ನವದೆಹಲಿ : ಕರ್ನಾಟಕ ಸಿಎಂ ಕದನ ಅಂತ್ಯವಾಗಿದ್ದು 5ನೇ ದಿನ ಸಿಎಂ ಬಿಕ್ಕಟ್ಟಿಗೆ ಕಾಂಗ್ರೆಸ್ ಹೈಕಮಾಂಡ್ ತೆರೆ ಎಳೆದಿದೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಮನವೊಲಿಕೆಯ ನಂತರ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲು ಡಿಕೆ ಶಿವಕುಮಾರ್ ಒಪ್ಪಿಗೆ ನೀಡಿದ್ದಾರೆ.
ಬುಧವಾರ ದಿನಪೂರ್ತಿ ಡಿಕೆಶಿ ಜೊತೆ ಮಾತುಕತೆ ನಡೆಸಿದರೂ ಯಾವುದೇ ಕಾರಣಕ್ಕೂ ತಮ್ಮ ಬೇಡಿಕೆಯಿಂದ ಹಿಂದಕ್ಕೆ ಸರಿದಿರಲಿಲ್ಲ. ತಡರಾತ್ರಿ ಶಿಮ್ಲಾದಲ್ಲಿರುವ ಸೋನಿಯಾ ಗಾಂಧಿ ದೂರವಾಣಿ ಮೂಲಕವೇ ಡಿಕೆಶಿಯನ್ನು ಒಪ್ಪಿಸುವಲ್ಲಿ ಯಶಸ್ವಿಯಾಗಿದ್ದು ಕುರ್ಚಿ ಕಾದಾಟಕ್ಕೆ ಬ್ರೇಕ್ ಬಿದ್ದಿದೆ.
ಮೊದಲ ಅವಧಿಗೆ ಸಿದ್ದರಾಮಯ್ಯ ಸಿಎಂ ಆಗಲಿದ್ದರೆ ಎರಡನೇ ಅವಧಿಗೆ ಡಿ.ಕೆ ಶಿವಕುಮಾರ್ ಸಿಎಂ ಪಟ್ಟ ಅಲಂಕರಿಸಲಿದ್ದಾರೆ. ಡಿಕೆ ಶಿವಕುಮಾರ್ ಡಿಸಿಎಂ, ಎರಡು ಪ್ರಬಲ ಖಾತೆಯನ್ನು ನೀಡುವುದಾಗಿ ಹೈಕಮಾಂಡ್ ಭರವಸೆ ನೀಡಿದೆ. ಅಷ್ಟೇ ಅಲ್ಲದೇ ಲೋಕಸಭಾ ಚುನಾವಣೆ ಮುಗಿಯುವರೆಗೂ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಇಂದು ಸಂಜೆ 7 ಗಂಟೆಗೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು ಈ ಸಭೆಯಲ್ಲಿ ಸಿಎಂ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಲಾಗುತ್ತದೆ.
ಕರ್ನಾಟಕದ ಜನರು ಕಾಂಗ್ರೆಸ್ಗೆ ಅತಿದೊಡ್ಡ ಸಂಖ್ಯೆ ನೀಡಿದ್ದಾರೆ. ಸಿಎಂ ಹುದ್ದೆಯ ಕಾದಾಟದಿಂದ ಪಕ್ಷಕ್ಕೆ ಡ್ಯಾಮೇಜ್ ಆಗುವುದು ಬೇಡ. ಈಗ ಒಮ್ಮೆ ಸಹಕರಿಸಿದರೆ ಭವಿಷ್ಯದಲ್ಲಿ ಸಿಎಂ ಸ್ಥಾನ ನೀಡಲಾಗುವುದು. ಪಕ್ಷಕ್ಕಾಗಿ ಮತ್ತೊಮ್ಮೆ ತ್ಯಾಗ ಮಾಡಲು ಸೋನಿಯಾ ಗಾಂಧಿ ಸೂಚಿಸಿದ್ದಾರೆ. ಸೋನಿಯಾ ಗಾಂಧಿ ನೀಡಿದ ಭರವಸೆ ಮೇಲೆ ಡಿಸಿಎಂ ಸ್ಥಾನಕ್ಕೆ ಡಿಕೆಶಿ ತೃಪ್ತರಾಗಿದ್ದಾರೆ.
ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…
ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…
ದಿಸ್ಪುರ್: ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ…
ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ…
ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…