ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ನಂತರ ಲೋಕ ಜನಶಕ್ತಿ ಪಕ್ಷದ(ರಾಮ್ ವಿಲಾಸ್) ನಾಯಕ ಚಿರಾಗ್ ಪಾಸ್ವಾನ್ ಅವರು ಸೋಮವಾರ ಸಂಜೆ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ(ಎನ್ಡಿಎ)ಗೆ ಸೇರ್ಪಡೆಗೊಂಡರು.
ಅಮಿತ್ ಶಾ ಮತ್ತು ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ ನಂತರ ಟ್ವೀಟ್ ಮಾಡಿದ ಚಿರಾಗ್, “ಮೈತ್ರಿಗೆ ಸಂಬಂಧಿಸಿದ ವಿಷಯದ ಬಗ್ಗೆ ದೆಹಲಿಯಲ್ಲಿ ದೇಶದ ಗೃಹ ಸಚಿ ಅಮಿತ್ ಶಾ ಅವರೊಂದಿಗೆ ಸಕಾರಾತ್ಮಕ ಚರ್ಚೆ ನಡೆಸಿದೆ” ಎಂದು ತಿಳಿಸಿದ್ದಾರೆ.
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ವಿರೋಧಿಸಿ 2020ರ ಬಿಹಾರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚಿರಾಗ್ ಪಾಸ್ವಾನ್ ಅವರು ಎನ್ಡಿಎದಿಂದ ಹೊರ ನಡೆದಿದ್ದರು. ಆದರೆ, ಪ್ರಮುಖ ವಿಷಯಗಳಲ್ಲಿ ಬಿಜೆಪಿಗೆ ಬೆಂಬಲ ನೀಡಿದ್ದರು.
ಚಿರಾಗ್ ಅವರನ್ನು ಮತ್ತೆ ಎನ್ ಡಿಎ ತೆಕ್ಕೆಗೆ ತರಲು ಬಿಜೆಪಿ ತೀವ್ರ ಪ್ರಯತ್ನ ನಡೆಸಿತ್ತು. ಸ್ವತಃ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರೇ ಚಿರಾಗ್ ಪಾಸ್ವಾನ್ ಅವರಿಗೆ ಪತ್ರ ಬರೆದು ಎನ್ ಡಿಎ ಸಭೆಗೆ ಆಹ್ವಾನ ನೀಡಿದ್ದರು ಮತ್ತು ಎಲ್ಜೆಪಿ (ರಾಮ್ ವಿಲಾಸ್) ಎನ್ ಡಿಎನ ಪ್ರಮುಖ ಮಿತ್ರ ಪಕ್ಷ ಎಂದು ಬಣ್ಣಿಸಿದ್ದರು.
ಅಲ್ಲದೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರು ಶುಕ್ರವಾರ ಸಂಜೆ ಚಿರಾಗ್ ಅವರನ್ನು ಎರಡನೇ ಬಾರಿ ಭೇಟಿಯಾಗಿ ಕೇಂದ್ರದ ಎನ್ಡಿಎ ಸರ್ಕಾರಕ್ಕೆ ಸೇರುವಂತೆ ಆಹ್ವಾನಿಸಿದ್ದರು.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…