ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ನಂತರ ಲೋಕ ಜನಶಕ್ತಿ ಪಕ್ಷದ(ರಾಮ್ ವಿಲಾಸ್) ನಾಯಕ ಚಿರಾಗ್ ಪಾಸ್ವಾನ್ ಅವರು ಸೋಮವಾರ ಸಂಜೆ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ(ಎನ್ಡಿಎ)ಗೆ ಸೇರ್ಪಡೆಗೊಂಡರು.
ಅಮಿತ್ ಶಾ ಮತ್ತು ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ ನಂತರ ಟ್ವೀಟ್ ಮಾಡಿದ ಚಿರಾಗ್, “ಮೈತ್ರಿಗೆ ಸಂಬಂಧಿಸಿದ ವಿಷಯದ ಬಗ್ಗೆ ದೆಹಲಿಯಲ್ಲಿ ದೇಶದ ಗೃಹ ಸಚಿ ಅಮಿತ್ ಶಾ ಅವರೊಂದಿಗೆ ಸಕಾರಾತ್ಮಕ ಚರ್ಚೆ ನಡೆಸಿದೆ” ಎಂದು ತಿಳಿಸಿದ್ದಾರೆ.
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ವಿರೋಧಿಸಿ 2020ರ ಬಿಹಾರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚಿರಾಗ್ ಪಾಸ್ವಾನ್ ಅವರು ಎನ್ಡಿಎದಿಂದ ಹೊರ ನಡೆದಿದ್ದರು. ಆದರೆ, ಪ್ರಮುಖ ವಿಷಯಗಳಲ್ಲಿ ಬಿಜೆಪಿಗೆ ಬೆಂಬಲ ನೀಡಿದ್ದರು.
ಚಿರಾಗ್ ಅವರನ್ನು ಮತ್ತೆ ಎನ್ ಡಿಎ ತೆಕ್ಕೆಗೆ ತರಲು ಬಿಜೆಪಿ ತೀವ್ರ ಪ್ರಯತ್ನ ನಡೆಸಿತ್ತು. ಸ್ವತಃ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರೇ ಚಿರಾಗ್ ಪಾಸ್ವಾನ್ ಅವರಿಗೆ ಪತ್ರ ಬರೆದು ಎನ್ ಡಿಎ ಸಭೆಗೆ ಆಹ್ವಾನ ನೀಡಿದ್ದರು ಮತ್ತು ಎಲ್ಜೆಪಿ (ರಾಮ್ ವಿಲಾಸ್) ಎನ್ ಡಿಎನ ಪ್ರಮುಖ ಮಿತ್ರ ಪಕ್ಷ ಎಂದು ಬಣ್ಣಿಸಿದ್ದರು.
ಅಲ್ಲದೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರು ಶುಕ್ರವಾರ ಸಂಜೆ ಚಿರಾಗ್ ಅವರನ್ನು ಎರಡನೇ ಬಾರಿ ಭೇಟಿಯಾಗಿ ಕೇಂದ್ರದ ಎನ್ಡಿಎ ಸರ್ಕಾರಕ್ಕೆ ಸೇರುವಂತೆ ಆಹ್ವಾನಿಸಿದ್ದರು.
ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…
ನವದೆಹಲಿ: ಬೈಸರನ್ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ…
ಪಿರಿಯಾಪಟ್ಟಣ: ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ…
ಶ್ರೀರಂಗಪಟ್ಟಣ: ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಅತ್ಯುತ್ತಮ ವೇದಿಕೆಯಾಗಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮಕ್ಕಳ ವ್ಯಕ್ತಿತ್ವ…
ತಿರುವನಂತಪುರಂ: ಕೇರಳದ ತ್ರಿಶೂರ್ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಆದಿಶಕ್ತಿ ಮಾರಮ್ಮ ಜಾತ್ರಾ…