ಮಡಿಕೇರಿ: ಶಾಲಾ ಮಕ್ಕಳ ಬಿಸಿಯೂಟಕ್ಕೆ ಸರಬರಾಜು ಆಗಬೇಕಿದ್ದ ಅಕ್ಕಿಯಲ್ಲಿ ಮಾತ್ರೆ ಗಾತ್ರದ ಪ್ಲಾಸ್ಟಿಕ್ ವಸ್ತು ಪತ್ತೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ.
ಮಡಿಕೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಫ್ರೌಡಶಾಲಾ ವಿಭಾಗದ ಮಕ್ಕಳ ದಾಸೋಹದ ಬಿಸಿಯೂಟಕ್ಕೆ ಸರಬರಾಜಾಗುವ ಅಕ್ಕಿಯಲ್ಲಿ ಪ್ಲಾಸ್ಟಿಕ್ ಮಣಿಯಂತ ವಸ್ತುಗಳು ಪತ್ತೆಯಾಗಿದ್ದು ಜಿಲ್ಲೆಯಲ್ಲಿನ ಶಾಲಾ ಆಡಳಿತ ಮಂಡಳಿಗಳಿಗೆ ಆತಂಕ ತಂದೊಡ್ಡಿದೆ. ಶಾಲಾ ಮಕ್ಕಳಿಗೆ ಬಿಸಿಯೂಟ ತಯಾರಿ ಮಾಡಲು ಮುಂದಾದ ಅಡುಗೆ ಸಿಬ್ಬಂದಿಗಳು ಅಕ್ಕಿಯನ್ನ ತೊಳೆಯುವ ಸಂಧರ್ಭದಲ್ಲಿ ಪ್ಲಾಸ್ಟಿಕ್ ನಂತ ಮಣಿಗಳು ನೀರಿನಲ್ಲಿ ತೇಲುತ್ತಿರುವುದನ್ನು ಕಂಡಿದ್ದಾರೆ. ತಕ್ಷಣವೇ ಎಚ್ಚೆತ್ತ ಅಡುಗೆ ಸಿಬ್ಬಂದಿ ಶಾಲೆಯ ಮುಖ್ಯಸ್ಥರ ಗಮನಕ್ಕೆ ತಂದಿದ್ದಾರೆ.
ಬಿಸಿಯೂಟಕ್ಕೆ ಸರಬರಾಜಾದ ಅಕ್ಕಿಯನ್ನ ಶಿಕ್ಷಕರು ಪರಿಶೀಲಿಸಿದಾಗ ಶಾಲೆಗೆ ರವಾನೆಯಾದ ಒಂದು ಮೂಟೆಯಲ್ಲಿ ಈ ರೀತಿಯ ಅಕ್ಕಿಯ ರೂಪದಲ್ಲಿರುವ ಮಣಿಗಳು ಪತ್ತೆಯಾಗಿದೆ. ಅಡುಗೆ ಸಿಬ್ಬಂದಿ ಸರಿಯಾಗಿ ಗಮನಿಸದೆ ಅಡುಗೆ ಮಾಡಿದ್ದಲ್ಲಿ ಅನಾಹುತ ನಡೆಯುವ ಸಾಧ್ಯತೆ ಇತ್ತು. ಮಡಿಕೇರಿಯ ಸರ್ಕಾರಿ ಫ್ರೌಡಶಾಲೆಯಲ್ಲಿ 200 ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದು ಬಹುತೇಕರು ಬಡವರ್ಗದ ಮಕ್ಕಳಾಗಿದ್ದಾರೆ. ಬಡ ಮಕ್ಕಳ ಬಿಸಿಯೂಟದ ಅಕ್ಕಿಯನ್ನೂ ಕೂಡ ಕಲಬೆರಕೆ ಮಾಡಿ ಸರಬರಾಜು ಮಾಡಿರುವ ಬಗ್ಗೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಳೆದೆರಡು ವಾರದ ಹಿಂದೆಯಷ್ಟೇ ಬಂದ ಅಕ್ಕಿಯ ಒಂದು ಚೀಲದಲ್ಲಿ ಈ ರೀತಿಯ ಮಣಿಗಳು ಪತ್ತೆಯಾಗಿದ್ದು ಶಾಲಾ ಆಡಳಿತ ಮಂಡಳಿ ಹಾಗೂ ಎಸ್ ಡಿಎಂಸಿ ಸದಸ್ಯರು ಅಧಿಕಾರಿಗಳ ಗಮನಕ್ಕೂ ತಂದಿದ್ದು ಸರಬರಾಜಾದ ಅಕ್ಕಿಯನ್ನ ಹಿಂದಿರುಗಿಸಲಾಗಿದೆ. ಮಕ್ಕಳಿಗೆ ಮಾತ್ರಲ್ಲ ಸರಬರಾಜಾಗುವ ಪಡಿತರವಲ್ಲದೆ ನ್ಯಾಯಬೆಲೆ ಅಂಗಡಿಗಳಿಗೂ ಈ ಅಕ್ಕಿ ಸರಬರಾಜಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಜಿಲ್ಲೆಗೆ ಬರುವ ಅಕ್ಕಿ ಬಹುತೇಕ ಹರಿಯಾಣದಿಂದ ಬರುತ್ತಿದೆ ಎನ್ನಲಾಗಿದೆ. ಹರಿಯಾಣ ಭಾಗದಿಂದ ಬಂದ ಅಕ್ಕಿಯನ್ನ ಮಡಿಕೇರಿಯ ಫುಡ್ ಸಪ್ಲೇ ಗೋಡಾನ್ ನಲ್ಲಿ ಶೇಖರಿಸಿಟ್ಟು ಅಲ್ಲಿಂದ ಎಲ್ಲಕಡೆಗಳಿಗೂ ಅಕ್ಕಿ ಸಪ್ಲೆ ಅಗುತ್ತದೆ. ಇನ್ನೂ ಘಟನೆ ಸಂಬಂಧ ಶಾಲೆಯ ಎಸ್.ಡಿ.ಎಂ.ಸಿ ಪ್ರಮುಖರು ಕೊಡಗು ಜಿಲ್ಲಾಧಿಕಾರಿಗಳ ಗಮನಕ್ಕೂ ತಂದಿದ್ದು ಅಕ್ಕಿ ಎಲ್ಲಿಂದ ಸಪ್ಲೆ ಆಗಿದೆಯೊ ಆ ಕಂಪೆನಿಯ ಪರವಾನಿಗೆ ರದ್ದುಗೊಳಿಸಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಎಸ್.ಡಿ.ಎಂ.ಸಿ ಆಡಳಿತ ಮಂಡಳಿಯ ಪ್ರಮುಖರು ಆಗ್ರಹಿಸಿದ್ದಾರೆ.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…
ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…
ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…
ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್ ಪೀಠದ ಕಡೆಗೆ ಪೇಪರ್ ಹರಿದು…
ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…