BREAKING NEWS

ಜೆಡಿಎಸ್‌ ರಾಷ್ಟ್ರಾಧ್ಯಕ್ಷನಾಗಿ ಸಿ.ಕೆ.ನಾನು ನೇಮಕ: ಹೆಚ್‌ಡಿಡಿಗೆ ಸೆಡ್ಡು ಹೊಡೆದ ಇಬ್ರಾಹಿಂ

ಬೆಂಗಳೂರು: ಜೆ.ಡಿ.ಎಸ್. ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಸಿ.ಕೆ.ನಾನು ಆಯ್ಕೆ ಮಾಡಲಾಗಿದೆ. ಈ ಮೂಲಕ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡರಿಗೆ ಸಿ.ಎಂ ಇಬ್ರಾಹಿಂ ಸೆಡ್ಡು ಹೊಡೆದಿದ್ದಾರೆ.

ಇಂದು ಬೆಂಗಳೂರಿನ ಕಾಡುಕೊಂಡನಹಳ್ಳಿಯ ಖಾಸಗಿ ಸಭಾ ಭವನದಲ್ಲಿ ಮಹತ್ವದ ಜೆಡಿಎಸ್ ರಾಷ್ಟ್ರೀಯ ಸಭೆಯನ್ನು ಉಚ್ಚಾಟಿತ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ನೇತೃತ್ವದಲ್ಲಿ ನಡೆಸಲಾಯಿತು. ಈ ಸಭೆಯಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಕೇರಳದ ಸಿ.ಕೆ ನಾನು ಅವರನ್ನು ಆಯ್ಕೆ ಮಾಡಲಾಯಿತು. ಈ ಮೂಲಕ ದಳಪತಿಗಳಿಗೆ ಸಿಎಂ ಇಬ್ರಾಹಿಂ ಸೆಡ್ಡುಹೊಡೆದಿದ್ದಾರೆ.

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಸಿ.ಕೆ ನಾನು ಮಾತನಾಡಿ, ಜಾತ್ಯತೀತ ಗುಣವೇ ನಮ್ಮ‌ ಪಕ್ಷದ ಆತ್ಮವಿದ್ದಂತೆ. ಹೀಗಾಗಿ ಯಾರು ಏನೇ ಹೇಳಲಿ ನಾವು ಪಕ್ಷವನ್ನು ಬೇರೆಯವರಿಗೆ ಅಡ ಇಡುವುದಿಲ್ಲ ಮತ್ತು ಅದಕ್ಕೆ ಅವಕಾಶವನ್ನು ಕೊಡುವುದಿಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದರು.

ಹಿಂದಿನ ಸಭೆಗಳಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರೊಂದಿಗೆ ನಾನು ಭಾಗಿಯಾಗಿದ್ದೇನೆ. ನಾನು ಕಳೆದ ಅನೇಕ ವರ್ಷಗಳಿಂದ ಜನತಾ ದಳದಲ್ಲಿ ಇದ್ದೇನೆ. ಜನತಾ ದಳ ಜಾತ್ಯಾತೀತ ಸಿದ್ಧಾಂತದ ಮೇಲೆ ನಿಂತಿರುವ ಪಕ್ಷ. ಅದು ಮಹಾತ್ಮಾ ಗಾಂಧೀಜಿಯವರ ತತ್ವಗಳನ್ನು ಪಾಲಿಸುವ ಪಕ್ಷ. ಆದರೆ, ಗಾಂಧೀಜಿಯವರನ್ನು‌ ವಿರೋಧಿಸುವವರೊಂದಿಗೆ ಜೆಡಿಎಸ್ ಸಂಖ್ಯ ಬೆಳೆಸುವುದು ಸರಿಯೆ? ಎಂದು ನನ್ನನ್ನು ಜನತಾದಳದಿಂದ ಉಚ್ಚಾಟಿಸಿದ ದೇವೇಗೌಡರನ್ನು ಕೇಳ ಬಯಸುತ್ತೇನೆ ಎಂದರು.

ಮುಂದುವರೆದು ಮಾತನಾಡಿದ ಅವರು, ನೀವು ಪಕ್ಷದಲ್ಲಿನ ಇತರರ ಅಭಿಪ್ರಾಯಕ್ಕೆ ಮನ್ನಣೆ ಕೊಡದೇ ಬಿಜೆಪಿಯೊಂದಿಗೆ ಹೆಜ್ಜೆ ಹಾಕಿದರೆ ಇದನ್ನು ಪ್ರಶ್ನಿಸುವ ಅಧಿಕಾರ ಪಕ್ಷದಲ್ಲಿರುವ ನಾನೂ ಸೇರಿದಂತೆ ಇತರರಿಗೂ ಇದೆ ಎಂದರು.

ಗಾಂಧೀಜಿಯವರ ತತ್ವಗಳನ್ನು ಬಲಿಕೊಟ್ಟು ಬರೀ ಚುನಾವಣೆಯ ಗೆಲುವಿಗಾಗಿ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡ ಹೆಚ್.ಡಿ.ದೇವೇಗೌಡರ ವರ್ತನೆಯನ್ನು ಇಂದಿನ ಸಭೆಯಲ್ಲಿ ನಾವು ಖಂಡಿಸುತ್ತೇವೆ ಎಂದರು.

ಸಿ.ಕೆ.ನಾನು, ಗಾಂಧೀಜಿಯವರ ತತ್ವ ಸಿಂದ್ಧಾಗಳನ್ನು ಬಿಟ್ಟುಕೊಡದೇ ಅದೇ ಜಾತ್ಯತೀತ ಸಿದ್ಧಾಂತವನ್ನು ಮೈಗೂಡಿಸಿಕೊಂಡಿರುವ ನಮ್ಮ ನೇತೃತ್ವದ ಪಕ್ಷವೇ ನಿಜವಾದ ಜನತಾದಳ ಎಂದರು.

andolanait

Recent Posts

ಆಂಧ್ರದಲ್ಲಿ ಮತ್ತೆ ಕೋವಿಡ್‌ ಆತಂಕ: ಇಬ್ಬರು ಬಲಿ

ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್‌ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್‌ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್‌…

9 hours ago

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…

9 hours ago

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

11 hours ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

11 hours ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

11 hours ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

12 hours ago