BREAKING NEWS

ಸಿಎಂ ಕುರ್ಚಿ ಕದನ ಅಂತ್ಯ : ಸಿದ್ದರಾಮಯ್ಯ ಸಿಎಂ, ಡಿಕೆ ಶಿವಕುಮಾರ್ ಡಿಸಿಎಂ

ನವದೆಹಲಿ : ಕರ್ನಾಟಕ ಸಿಎಂ ಕದನ ಅಂತ್ಯವಾಗಿದ್ದು 5ನೇ ದಿನ ಸಿಎಂ ಬಿಕ್ಕಟ್ಟಿಗೆ ಕಾಂಗ್ರೆಸ್‌ ಹೈಕಮಾಂಡ್‌ ತೆರೆ ಎಳೆದಿದೆ. ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರ ಮನವೊಲಿಕೆಯ ನಂತರ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲು ಡಿಕೆ ಶಿವಕುಮಾರ್‌ ಒಪ್ಪಿಗೆ ನೀಡಿದ್ದಾರೆ.

ಬುಧವಾರ ದಿನಪೂರ್ತಿ ಡಿಕೆಶಿ ಜೊತೆ ಮಾತುಕತೆ ನಡೆಸಿದರೂ ಯಾವುದೇ ಕಾರಣಕ್ಕೂ ತಮ್ಮ ಬೇಡಿಕೆಯಿಂದ ಹಿಂದಕ್ಕೆ ಸರಿದಿರಲಿಲ್ಲ. ತಡರಾತ್ರಿ ಶಿಮ್ಲಾದಲ್ಲಿರುವ ಸೋನಿಯಾ ಗಾಂಧಿ ದೂರವಾಣಿ ಮೂಲಕವೇ ಡಿಕೆಶಿಯನ್ನು ಒಪ್ಪಿಸುವಲ್ಲಿ ಯಶಸ್ವಿಯಾಗಿದ್ದು ಕುರ್ಚಿ ಕಾದಾಟಕ್ಕೆ ಬ್ರೇಕ್‌ ಬಿದ್ದಿದೆ.

ಮೊದಲ ಅವಧಿಗೆ ಸಿದ್ದರಾಮಯ್ಯ ಸಿಎಂ ಆಗಲಿದ್ದರೆ ಎರಡನೇ ಅವಧಿಗೆ ಡಿ.ಕೆ ಶಿವಕುಮಾರ್ ಸಿಎಂ ಪಟ್ಟ ಅಲಂಕರಿಸಲಿದ್ದಾರೆ. ಡಿಕೆ ಶಿವಕುಮಾರ್‌ ಡಿಸಿಎಂ, ಎರಡು ಪ್ರಬಲ ಖಾತೆಯನ್ನು ನೀಡುವುದಾಗಿ ಹೈಕಮಾಂಡ್‌ ಭರವಸೆ ನೀಡಿದೆ. ಅಷ್ಟೇ ಅಲ್ಲದೇ ಲೋಕಸಭಾ ಚುನಾವಣೆ ಮುಗಿಯುವರೆಗೂ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಇಂದು ಸಂಜೆ 7 ಗಂಟೆಗೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು ಈ ಸಭೆಯಲ್ಲಿ ಸಿಎಂ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಲಾಗುತ್ತದೆ.

ಕರ್ನಾಟಕದ ಜನರು ಕಾಂಗ್ರೆಸ್‍ಗೆ ಅತಿದೊಡ್ಡ ಸಂಖ್ಯೆ ನೀಡಿದ್ದಾರೆ. ಸಿಎಂ ಹುದ್ದೆಯ ಕಾದಾಟದಿಂದ ಪಕ್ಷಕ್ಕೆ ಡ್ಯಾಮೇಜ್‌ ಆಗುವುದು ಬೇಡ. ಈಗ ಒಮ್ಮೆ ಸಹಕರಿಸಿದರೆ ಭವಿಷ್ಯದಲ್ಲಿ ಸಿಎಂ ಸ್ಥಾನ ನೀಡಲಾಗುವುದು. ಪಕ್ಷಕ್ಕಾಗಿ ಮತ್ತೊಮ್ಮೆ ತ್ಯಾಗ ಮಾಡಲು ಸೋನಿಯಾ ಗಾಂಧಿ ಸೂಚಿಸಿದ್ದಾರೆ. ಸೋನಿಯಾ ಗಾಂಧಿ ನೀಡಿದ ಭರವಸೆ ಮೇಲೆ ಡಿಸಿಎಂ ಸ್ಥಾನಕ್ಕೆ ಡಿಕೆಶಿ ತೃಪ್ತರಾಗಿದ್ದಾರೆ.

lokesh

Recent Posts

ಇಂಡೋನೇಷ್ಯಾದಲ್ಲಿ 7.7 ತೀವ್ರತೆಯ ಪ್ರಬಲ ಭೂಕಂಪ: ಮೃತರ ಸಂಖ್ಯೆ 40ಕ್ಕೆ ಏರಿಕೆ

ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್‌ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…

3 hours ago

ಅಯೋಧ್ಯೆ ರಾಮಮಂದಿರ ಅರ್ಚಕರಿಗೆ ಹೊಸ ಡ್ರೆಸ್ ಕೋಡ್‌

ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ಅರ್ಚಕರಿಗೆ ಹಳದಿ ರೇಷ್ಮೆ ಧೋತಿಯನ್ನು ಹೊಸ ಡ್ರೆಸ್‌ ಕೋಡ್‌ ಆಗಿ ಜಾರಿಗೆ ತರಲಾಗಿದೆ. ರಾಮನಂದಿ ಸಂಪ್ರದಾಯಕ್ಕೆ…

3 hours ago

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

13 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

17 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

18 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

19 hours ago