BREAKING NEWS

ಎನ್‌ಡಿಎ ಸೇರಲು ಆರು ಲೋಕಸಭಾ ಸ್ಥಾನ, ಒಂದು ರಾಜ್ಯಸಭಾ ಸ್ಥಾನದ ಬೇಡಿಕೆಯಿಟ್ಟ ಚಿರಾಗ್

ಪಾಟ್ನಾ: ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಎಲ್‌ಜೆಪಿ(ರಾಮ್‌ವಿಲಾಸ್) ಮುಖ್ಯಸ್ಥ ಚಿರಾಗ್ ಪಾಸ್ವಾನ್‌ ಅವರಿಗೆ ಎನ್‌ಡಿಎ ಸಭೆಯಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಿದ ಎರಡು ದಿನಗಳ ನಂತರ, ತಮ್ಮ ಪಕ್ಷಕ್ಕೆ ಆರು ಲೋಕಸಭಾ ಸ್ಥಾನಗಳು ಮತ್ತು ಒಂದು ರಾಜ್ಯಸಭಾ ಸ್ಥಾನದ ಬೇಡಿಕೆಯನ್ನು ಬಿಜೆಪಿ ಒಪ್ಪಿಕೊಳ್ಳಬೇಕು ಎಂದು ಚಿರಾಗ್ ಒತ್ತಾಯಿಸಿದ್ದಾರೆ.

ಎಲ್‌ಜೆಪಿ(ರಾಮ್ ವಿಲಾಸ್) ಮುಖ್ಯಸ್ಥ ಚಿರಾಗ್ ಅವರು ತಮ್ಮ ಪಕ್ಷಕ್ಕೆ ಹಾಜಿಪುರ ಸೇರಿದಂತೆ ಆರು ಲೋಕಸಭಾ ಸ್ಥಾನಗಳು ಮತ್ತು ಒಂದು ರಾಜ್ಯಸಭಾ ಸ್ಥಾನವನ್ನು ನೀಡಬೇಕೆಂದು ಒತ್ತಾಯಿಸಿರುವುದಾಗಿ ಪಕ್ಷದ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

ಚಿರಾಗ್ ಅವರನ್ನು ಎನ್ ಡಿಎ ತೆಕ್ಕೆಗೆ ತರಲು ಬಿಜೆಪಿ ಯತ್ನಿಸುತ್ತಿದ್ದು, ಎಲ್‌ಜೆಪಿ (ರಾಮ್ ವಿಲಾಸ್) ಎನ್ ಡಿಎನ ಪ್ರಮುಖ ಮಿತ್ರ ಪಕ್ಷ ಎಂದು ಜೆಪಿ ನಡ್ಡಾ ಅವರು ಬಣ್ಣಿಸಿದ್ದಾರೆ. ಅಲ್ಲದೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರು ಎಲ್‌ಜೆಪಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದಾಗಿ ಹೇಳಿದ್ದಾರೆ.

ಚಿರಾಗ್ ಈಗಾಗಲೇ ಬಿಜೆಪಿ ನಾಯಕರ ಮುಂದೆ ತಮ್ಮ ಬೇಡಿಕೆಗಳನ್ನು ಇಟ್ಟಿದ್ದಾರೆ ಎಂದು ಮೂಲಗಳು ಹೇಳಿವೆ.

ಚಿರಾಗ್ ಅವರಿಗೆ ಕೇಂದ್ರ ಸಂಪುಟದಲ್ಲಿ ಸಚಿವ ಸ್ಥಾನ ನೀಡಲಾಗುವುದು ಎಂಬ ಊಹಾಪೋಹಗಳಿವೆ. ಆದರೆ ಈ ಬಗ್ಗೆ ಚಿರಾಗ್ ಅವರೇ ಅಂತಿಮ ನಿರ್ಧಾರ ತೆಗೆದುಕೊಳ್ಳಲು ಸಮಯ ತೆಗೆದುಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ರೈ ಅವರು ಶುಕ್ರವಾರ ಸಂಜೆ ಚಿರಾಗ್ ಅವರನ್ನು ಎರಡನೇ ಬಾರಿ ಭೇಟಿಯಾಗಿ ಕೇಂದ್ರದ ಎನ್‌ಡಿಎ ಸರ್ಕಾರಕ್ಕೆ ಸೇರುವಂತೆ ಆಹ್ವಾನಿಸಿದ್ದರು.

ಜುಲೈ 18 ರಂದು ನವದೆಹಲಿಯಲ್ಲಿ ಎನ್‌ಡಿಎ ಸಭೆ ನಡೆಯಲಿದೆ.

andolanait

Recent Posts

ಮಂಡ್ಯ | 60 ಲಕ್ಷ ಲಂಚಕ್ಕೆ ಬೇಡಿಕೆ ; ಅಬಕಾರಿ ಉಪ ಆಯುಕ್ತ ಅಮಾನತು

ಮಂಡ್ಯ : ಹೊಸದಾಗಿ ಬಾರ್ ಆರಂಭಿಸಲು ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಡಿ ಮಂಡ್ಯ ಅಬಕಾರಿ ಉಪ…

26 mins ago

ಮೈಸೂರಿನಲ್ಲಿ ಮತ್ತೆ ಡ್ರಗ್ಸ್‌ ಪತ್ತೆ ; ಮೂವರ ಬಂಧನ

ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್‌ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್‌ ಸಹ ಕಳವಳ…

34 mins ago

ಮೈ-ಬೆಂ ಹೆದ್ದಾರಿಯಲ್ಲಿ ಸುಲಿಗೆ,ದರೋಡೆ ; 34 ಪ್ರಕರಣಗಳಲ್ಲಿ 28 ಕೇಸ್‌ ಸಾಲ್ವ್‌!

ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ…

1 hour ago

ಮೂರು ಬಾಲಕಿಯರನ್ನು ಬಲಿ ಪಡೆದ ಆನ್‌ಲೈನ್‌ ಗೇಮ್‌ ; ಮಹಡಿಯಿಂದ ಹಾರಿ ಆತ್ಮಹತ್ಯೆ

ಗಾಜಿಯಾಬಾದ್ : ಆನ್‌ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…

2 hours ago

ಮಾ.18ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ : ಮೇ 8ರಂದು ಫಲಿತಾಂಶ ಪ್ರಕಟವಾಗುವ ಸಾಧ್ಯತೆ

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.…

3 hours ago

ಮೈಸೂರಿನ ಹೊರವಲಯದಲ್ಲಿ ಹುಲಿ ಸಂಚಾರ : ಮುಂದುವರೆದ ಕಾರ್ಯಾಚರಣೆ

ಮೈಸೂರು : ಬೋಗಾದಿಯ ಗದ್ದಿಗೆ ರಸ್ತೆಯಲ್ಲಿರುವ ಜೆಟ್ಟಿಹುಂಡಿ ಗ್ರಾಮದ ತೋಟವೊಂದರಲ್ಲಿ ಹುಲಿ ಸಂಚರಿಸುತ್ತಿರುವ ಬಗ್ಗೆ ಮಂಗಳವಾರ ರೈತರೊಬ್ಬರು ನೀಡಿದ ಮಾಹಿತಿ…

3 hours ago