ಬೆಂಗಳೂರು: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ರಿಲೀಫ್ ಸಿಕ್ಕಿದೆ. ಜನಪ್ರತಿನಿಧಿಗಳ ನ್ಯಾಯಾಲಯ ಬಿ ರಿಪೋರ್ಟ್ ಅಂಗೀಕರಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರ ಮೇಲಿನ ಆರೋಪಕ್ಕೆ ಸೂಕ್ತ ಸಾಕ್ಷಾಧಾರಗಳು ಇಲ್ಲವೆಂದು ಬಿ ರಿಪೋರ್ಟ್ ಸಲ್ಲಿಕೆ ಮಾಡಿದ್ದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೆ.ಎಸ್. ಈಶ್ವರಪ್ಪ ಅವರು ಗ್ರಾಮೀಣ ಮತ್ತು ಪಂಚಾಯತ್ರಾಜ್ ಇಲಾಖೆ ಸಚಿವರಾಗಿದ್ದಾಗ ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ 2022ರ ಏಪ್ರಿಲ್ 12 ರಂದು ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಮೃತ ಗುತ್ತಿಗೆದಾರ ಸಂತೋಷ್ ಪಾಟೀಲ್ ಕಮೀಷನ್ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕೆಎಸ್ ಈಶ್ವರಪ್ಪ ಅವರ ವಿರುದ್ಧ ಆರೋಪ ಕೇಳಿಬಂದಿತ್ತು. ಇದು ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಈ ಬಳಿಕ ಕೆಎಸ್ ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು.
ಪ್ರಕರಣದ ತನಿಖೆ ನಡೆಸಿದ್ದ ಉಡುಪಿ ಪೊಲೀಸರು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರ ಮೇಲಿನ ಆರೋಪಕ್ಕೆ ಸೂಕ್ತ ಸಾಕ್ಷಾಧಾರಗಳು ಇಲ್ಲವೆಂದು ಬಿ ರಿಪೋರ್ಟ್ ಸಲ್ಲಿಕೆ ಮಾಡಿದ್ದರು. ಈ ಬಿ ರಿಪೋರ್ಟ್ ಸಲ್ಲಿಕೆಯನ್ನು ಪ್ರಶ್ನಿಸಿ ಮೃತ ಗುತ್ತಿಗೆದಾರ ಸಂತೋಷ್ ಪಾಟೀಲ್ ಸಹೋದರ ಪ್ರಶಾಂತ್ ಪಾಟೀಲ್ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ವಾದ-ಪ್ರತಿವಾದ ಆಲಿಸಿ ಇಂದು (ಜು.15) ಬಿ ರಿಪೋರ್ಟ್ ಅಂಗೀಕರಿಸಿದೆ.
ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…
ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…
ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್ಗಳ ಪ್ರವೇಶ್ ಪರೀಕ್ಷೆಯನ್ನು ಜೂನ್.14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…
ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…