣ ಭಾಗದಿಂದ ಬಂದ ಅಕ್ಕಿಯನ್ನ ಮಡಿಕೇರಿಯ ಫುಡ್ ಸಪ್ಲೇ ಗೋಡಾನ್ ನಲ್ಲಿ ಶೇಖರಿಸಿಟ್ಟು ಅಲ್ಲಿಂದ ಎಲ್ಲಕಡೆಗಳಿಗೂ ಅಕ್ಕಿ ಸಪ್ಲೆ ಅಗುತ್ತದೆ. ಇನ್ನೂ ಘಟನೆ ಸಂಬಂಧ ಶಾಲೆಯ ಎಸ್.ಡಿ.ಎಂ.ಸಿ ಪ್ರಮುಖರು ಕೊಡಗು ಜಿಲ್ಲಾಧಿಕಾರಿಗಳ ಗಮನಕ್ಕೂ ತಂದಿದ್ದು ಅಕ್ಕಿ ಎಲ್ಲಿಂದ ಸಪ್ಲೆ ಆಗಿದೆಯೊ ಆ ಕಂಪೆನಿಯ ಪರವಾನಿಗೆ ರದ್ದುಗೊಳಿಸಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಎಸ್.ಡಿ.ಎಂ.ಸಿ ಆಡಳಿತ ಮಂಡಳಿಯ ಪ್ರಮುಖರು ಆಗ್ರಹಿಸಿದ್ದಾರೆ.

andolanait

Recent Posts

KSOU | ಕುಲಪತಿ ಹುದ್ದೆಗೆ ಅರ್ಜಿ ಆಹ್ವಾನ

ಮೈಸೂರು : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ಕುಲಪತಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ…

8 mins ago

ನಕ್ಸಲ್ ಮುಕ್ತ ಮಾಡಿದ ಮೊದಲ ರಾಜ್ಯ ಕರ್ನಾಟಕ : ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು : ಬಹಳ ವರ್ಷಗಳ ಹಿಂದೆಯೇ ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್‌) ಸ್ಥಾಪಿಸುವ ಮೂಲಕ ದೇಶದಲ್ಲೇ ಮೊದಲು ಕರ್ನಾಟಕವನ್ನು ನಾವು…

59 mins ago

ಬಿ.ಆರ್.ಟಿ ವಲಯದಲ್ಲಿ ಮತ್ತೆ ಕಾಡ್ಗಿಚ್ಚು : 20 ಎಕರೆ ಅರಣ್ಯ ನಾಶ

ಹನೂರು : ತಾಲೂಕಿನ ಬಿ.ಆರ್.ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಗುಡ್ಡದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡು ಸುಮಾರು 20 ಎಕರೆಗೂ…

2 hours ago

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪ ; ಓರ್ವ ಸಾವು ಹಲವರಿಗೆ ಗಾಯ

ಜಕಾರ್ತಾ : ಇಂಡೋನೇಷ್ಯಾದ ಉತ್ತರ ಮೊಲುಕ್ಕಾ ಸಮುದ್ರ ಪ್ರದೇಶದಲ್ಲಿ ಗುರುವಾರ ಬೆಳಗ್ಗೆ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್‌ ಮಾಪಕದಲ್ಲಿ 7.4ರಷ್ಟು…

2 hours ago

ಹನೂರು | ಕಾಡಾನೆದಾಳಿಗೆ 500ಕ್ಕೂ ಹೆಚ್ಚು ಬಾಳೆ ನಾಶ

ಹನೂರು : ಏಕ ಕಾಲದಲ್ಲಿ ಬುಧವಾರ ತಡರಾತ್ರಿ ಕಾಡಾನೆಗಳು ರೈತರ ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳ ಮೇಲೆ ದಾಳಿ ನಡೆಸಿ ಸುಮಾರು…

3 hours ago

ಪರಿಶ್ರಮದಿಂದ ಮಾತ್ರ ಬದುಕು ರೂಪಿಸಿಕೊಳ್ಳಲು ಸಾಧ್ಯ : ಹೆಚ್ಚುವರಿ ಆಯುಕ್ತೆ ವೀಣಾ

ಮೈಸೂರು : ಸ್ಪರ್ಧಾತ್ಮಕ ಜಗತ್ತು ಸಾಗರದಂತೆ. ಇವತ್ತಿನ ಸ್ಪರ್ಧಾತ್ಮಕ ಸಮಾಜದಲ್ಲಿ ಹೆಚ್ಚಿನ ಬದಲಾವಣೆಗಳು, ಒತ್ತಡಗಳಿದ್ದು, ಎಲ್ಲದಕ್ಕೂ ಸಿದ್ಧರಿರಬೇಕು. ನಿರಂತರ ಅಭ್ಯಾಸ…

3 hours ago