ಬೆಂಗಳೂರು: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ರಿಲೀಫ್ ಸಿಕ್ಕಿದೆ. ಜನಪ್ರತಿನಿಧಿಗಳ ನ್ಯಾಯಾಲಯ ಬಿ ರಿಪೋರ್ಟ್ ಅಂಗೀಕರಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರ ಮೇಲಿನ ಆರೋಪಕ್ಕೆ ಸೂಕ್ತ ಸಾಕ್ಷಾಧಾರಗಳು ಇಲ್ಲವೆಂದು ಬಿ ರಿಪೋರ್ಟ್ ಸಲ್ಲಿಕೆ ಮಾಡಿದ್ದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೆ.ಎಸ್. ಈಶ್ವರಪ್ಪ ಅವರು ಗ್ರಾಮೀಣ ಮತ್ತು ಪಂಚಾಯತ್ರಾಜ್ ಇಲಾಖೆ ಸಚಿವರಾಗಿದ್ದಾಗ ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ 2022ರ ಏಪ್ರಿಲ್ 12 ರಂದು ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಮೃತ ಗುತ್ತಿಗೆದಾರ ಸಂತೋಷ್ ಪಾಟೀಲ್ ಕಮೀಷನ್ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕೆಎಸ್ ಈಶ್ವರಪ್ಪ ಅವರ ವಿರುದ್ಧ ಆರೋಪ ಕೇಳಿಬಂದಿತ್ತು. ಇದು ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಈ ಬಳಿಕ ಕೆಎಸ್ ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು.
ಪ್ರಕರಣದ ತನಿಖೆ ನಡೆಸಿದ್ದ ಉಡುಪಿ ಪೊಲೀಸರು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರ ಮೇಲಿನ ಆರೋಪಕ್ಕೆ ಸೂಕ್ತ ಸಾಕ್ಷಾಧಾರಗಳು ಇಲ್ಲವೆಂದು ಬಿ ರಿಪೋರ್ಟ್ ಸಲ್ಲಿಕೆ ಮಾಡಿದ್ದರು. ಈ ಬಿ ರಿಪೋರ್ಟ್ ಸಲ್ಲಿಕೆಯನ್ನು ಪ್ರಶ್ನಿಸಿ ಮೃತ ಗುತ್ತಿಗೆದಾರ ಸಂತೋಷ್ ಪಾಟೀಲ್ ಸಹೋದರ ಪ್ರಶಾಂತ್ ಪಾಟೀಲ್ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ವಾದ-ಪ್ರತಿವಾದ ಆಲಿಸಿ ಇಂದು (ಜು.15) ಬಿ ರಿಪೋರ್ಟ್ ಅಂಗೀಕರಿಸಿದೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…