BREAKING NEWS

ತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಕೇಸ್​ನಲ್ಲಿ ಕ್ಲೀನ್ ಚಿಟ್: ಈಶ್ವರಪ್ಪಗೆ ಬಿಗ್‌ ರಿಲೀಫ್‌

ಬೆಂಗಳೂರು: ಗುತ್ತಿಗೆದಾರ ಸಂತೋಷ್‌ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ರಿಲೀಫ್ ಸಿಕ್ಕಿದೆ. ಜನಪ್ರತಿನಿಧಿಗಳ ನ್ಯಾಯಾಲಯ ಬಿ ರಿಪೋರ್ಟ್ ಅಂಗೀಕರಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಅವರ ಮೇಲಿನ ಆರೋಪಕ್ಕೆ ಸೂಕ್ತ ಸಾಕ್ಷಾಧಾರಗಳು ಇಲ್ಲವೆಂದು ಬಿ ರಿಪೋರ್ಟ್​​ ಸಲ್ಲಿಕೆ ಮಾಡಿದ್ದರು.

ಗುತ್ತಿಗೆದಾರ ಸಂತೋಷ್​ ಆತ್ಮಹತ್ಯೆ

ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೆ.ಎಸ್‌. ಈಶ್ವರಪ್ಪ ಅವರು ಗ್ರಾಮೀಣ ಮತ್ತು ಪಂಚಾಯತ್‌ರಾಜ್‌ ಇಲಾಖೆ ಸಚಿವರಾಗಿದ್ದಾಗ ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ 2022ರ ಏಪ್ರಿಲ್ 12 ರಂದು ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಮಾಡಿಕೊಂಡಿದ್ದರು. ಮೃತ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಕಮೀಷನ್‌ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕೆಎಸ್​​ ಈಶ್ವರಪ್ಪ ಅವರ ವಿರುದ್ಧ ಆರೋಪ ಕೇಳಿಬಂದಿತ್ತು. ಇದು ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಈ ಬಳಿಕ ಕೆಎಸ್​ ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು.

ಪ್ರಕರಣದ ತನಿಖೆ ನಡೆಸಿದ್ದ ಉಡುಪಿ ಪೊಲೀಸರು ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಅವರ ಮೇಲಿನ ಆರೋಪಕ್ಕೆ ಸೂಕ್ತ ಸಾಕ್ಷಾಧಾರಗಳು ಇಲ್ಲವೆಂದು ಬಿ ರಿಪೋರ್ಟ್‌ ಸಲ್ಲಿಕೆ ಮಾಡಿದ್ದರು. ಈ ಬಿ ರಿಪೋರ್ಟ್ ಸಲ್ಲಿಕೆಯನ್ನು ಪ್ರಶ್ನಿಸಿ ಮೃತ ಗುತ್ತಿಗೆದಾರ ಸಂತೋಷ್ ಪಾಟೀಲ್ ಸಹೋದರ ಪ್ರಶಾಂತ್ ಪಾಟೀಲ್ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್​ ವಾದ-ಪ್ರತಿವಾದ ಆಲಿಸಿ ಇಂದು (ಜು.15) ಬಿ ರಿಪೋರ್ಟ್ ಅಂಗೀಕರಿಸಿದೆ.

andolanait

Recent Posts

ಓದುಗರ ಪತ್ರ: ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ

ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ನಿಗಮ (ಸೆಸ್ಕ್)ನಿಂದ ಅಂಡರ್ ಗ್ರೌಂಡ್ ಕೇಬಲ್…

4 hours ago

ಓದುಗರ ಪತ್ರ: ನ್ಯಾಯಾಂಗ ಬಡಾವಣೆಗೆ ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ರಾಜರಾಜೇಶ್ವರಿ ನಗರದ ಬಳಿಯ ನ್ಯಾಯಾಂಗ ಬಡಾವಣೆಯಲ್ಲಿ ಐದಕ್ಕೂ ಹೆಚ್ಚು ಸರ್ಕಾರಿ ವಸತಿನಿಲಯಗಳಿದ್ದು, ಬೆಳಿಗ್ಗೆ ಹಾಗೂ ಸಂಜೆ ಸಾಕಷ್ಟು ನಗರ…

4 hours ago

ಓದುಗರ ಪತ್ರ: ಮಹಾರಾಣಿ ಕಾಲೇಜು ಆವರಣದಲ್ಲಿನ ಕಸ ತೆರವುಗೊಳಿಸಿ

ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಆವರಣದಲ್ಲಿ ಪ್ಲಾಸ್ಟಿಕ್ ಬಾಟಲಿ, ಪ್ಲೇಟ್, ಚೀಲಗಳು ಹಾಗೂ ಮರದ ಎಲೆಗಳು ತುಂಬಿದ್ದು, ಅನೈರ್ಮಲ್ಯದ…

4 hours ago

ಓದುಗರ ಪತ್ರ: ಭರಚುಕ್ಕಿ ಜಲಪಾತ ಸಂಪರ್ಕ ರಸ್ತೆ ದುರಸ್ತಿ ಮಾಡಿ

ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನಲ್ಲಿರುವ ಭರಚುಕ್ಕಿ ಜಲಪಾತಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಗುಂಡಿಗಳಿಂದ ಕೂಡಿದ್ದು, ಹ್ಯಾಂಡ್ ಪೋಸ್ಟ್ ನಿಂದ ಶಿವನಸಮುದ್ರದ…

4 hours ago

ರೋಮಾಂಚನಕಾರಿ ಜಲ ಸಾಹಸ ಕ್ರೀಡೋತ್ಸವ…

ಚಾಮರಾಜನಗರ: ತಾಲ್ಲೂಕಿನ ಸುವರ್ಣಾವತಿ ಜಲಾಶಯದಲ್ಲಿ ಏರ್ಪಡಿಸಿರುವ ಎರಡು ದಿನಗಳ ‘ಜಿಲ್ಲಾ ಮಟ್ಟದ ಜಲ ಸಾಹಸ ಕ್ರೀಡೋತ್ಸವವನ್ನು’ ಜೆಟ್ ಸ್ಕೀ ಜಲ…

4 hours ago

ಸಂಘರ್ಷದ ಸಮಯದಲ್ಲಿ ಭಾರತೀಯ ಸೇನೆ ಅನಾಥ..!

ಚೀನಿ ಸೈನಿಕರು ಫಿರಂಗಿಗಳೊಂದಿಗೆ ಮುನ್ನುಗ್ಗುತ್ತಲೇ ಇದ್ದರು... ಉದ್ವಿಗ್ನ ಸನ್ನಿವೇಶದಲ್ಲಿ ರಕ್ಷಣಾ ಸಚಿವರಿಂದ ಸಿಗದ ಸ್ಪಷ್ಟ ಸಂದೇಶ ೨ ಗಂಟೆಗಳ ಕಾಲ…

4 hours ago