BREAKING NEWS

ಬಿಸಿಯೂಟಕ್ಕೆ ಬಂದ ಅಕ್ಕಿಯಲ್ಲಿ ಪ್ಲಾಸ್ಟಿಕ್:‌ ಪೋಷಕರ ಆಕ್ರೋಶ

ಮಡಿಕೇರಿ: ಶಾಲಾ ಮಕ್ಕಳ ಬಿಸಿಯೂಟಕ್ಕೆ ಸರಬರಾಜು ಆಗಬೇಕಿದ್ದ ಅಕ್ಕಿಯಲ್ಲಿ ಮಾತ್ರೆ ಗಾತ್ರದ ಪ್ಲಾಸ್ಟಿಕ್ ವಸ್ತು ಪತ್ತೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ.
ಮಡಿಕೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಫ್ರೌಡಶಾಲಾ ವಿಭಾಗದ ಮಕ್ಕಳ ದಾಸೋಹದ ಬಿಸಿಯೂಟಕ್ಕೆ ಸರಬರಾಜಾಗುವ ಅಕ್ಕಿಯಲ್ಲಿ ಪ್ಲಾಸ್ಟಿಕ್ ಮಣಿಯಂತ ವಸ್ತುಗಳು ಪತ್ತೆಯಾಗಿದ್ದು ಜಿಲ್ಲೆಯಲ್ಲಿನ ಶಾಲಾ ಆಡಳಿತ ಮಂಡಳಿಗಳಿಗೆ ಆತಂಕ ತಂದೊಡ್ಡಿದೆ. ಶಾಲಾ ಮಕ್ಕಳಿಗೆ ಬಿಸಿಯೂಟ ತಯಾರಿ ಮಾಡಲು ಮುಂದಾದ ಅಡುಗೆ ಸಿಬ್ಬಂದಿಗಳು ಅಕ್ಕಿಯನ್ನ ತೊಳೆಯುವ ಸಂಧರ್ಭದಲ್ಲಿ ಪ್ಲಾಸ್ಟಿಕ್ ನಂತ ಮಣಿಗಳು ನೀರಿನಲ್ಲಿ ತೇಲುತ್ತಿರುವುದನ್ನು ಕಂಡಿದ್ದಾರೆ. ತಕ್ಷಣವೇ ಎಚ್ಚೆತ್ತ ಅಡುಗೆ ಸಿಬ್ಬಂದಿ ಶಾಲೆಯ ಮುಖ್ಯಸ್ಥರ ಗಮನಕ್ಕೆ ತಂದಿದ್ದಾರೆ.
ಬಿಸಿಯೂಟಕ್ಕೆ ಸರಬರಾಜಾದ ಅಕ್ಕಿಯನ್ನ ಶಿಕ್ಷಕರು ಪರಿಶೀಲಿಸಿದಾಗ ಶಾಲೆಗೆ ರವಾನೆಯಾದ ಒಂದು ಮೂಟೆಯಲ್ಲಿ ಈ ರೀತಿಯ ಅಕ್ಕಿಯ ರೂಪದಲ್ಲಿರುವ ಮಣಿಗಳು ಪತ್ತೆಯಾಗಿದೆ. ಅಡುಗೆ ಸಿಬ್ಬಂದಿ ಸರಿಯಾಗಿ ಗಮನಿಸದೆ ಅಡುಗೆ ಮಾಡಿದ್ದಲ್ಲಿ ಅನಾಹುತ ನಡೆಯುವ ಸಾಧ್ಯತೆ ಇತ್ತು. ಮಡಿಕೇರಿಯ ಸರ್ಕಾರಿ ಫ್ರೌಡಶಾಲೆಯಲ್ಲಿ 200 ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದು ಬಹುತೇಕರು ಬಡವರ್ಗದ ಮಕ್ಕಳಾಗಿದ್ದಾರೆ. ಬಡ ಮಕ್ಕಳ ಬಿಸಿಯೂಟದ ಅಕ್ಕಿಯನ್ನೂ ಕೂಡ ಕಲಬೆರಕೆ ಮಾಡಿ ಸರಬರಾಜು ಮಾಡಿರುವ ಬಗ್ಗೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಳೆದೆರಡು ವಾರದ ಹಿಂದೆಯಷ್ಟೇ ಬಂದ ಅಕ್ಕಿಯ ಒಂದು ಚೀಲದಲ್ಲಿ ಈ ರೀತಿಯ ಮಣಿಗಳು ಪತ್ತೆಯಾಗಿದ್ದು ಶಾಲಾ ಆಡಳಿತ ಮಂಡಳಿ ಹಾಗೂ ಎಸ್‌ ಡಿಎಂಸಿ ಸದಸ್ಯರು ಅಧಿಕಾರಿಗಳ ಗಮನಕ್ಕೂ ತಂದಿದ್ದು ಸರಬರಾಜಾದ ಅಕ್ಕಿಯನ್ನ ಹಿಂದಿರುಗಿಸಲಾಗಿದೆ. ಮಕ್ಕಳಿಗೆ ಮಾತ್ರಲ್ಲ ಸರಬರಾಜಾಗುವ ಪಡಿತರವಲ್ಲದೆ ನ್ಯಾಯಬೆಲೆ ಅಂಗಡಿಗಳಿಗೂ ಈ ಅಕ್ಕಿ ಸರಬರಾಜಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಜಿಲ್ಲೆಗೆ ಬರುವ ಅಕ್ಕಿ ಬಹುತೇಕ ಹರಿಯಾಣದಿಂದ ಬರುತ್ತಿದೆ ಎನ್ನಲಾಗಿದೆ. ಹರಿಯಾಣ ಭಾಗದಿಂದ ಬಂದ ಅಕ್ಕಿಯನ್ನ ಮಡಿಕೇರಿಯ ಫುಡ್ ಸಪ್ಲೇ ಗೋಡಾನ್ ನಲ್ಲಿ ಶೇಖರಿಸಿಟ್ಟು ಅಲ್ಲಿಂದ ಎಲ್ಲಕಡೆಗಳಿಗೂ ಅಕ್ಕಿ ಸಪ್ಲೆ ಅಗುತ್ತದೆ. ಇನ್ನೂ ಘಟನೆ ಸಂಬಂಧ ಶಾಲೆಯ ಎಸ್.ಡಿ.ಎಂ.ಸಿ ಪ್ರಮುಖರು ಕೊಡಗು ಜಿಲ್ಲಾಧಿಕಾರಿಗಳ ಗಮನಕ್ಕೂ ತಂದಿದ್ದು ಅಕ್ಕಿ ಎಲ್ಲಿಂದ ಸಪ್ಲೆ ಆಗಿದೆಯೊ ಆ ಕಂಪೆನಿಯ ಪರವಾನಿಗೆ ರದ್ದುಗೊಳಿಸಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಎಸ್.ಡಿ.ಎಂ.ಸಿ ಆಡಳಿತ ಮಂಡಳಿಯ ಪ್ರಮುಖರು ಆಗ್ರಹಿಸಿದ್ದಾರೆ.

andolanait

Recent Posts

ಮಕ್ಕಳ ಸಂಕಷ್ಟಕ್ಕೆ ಎಣೆಯಿಲ್ಲ

ಚಿರಂಜೀವಿ ಸಿ. ಹುಲ್ಲಹಳ್ಳಿ  ಮೈಸೂರು: ಸಂಕಷ್ಟದಲ್ಲಿರುವ ಮಕ್ಕಳಿಗೆ ತುರ್ತು ನೆರವು ನೀಡುವ ‘ಮಕ್ಕಳ ಸಹಾಯವಾಣಿ-೧೦೯೮’ಕ್ಕೆ ಜಿಲ್ಲೆಯಲ್ಲಿ ದೂರುಗಳ ಸುರಿಮಳೆಯಾಗುತ್ತಿದೆ. ಕಳೆದ…

46 mins ago

ಬೀದಿ ನಾಯಿಗಳ ಹಾವಳಿ; ಬಸವಳಿದ ಜನತೆ

ಚನ್ನೇಶ ಬಿ.ಇದರಮನಿ ಮೈಸೂರಿನ ಶ್ರೀರಾಂಪುರದಲ್ಲಿ ಆವರಿಸಿರುವ ಶ್ವಾನ ಭೀತಿ ಐದಾರು ಜನರಿಗೆ ಕಚ್ಚಿರುವ ನಾಯಿಗಳು; ಜನರ ಮನವಿಗೆ ಸ್ಪಂದಿಸದ ನಗರಪಾಲಿಕೆ:…

55 mins ago

ದರೋಡೆಗೆ ಪ್ರಶಸ್ತವಾಯಿತೇ ಬೈಪಾಸ್?

ಹೇಮಂತ್‌ಕುಮಾರ್ ಮಂಡ್ಯ: ಭೀಕರ ಅಪಘಾತಗಳ ಹೆಚ್ಚಳದಿಂದ ಕುಖ್ಯಾತಿ ಪಡೆದಿದ್ದ ಬೆಂಗಳೂರು-ಮೈಸೂರು ಹೆದ್ದಾರಿ-ಸರ್ವಿಸ್ ರಸ್ತೆಯು ಈಗ ದರೋಡೆಕೋರರ ತಾಣವಾಗಿ ಬದಲಾಗುತ್ತಿರುವುದು ಕಾರು,…

1 hour ago

ಹನೂರು| ಮೇಕೆ ಮೇಲೆ ಚಿರತೆ ದಾಳಿ: ಸ್ಥಳೀಯರಲ್ಲಿ ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…

13 hours ago

ಮಲೆ ಮಹದೇಶ್ವರನ ಹುಂಡಿಯಲ್ಲಿ 2.16 ಕೋಟಿ ರೂ. ಸಂಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…

14 hours ago