BREAKING NEWS

ಬಿಸಿಯೂಟಕ್ಕೆ ಬಂದ ಅಕ್ಕಿಯಲ್ಲಿ ಪ್ಲಾಸ್ಟಿಕ್:‌ ಪೋಷಕರ ಆಕ್ರೋಶ

ಮಡಿಕೇರಿ: ಶಾಲಾ ಮಕ್ಕಳ ಬಿಸಿಯೂಟಕ್ಕೆ ಸರಬರಾಜು ಆಗಬೇಕಿದ್ದ ಅಕ್ಕಿಯಲ್ಲಿ ಮಾತ್ರೆ ಗಾತ್ರದ ಪ್ಲಾಸ್ಟಿಕ್ ವಸ್ತು ಪತ್ತೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ.
ಮಡಿಕೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಫ್ರೌಡಶಾಲಾ ವಿಭಾಗದ ಮಕ್ಕಳ ದಾಸೋಹದ ಬಿಸಿಯೂಟಕ್ಕೆ ಸರಬರಾಜಾಗುವ ಅಕ್ಕಿಯಲ್ಲಿ ಪ್ಲಾಸ್ಟಿಕ್ ಮಣಿಯಂತ ವಸ್ತುಗಳು ಪತ್ತೆಯಾಗಿದ್ದು ಜಿಲ್ಲೆಯಲ್ಲಿನ ಶಾಲಾ ಆಡಳಿತ ಮಂಡಳಿಗಳಿಗೆ ಆತಂಕ ತಂದೊಡ್ಡಿದೆ. ಶಾಲಾ ಮಕ್ಕಳಿಗೆ ಬಿಸಿಯೂಟ ತಯಾರಿ ಮಾಡಲು ಮುಂದಾದ ಅಡುಗೆ ಸಿಬ್ಬಂದಿಗಳು ಅಕ್ಕಿಯನ್ನ ತೊಳೆಯುವ ಸಂಧರ್ಭದಲ್ಲಿ ಪ್ಲಾಸ್ಟಿಕ್ ನಂತ ಮಣಿಗಳು ನೀರಿನಲ್ಲಿ ತೇಲುತ್ತಿರುವುದನ್ನು ಕಂಡಿದ್ದಾರೆ. ತಕ್ಷಣವೇ ಎಚ್ಚೆತ್ತ ಅಡುಗೆ ಸಿಬ್ಬಂದಿ ಶಾಲೆಯ ಮುಖ್ಯಸ್ಥರ ಗಮನಕ್ಕೆ ತಂದಿದ್ದಾರೆ.
ಬಿಸಿಯೂಟಕ್ಕೆ ಸರಬರಾಜಾದ ಅಕ್ಕಿಯನ್ನ ಶಿಕ್ಷಕರು ಪರಿಶೀಲಿಸಿದಾಗ ಶಾಲೆಗೆ ರವಾನೆಯಾದ ಒಂದು ಮೂಟೆಯಲ್ಲಿ ಈ ರೀತಿಯ ಅಕ್ಕಿಯ ರೂಪದಲ್ಲಿರುವ ಮಣಿಗಳು ಪತ್ತೆಯಾಗಿದೆ. ಅಡುಗೆ ಸಿಬ್ಬಂದಿ ಸರಿಯಾಗಿ ಗಮನಿಸದೆ ಅಡುಗೆ ಮಾಡಿದ್ದಲ್ಲಿ ಅನಾಹುತ ನಡೆಯುವ ಸಾಧ್ಯತೆ ಇತ್ತು. ಮಡಿಕೇರಿಯ ಸರ್ಕಾರಿ ಫ್ರೌಡಶಾಲೆಯಲ್ಲಿ 200 ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದು ಬಹುತೇಕರು ಬಡವರ್ಗದ ಮಕ್ಕಳಾಗಿದ್ದಾರೆ. ಬಡ ಮಕ್ಕಳ ಬಿಸಿಯೂಟದ ಅಕ್ಕಿಯನ್ನೂ ಕೂಡ ಕಲಬೆರಕೆ ಮಾಡಿ ಸರಬರಾಜು ಮಾಡಿರುವ ಬಗ್ಗೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಳೆದೆರಡು ವಾರದ ಹಿಂದೆಯಷ್ಟೇ ಬಂದ ಅಕ್ಕಿಯ ಒಂದು ಚೀಲದಲ್ಲಿ ಈ ರೀತಿಯ ಮಣಿಗಳು ಪತ್ತೆಯಾಗಿದ್ದು ಶಾಲಾ ಆಡಳಿತ ಮಂಡಳಿ ಹಾಗೂ ಎಸ್‌ ಡಿಎಂಸಿ ಸದಸ್ಯರು ಅಧಿಕಾರಿಗಳ ಗಮನಕ್ಕೂ ತಂದಿದ್ದು ಸರಬರಾಜಾದ ಅಕ್ಕಿಯನ್ನ ಹಿಂದಿರುಗಿಸಲಾಗಿದೆ. ಮಕ್ಕಳಿಗೆ ಮಾತ್ರಲ್ಲ ಸರಬರಾಜಾಗುವ ಪಡಿತರವಲ್ಲದೆ ನ್ಯಾಯಬೆಲೆ ಅಂಗಡಿಗಳಿಗೂ ಈ ಅಕ್ಕಿ ಸರಬರಾಜಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಜಿಲ್ಲೆಗೆ ಬರುವ ಅಕ್ಕಿ ಬಹುತೇಕ ಹರಿಯಾಣದಿಂದ ಬರುತ್ತಿದೆ ಎನ್ನಲಾಗಿದೆ. ಹರಿಯಾಣ ಭಾಗದಿಂದ ಬಂದ ಅಕ್ಕಿಯನ್ನ ಮಡಿಕೇರಿಯ ಫುಡ್ ಸಪ್ಲೇ ಗೋಡಾನ್ ನಲ್ಲಿ ಶೇಖರಿಸಿಟ್ಟು ಅಲ್ಲಿಂದ ಎಲ್ಲಕಡೆಗಳಿಗೂ ಅಕ್ಕಿ ಸಪ್ಲೆ ಅಗುತ್ತದೆ. ಇನ್ನೂ ಘಟನೆ ಸಂಬಂಧ ಶಾಲೆಯ ಎಸ್.ಡಿ.ಎಂ.ಸಿ ಪ್ರಮುಖರು ಕೊಡಗು ಜಿಲ್ಲಾಧಿಕಾರಿಗಳ ಗಮನಕ್ಕೂ ತಂದಿದ್ದು ಅಕ್ಕಿ ಎಲ್ಲಿಂದ ಸಪ್ಲೆ ಆಗಿದೆಯೊ ಆ ಕಂಪೆನಿಯ ಪರವಾನಿಗೆ ರದ್ದುಗೊಳಿಸಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಎಸ್.ಡಿ.ಎಂ.ಸಿ ಆಡಳಿತ ಮಂಡಳಿಯ ಪ್ರಮುಖರು ಆಗ್ರಹಿಸಿದ್ದಾರೆ.

andolanait

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

2 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

4 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

12 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

12 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

12 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

12 hours ago