BREAKING NEWS

ಸಿಎಂ ಕುರ್ಚಿ ಕದನ ಅಂತ್ಯ : ಸಿದ್ದರಾಮಯ್ಯ ಸಿಎಂ, ಡಿಕೆ ಶಿವಕುಮಾರ್ ಡಿಸಿಎಂ

ನವದೆಹಲಿ : ಕರ್ನಾಟಕ ಸಿಎಂ ಕದನ ಅಂತ್ಯವಾಗಿದ್ದು 5ನೇ ದಿನ ಸಿಎಂ ಬಿಕ್ಕಟ್ಟಿಗೆ ಕಾಂಗ್ರೆಸ್‌ ಹೈಕಮಾಂಡ್‌ ತೆರೆ ಎಳೆದಿದೆ. ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರ ಮನವೊಲಿಕೆಯ ನಂತರ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲು ಡಿಕೆ ಶಿವಕುಮಾರ್‌ ಒಪ್ಪಿಗೆ ನೀಡಿದ್ದಾರೆ.

ಬುಧವಾರ ದಿನಪೂರ್ತಿ ಡಿಕೆಶಿ ಜೊತೆ ಮಾತುಕತೆ ನಡೆಸಿದರೂ ಯಾವುದೇ ಕಾರಣಕ್ಕೂ ತಮ್ಮ ಬೇಡಿಕೆಯಿಂದ ಹಿಂದಕ್ಕೆ ಸರಿದಿರಲಿಲ್ಲ. ತಡರಾತ್ರಿ ಶಿಮ್ಲಾದಲ್ಲಿರುವ ಸೋನಿಯಾ ಗಾಂಧಿ ದೂರವಾಣಿ ಮೂಲಕವೇ ಡಿಕೆಶಿಯನ್ನು ಒಪ್ಪಿಸುವಲ್ಲಿ ಯಶಸ್ವಿಯಾಗಿದ್ದು ಕುರ್ಚಿ ಕಾದಾಟಕ್ಕೆ ಬ್ರೇಕ್‌ ಬಿದ್ದಿದೆ.

ಮೊದಲ ಅವಧಿಗೆ ಸಿದ್ದರಾಮಯ್ಯ ಸಿಎಂ ಆಗಲಿದ್ದರೆ ಎರಡನೇ ಅವಧಿಗೆ ಡಿ.ಕೆ ಶಿವಕುಮಾರ್ ಸಿಎಂ ಪಟ್ಟ ಅಲಂಕರಿಸಲಿದ್ದಾರೆ. ಡಿಕೆ ಶಿವಕುಮಾರ್‌ ಡಿಸಿಎಂ, ಎರಡು ಪ್ರಬಲ ಖಾತೆಯನ್ನು ನೀಡುವುದಾಗಿ ಹೈಕಮಾಂಡ್‌ ಭರವಸೆ ನೀಡಿದೆ. ಅಷ್ಟೇ ಅಲ್ಲದೇ ಲೋಕಸಭಾ ಚುನಾವಣೆ ಮುಗಿಯುವರೆಗೂ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಇಂದು ಸಂಜೆ 7 ಗಂಟೆಗೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು ಈ ಸಭೆಯಲ್ಲಿ ಸಿಎಂ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಲಾಗುತ್ತದೆ.

ಕರ್ನಾಟಕದ ಜನರು ಕಾಂಗ್ರೆಸ್‍ಗೆ ಅತಿದೊಡ್ಡ ಸಂಖ್ಯೆ ನೀಡಿದ್ದಾರೆ. ಸಿಎಂ ಹುದ್ದೆಯ ಕಾದಾಟದಿಂದ ಪಕ್ಷಕ್ಕೆ ಡ್ಯಾಮೇಜ್‌ ಆಗುವುದು ಬೇಡ. ಈಗ ಒಮ್ಮೆ ಸಹಕರಿಸಿದರೆ ಭವಿಷ್ಯದಲ್ಲಿ ಸಿಎಂ ಸ್ಥಾನ ನೀಡಲಾಗುವುದು. ಪಕ್ಷಕ್ಕಾಗಿ ಮತ್ತೊಮ್ಮೆ ತ್ಯಾಗ ಮಾಡಲು ಸೋನಿಯಾ ಗಾಂಧಿ ಸೂಚಿಸಿದ್ದಾರೆ. ಸೋನಿಯಾ ಗಾಂಧಿ ನೀಡಿದ ಭರವಸೆ ಮೇಲೆ ಡಿಸಿಎಂ ಸ್ಥಾನಕ್ಕೆ ಡಿಕೆಶಿ ತೃಪ್ತರಾಗಿದ್ದಾರೆ.

lokesh

Recent Posts

ದಿಲ್ಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ 2026 : ಕೃಷಿ ಮತ್ತು ತಂತ್ರಜ್ಞಾನದ ಸಮಾಗಮ

ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…

2 hours ago

ಮ.ಬೆಟ್ಟ | ಪಾದಯಾತ್ರಿ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ ; ನಿಟ್ಟುಸಿರು ಬಿಟ್ಟ ಯಾತ್ರಾರ್ಥಿಗಳು

ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

3 hours ago

ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌ : 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಒಪ್ಪಿಗೆ!

ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…

4 hours ago

ಇವಿ ವಾಹನ ಸವಾರರಿಗೆ ಸಿಹಿ ಸುದ್ದಿ : ಮಂಡ್ಯದಲ್ಲಿ ಮೊದಲ ಇವಿ ಫಾಸ್ಟ್‌ ಚಾರ್ಜಿಂಗ್‌ ಕೇಂದ್ರ ಆರಂಭ

ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…

5 hours ago

ಜಾ.ದಳ ಓಡಿಸಲು ಚಲುವರಾಯಸ್ವಾಮಿಗೆ ಸಾಧ್ಯವೇ? : ಜೆಡಿಎಸ್‌ ನಾಯಕ ಸುರೇಶ್‌ ಗೌಡ ಪ್ರಶ್ನೆ

ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…

5 hours ago

ಜಮೀನು ಕಬಳಿಕೆ ಪ್ರಕರಣ | ಸಚಿವ ಚಲುವರಾಯಸ್ವಾಮಿಯೇ ನೇರ ಹೊಣೆ : ಸುರೇಶ್‌ಗೌಡ ಆರೋಪ

ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…

5 hours ago