BREAKING NEWS

ಪಂಚರತ್ನ ರಥಯಾತ್ರೆಯ ಸಮಾರೋಪ ಸಮಾರಂಭಕ್ಕೆ ಆಗಮಿಸುವಂತೆ ಕೋರಿ ಪತ್ರ ಬರೆದ ಸಿ.ಎಂ.ಇಬ್ರಾಹಿಂ

ಬೆಂಗಳೂರು : ಮೈಸೂರಿನಲ್ಲಿ ಮಾ.26ರಂದು ನಡೆಯಲಿರುವ ಪಂಚರತ್ನ ರಥಯಾತ್ರೆಯ ಸಮಾರೋಪ ಸಮಾರಂಭಕ್ಕೆ ಕಾರ್ಯಕರ್ತರೊಂದಿಗೆ ಆಗಮಿಸುವಂತೆ ಪಕ್ಷದ ಜಿಲ್ಲಾಧ್ಯಕ್ಷರು, ಶಾಸಕರು, ಸಂಸದರು, ಮಾಜಿ ಸಚಿವರು, ಮುಖಂಡರಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಪತ್ರ ಬರೆದಿದ್ದಾರೆ.
ಮೈಸೂರಿನ ವರ್ತುಲ ರಸ್ತೆ ಬಳಿ ಜ್ವಾಲಾಮುಖಿ ತ್ರಿಪುರಸುಂದರಿಯಮ್ಮ ದೇವಸ್ಥಾನ ಪಕ್ಕದ ಮೈದಾನದಲ್ಲಿ ಪಕ್ಷದ ಪಂಚರತ್ನ ಸಮಾರೋಪ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಸಮಾವೇಶಕ್ಕೆ ತಮ್ಮ ಜಿಲ್ಲೆಯ ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ಆಗಮಿಸಿ ಸಮಾವೇಶವನ್ನು ಯಶಸ್ವಿಗೊಳಸಲು ಕೋರಿ ಅವರುಸಿ.ಎಂ.ಇಬ್ರಾಹಿಂ ಪತ್ರ ಬರೆದಿದ್ದಾರೆ.

ಈ ಸಮಾವೇಶದಲ್ಲಿ ಮಾಜಿ ಪ್ರಧಾನ ಮಂತ್ರಿ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡರು ಉಪಸ್ಥಿತರಿದ್ದು, ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಕುಮಾರಸ್ವಾಮಿ, ಪಕ್ಷದ ಮುಖಂಡರುಗಳು, ಹಾಲಿ ಹಾಗೂ ಮಾಜಿ ಲೋಕಸಭಾ ಸದಸ್ಯರು, ರಾಜ್ಯಸಭಾ ಸದಸ್ಯರು, ಮಾಜಿ ಸಚಿವರು, ಹಾಲಿ ಹಾಗೂ ಮಾಜಿ ವಿಧಾನಸಭೆ ಮತ್ತು ವಿಧಾನ ಪರಿಷತ್ತು ಸದಸ್ಯರುಗಳು,ಜಿಲ್ಲಾಧ್ಯಕ್ಷರುಗಳು,ಮುಂದಿನ ವಿಧಾನಸಭಾ ಚುನಾವಣೆಯ ಪಕ್ಷದ ಅಭ್ಯರ್ಥಿಗಳು, ರಾಜ್ಯ ಪದಾಕಾರಿಗಳು, ವಿವಿಧ ವಿಭಾಗಗಳ ಅಧ್ಯಕ್ಷರು, ನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ತಾಲ್ಲೂಕು, ಜಿಲ್ಲಾ ಪಂಚಾಯತಿ ಹಾಲಿ ಹಾಗೂ ಮಾಜಿ ಸದಸ್ಯರು, ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

lokesh

Recent Posts

ಕಳಪೆ ಪ್ರಗತಿ ಸಾಧಿಸಿದ 5 ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್ ನೀಡಿದ ಸಿಇಒ ನಂದಿನಿ

ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…

7 hours ago

ಅಕ್ರಮ ನಾಟ ಸಾಗಾಟ : ಲಾರಿ ಸಮೇತ ಮೂವರ ಬಂಧನ

ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…

7 hours ago

ಡೆವಿಲ್‌ ಅಬ್ಬರ | ಮೊದಲ ದಿನದ ಗಳಿಗೆ ಎಷ್ಟು?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…

7 hours ago

ಮಳವಳ್ಳಿ | ವಿದ್ಯುತ್‌ ಸ್ಪರ್ಶ ; ಕಾರ್ಮಿಕ ಸಾವು

ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…

7 hours ago

2027ರ ಜನಗಣತಿ | 11,718 ಕೋಟಿ ನೀಡಲು ಕೇಂದ್ರ ಸಂಪುಟ ಅನುಮೋದನೆ

ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…

7 hours ago

ಇಂಡಿಗೋ ಬಿಕ್ಕಟ್ಟು | ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳ ಅಮಾನತ್ತು

ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…

8 hours ago