BREAKING NEWS

ಸಿಕ್ಕಿಂನಲ್ಲಿ ಮೇಘಸ್ಫೋಟ : ಪ್ರವಾಹದಲ್ಲಿ 23 ಸೈನಿಕರು ನಾಪತ್ತೆ

ಗ್ಯಾಂಗ್ಟಾಕ್ : ಸಿಕ್ಕಿಂನ ಲೊನಾಕ್ ಸರೋವರದಲ್ಲಿ ಮೇಘಸ್ಫೋಟ ಉಂಟಾಗಿದ್ದು, ತೀಸ್ತಾ ನದಿಯಲ್ಲಿ ಹಠಾತ್ ಪ್ರವಾಹ ಉಂಟಾಗಿ 23 ಸೈನಿಕರು ನಾಪತ್ತೆಯಾಗಿದ್ದಾರೆ.

ಚುಂಗ್ಥಾಂಗ್ ಅಣೆಕಟ್ಟಿನಿಂದ ನೀರನ್ನು ಬಿಡುಗಡೆ ಮಾಡಿದ್ದರಿಂದ ನೀರಿನ ಮಟ್ಟ ಹಠಾತ್ತನೆ 15-20 ಅಡಿಗಳಷ್ಟು ಎತ್ತರಕ್ಕೆ ಏರಿದೆ. ಇದರಿಂದ ಸಿಂಗ್ಟಾಮ್ ಬಳಿಯ ಬರ್ದಂಗ್‌ನಲ್ಲಿ ನಿಲ್ಲಿಸಲಾಗಿದ್ದ ಸೇನಾ ವಾಹನಗಳು ಕೊಚ್ಚಿಕೊಂಡು ಹೋಗಿವೆ. ಈ ಹಿನ್ನೆಲೆ 23 ಸೇನಾ ಸಿಬ್ಬಂದಿ ಕಾಣೆಯಾಗಿದ್ದಾರೆ. ಇನ್ನೂ ಕೆಲವು ವಾಹನಗಳು ಮುಳುಗಿವೆ ಎಂದು ವರದಿಯಾಗಿದೆ.

ಹಠಾತ್ ಪ್ರವಾಹದಿಂದ ಲಾಚೆನ್ ಕಣಿವೆಯ ಉದ್ದಕ್ಕೂ ಹಲವಾರು ಸೇನಾ ಸಂಸ್ಥೆಗಳಿಗೆ ಹಾನಿಯಾಗಿದೆ. ಇದೀಗ ನಾಪತ್ತೆಯಾಗಿರುವ ಸಿಬ್ಬಂದಿಯ ಪತ್ತೆಗೆ ಶೋಧಕಾರ್ಯ ನಡೆಸಲಾಗುತ್ತಿದೆ.

ನದಿ ಉಕ್ಕಿ ಹರಿಯುತ್ತಿರುವುದರಿಂದ ತೀಸ್ತಾ ನದಿಯ ಮೇಲಿನ ಸಿಂಗ್‌ತಮ್ ಕಾಲು ಸೇತುವೆ ಕುಸಿದಿದೆ. ಪಶ್ಚಿಮ ಬಂಗಾಳದಿಂದ ಸಿಕ್ಕಿಂಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 10ರ ಹಲವು ಭಾಗಗಳು ಕೊಚ್ಚಿ ಹೋಗಿವೆ. ಭಾರೀ ಪ್ರವಾಹದ ಹಿನ್ನೆಲೆ ಅನೇಕ ರಸ್ತೆಗಳಲ್ಲಿ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಸಿಕ್ಕಿಂ ಸರ್ಕಾರ ರಾಜ್ಯದಲ್ಲಿ ಹೈ ಅಲರ್ಟ್ ಘೋಷಿಸಿದ್ದು, ತೀಸ್ತಾ ನದಿಯಿಂದ ಜನರನ್ನು ದೂರ ತೆರಳುವಂತೆ ಕೇಳಿಕೊಂಡಿದೆ. ಪಶ್ಚಿಮ ಬಂಗಾಳದ ಆಡಳಿತ ಮುನ್ನೆಚ್ಚರಿಕಾ ಕ್ರಮವಾಗಿ ಜಲಾನಯನ ಪ್ರದೇಶದಿಂದ ಜನರನ್ನು ಸ್ಥಳಾಂತರಿಸಲು ಪ್ರಾರಂಭಿಸಿದೆ.

 

lokesh

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

6 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

6 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

6 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

6 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

6 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

6 hours ago