ಬೆಂಗಳೂರು: ಪತ್ರಕರ್ತ ವಿಶ್ವೇಶ್ವರ್ ಭಟ್ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಅವರು ಗೈರಾಗಿದ್ದು, ಅವರ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ.
ಮಹಿಳೆಯರ ಬಗ್ಗೆ ಕೀಳು ಅಭಿರುಚಿಯ ಬರೆಹ ಬರೆಯುವ ಪತ್ರಕರ್ತ ವಿಶ್ವೇಶ್ವರ್ ಭಟ್ ಅವರ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಭಾಗವಹಿಸಕೂಡದೆಂದು ಅವರ ಅಭಿಮಾನಿಗಳು ಹಾಗೂ ಹಿತೈಷಿಗಳು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭಿಸಿದ್ದರು. ಹಲವು ಮಹಿಳಾ ಪರ ಹೋರಾಟಗಾರ್ತಿಯರು, ಚಿಂತಕರು ಕೂಡಾ ಈ ಆಗ್ರಹಕ್ಕೆ ದನಿಗೂಡಿಸಿದ್ದರು.
ಇದೀಗ ಇಂದು ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಭಾಗವಹಿಸದಿರುವುದು ಈ ಅಭಿಯಾನದಲ್ಲಿ ತೊಡಗಿಸಿಕೊಂಡವರ ಸಂತಸಕ್ಕೆ ಕಾರಣವಾಗಿದೆ.
ಹಲವರು ಸಿದ್ದರಾಮಯ್ಯನವರಿಗೆ ಧನ್ಯವಾದಗಳನ್ನು ತಿಳಿಸಿದ್ದು, ತಮ್ಮ ಮನವಿಗೆ ಕಿವಿಯಾಗಿದ್ದಕ್ಕೆ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.
ಲೇಖಕ ಜಗದೀಶ್ ಕೊಪ್ಪಟವರು ಪ್ರತಿಕ್ರಿಯಿಸಿ, “ಸಿದ್ಧರಾಮಯ್ಯನವರೇ ನಿಮಗೆ ಧನ್ಯವಾದಗಳು. ನಮ್ಮಗಳ ನಿರೀಕ್ಷೆ ಮತ್ತು ನಂಬಿಕೆಗಳನ್ನು ನೀವು ದಾಟಲಿಲ್ಲ .ಮತ್ತು ಹುಸಿ ಮಾಡಲಿಲ್ಲ. ನೀವು ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಹೋಗದಿದ್ದುಕ್ಕೆ ಕೃತಜತೆಗಳು” ಎಂದು ತಿಳಿಸಿದ್ದಾರೆ.
“ತ್ಯಾಂಕ್ಯು ಸಿದ್ದರಾಮಯ್ಯ ಅವರೇ… ನಿಮ್ಮ ಮೇಲಿನ ಅಭಿಮಾನ ದುಪ್ಪಟ್ಟಾಯ್ತು..” ಎಂದು ಹರ್ಷಕುಮಾರ್ ಕುಗ್ವೆ ಬರೆದಿದ್ದಾರೆ.
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…