BREAKING NEWS

ಸಿಕ್ಕಿಂನಲ್ಲಿ ಮೇಘಸ್ಫೋಟ : ಪ್ರವಾಹದಲ್ಲಿ 23 ಸೈನಿಕರು ನಾಪತ್ತೆ

ಗ್ಯಾಂಗ್ಟಾಕ್ : ಸಿಕ್ಕಿಂನ ಲೊನಾಕ್ ಸರೋವರದಲ್ಲಿ ಮೇಘಸ್ಫೋಟ ಉಂಟಾಗಿದ್ದು, ತೀಸ್ತಾ ನದಿಯಲ್ಲಿ ಹಠಾತ್ ಪ್ರವಾಹ ಉಂಟಾಗಿ 23 ಸೈನಿಕರು ನಾಪತ್ತೆಯಾಗಿದ್ದಾರೆ.

ಚುಂಗ್ಥಾಂಗ್ ಅಣೆಕಟ್ಟಿನಿಂದ ನೀರನ್ನು ಬಿಡುಗಡೆ ಮಾಡಿದ್ದರಿಂದ ನೀರಿನ ಮಟ್ಟ ಹಠಾತ್ತನೆ 15-20 ಅಡಿಗಳಷ್ಟು ಎತ್ತರಕ್ಕೆ ಏರಿದೆ. ಇದರಿಂದ ಸಿಂಗ್ಟಾಮ್ ಬಳಿಯ ಬರ್ದಂಗ್‌ನಲ್ಲಿ ನಿಲ್ಲಿಸಲಾಗಿದ್ದ ಸೇನಾ ವಾಹನಗಳು ಕೊಚ್ಚಿಕೊಂಡು ಹೋಗಿವೆ. ಈ ಹಿನ್ನೆಲೆ 23 ಸೇನಾ ಸಿಬ್ಬಂದಿ ಕಾಣೆಯಾಗಿದ್ದಾರೆ. ಇನ್ನೂ ಕೆಲವು ವಾಹನಗಳು ಮುಳುಗಿವೆ ಎಂದು ವರದಿಯಾಗಿದೆ.

ಹಠಾತ್ ಪ್ರವಾಹದಿಂದ ಲಾಚೆನ್ ಕಣಿವೆಯ ಉದ್ದಕ್ಕೂ ಹಲವಾರು ಸೇನಾ ಸಂಸ್ಥೆಗಳಿಗೆ ಹಾನಿಯಾಗಿದೆ. ಇದೀಗ ನಾಪತ್ತೆಯಾಗಿರುವ ಸಿಬ್ಬಂದಿಯ ಪತ್ತೆಗೆ ಶೋಧಕಾರ್ಯ ನಡೆಸಲಾಗುತ್ತಿದೆ.

ನದಿ ಉಕ್ಕಿ ಹರಿಯುತ್ತಿರುವುದರಿಂದ ತೀಸ್ತಾ ನದಿಯ ಮೇಲಿನ ಸಿಂಗ್‌ತಮ್ ಕಾಲು ಸೇತುವೆ ಕುಸಿದಿದೆ. ಪಶ್ಚಿಮ ಬಂಗಾಳದಿಂದ ಸಿಕ್ಕಿಂಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 10ರ ಹಲವು ಭಾಗಗಳು ಕೊಚ್ಚಿ ಹೋಗಿವೆ. ಭಾರೀ ಪ್ರವಾಹದ ಹಿನ್ನೆಲೆ ಅನೇಕ ರಸ್ತೆಗಳಲ್ಲಿ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಸಿಕ್ಕಿಂ ಸರ್ಕಾರ ರಾಜ್ಯದಲ್ಲಿ ಹೈ ಅಲರ್ಟ್ ಘೋಷಿಸಿದ್ದು, ತೀಸ್ತಾ ನದಿಯಿಂದ ಜನರನ್ನು ದೂರ ತೆರಳುವಂತೆ ಕೇಳಿಕೊಂಡಿದೆ. ಪಶ್ಚಿಮ ಬಂಗಾಳದ ಆಡಳಿತ ಮುನ್ನೆಚ್ಚರಿಕಾ ಕ್ರಮವಾಗಿ ಜಲಾನಯನ ಪ್ರದೇಶದಿಂದ ಜನರನ್ನು ಸ್ಥಳಾಂತರಿಸಲು ಪ್ರಾರಂಭಿಸಿದೆ.

 

lokesh

Recent Posts

ಪರಿಷತ್‌ ಚುನಾವಣೆಯಲ್ಲಿ ಕ್ರಾಸ್‌ ವೋಟ್‌ ಮಾಡಿದ ಶಾಸಕರು ಗೊತ್ತಿದೆ ; ಎಚ್‌.ಡಿ.ಕುಮಾರಸ್ವಾಮಿ

ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…

53 mins ago

ಮಂಡ್ಯ | ಐವರು ಅಂತರ್‌ ಜಿಲ್ಲಾ ಕಳ್ಳರ ಬಂಧನ

ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…

1 hour ago

ಜೂನ್‌ 21ರಂದು ನೀಟ್‌ ಮರುಪರೀಕ್ಷೆ ; ಮೈಸೂರು ಜಿಲ್ಲೆಯಲ್ಲಿ 7886 ಪರೀಕ್ಷಾರ್ಥಿಗಳ ನೋಂದಣಿ

ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…

2 hours ago

ನೀಟ್‌ಗಾಗಿ ಟೆಲಿಗ್ರಾಂ ನಿಷೇಧ ; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಕೋರ್ಟ್‌

ಹೊಸದಿಲ್ಲಿ : ನೀಟ್‌-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…

3 hours ago

ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ ; ಡಾ.ಎಚ್.ಸಿ.ಮಹದೇವಪ್ಪ

ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…

3 hours ago

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

11 hours ago