ಬೆಂಗಳೂರು : ಮೈಸೂರಿನಲ್ಲಿ ಮಾ.26ರಂದು ನಡೆಯಲಿರುವ ಪಂಚರತ್ನ ರಥಯಾತ್ರೆಯ ಸಮಾರೋಪ ಸಮಾರಂಭಕ್ಕೆ ಕಾರ್ಯಕರ್ತರೊಂದಿಗೆ ಆಗಮಿಸುವಂತೆ ಪಕ್ಷದ ಜಿಲ್ಲಾಧ್ಯಕ್ಷರು, ಶಾಸಕರು, ಸಂಸದರು, ಮಾಜಿ ಸಚಿವರು, ಮುಖಂಡರಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಪತ್ರ ಬರೆದಿದ್ದಾರೆ.
ಮೈಸೂರಿನ ವರ್ತುಲ ರಸ್ತೆ ಬಳಿ ಜ್ವಾಲಾಮುಖಿ ತ್ರಿಪುರಸುಂದರಿಯಮ್ಮ ದೇವಸ್ಥಾನ ಪಕ್ಕದ ಮೈದಾನದಲ್ಲಿ ಪಕ್ಷದ ಪಂಚರತ್ನ ಸಮಾರೋಪ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಸಮಾವೇಶಕ್ಕೆ ತಮ್ಮ ಜಿಲ್ಲೆಯ ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ಆಗಮಿಸಿ ಸಮಾವೇಶವನ್ನು ಯಶಸ್ವಿಗೊಳಸಲು ಕೋರಿ ಅವರುಸಿ.ಎಂ.ಇಬ್ರಾಹಿಂ ಪತ್ರ ಬರೆದಿದ್ದಾರೆ.
ಈ ಸಮಾವೇಶದಲ್ಲಿ ಮಾಜಿ ಪ್ರಧಾನ ಮಂತ್ರಿ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡರು ಉಪಸ್ಥಿತರಿದ್ದು, ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಕುಮಾರಸ್ವಾಮಿ, ಪಕ್ಷದ ಮುಖಂಡರುಗಳು, ಹಾಲಿ ಹಾಗೂ ಮಾಜಿ ಲೋಕಸಭಾ ಸದಸ್ಯರು, ರಾಜ್ಯಸಭಾ ಸದಸ್ಯರು, ಮಾಜಿ ಸಚಿವರು, ಹಾಲಿ ಹಾಗೂ ಮಾಜಿ ವಿಧಾನಸಭೆ ಮತ್ತು ವಿಧಾನ ಪರಿಷತ್ತು ಸದಸ್ಯರುಗಳು,ಜಿಲ್ಲಾಧ್ಯಕ್ಷರುಗಳು,ಮುಂದಿನ ವಿಧಾನಸಭಾ ಚುನಾವಣೆಯ ಪಕ್ಷದ ಅಭ್ಯರ್ಥಿಗಳು, ರಾಜ್ಯ ಪದಾಕಾರಿಗಳು, ವಿವಿಧ ವಿಭಾಗಗಳ ಅಧ್ಯಕ್ಷರು, ನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ತಾಲ್ಲೂಕು, ಜಿಲ್ಲಾ ಪಂಚಾಯತಿ ಹಾಲಿ ಹಾಗೂ ಮಾಜಿ ಸದಸ್ಯರು, ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರು: ಉಗಾಂಡಾದಿಂದ ಬಂದಿದ್ದ ಮಹಿಳೆಯಲ್ಲಿ ಎಬೋಲಾ ಸೋಂಕಿನ ಲಕ್ಷಣಗಳು ಪತ್ತೆಯಾಗಿದ್ದು, ಆಕೆಯನ್ನು ಪ್ರತ್ಯೇಕ ವಾರ್ಡ್ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ದೃಢೀಕರಣಕ್ಕಾಗಿ…
ತಿರುವನಂತಪುರ: ಸಿಎಂಆರ್ಎಲ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಇಂದು ಕೇರಳದ ಮಾಜಿ ಸಿಎಂ…
ಬೆಂಗಳೂರು: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳು ದಟ್ಟವಾಗಿವೆ. ಮೇ.29ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುವ…
ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…
ಬ್ಯೂಟಿ ಪಾರ್ಲರ್ಗಳನ್ನು ತೆರೆದು ಅದರಿಂದ ಬದುಕು ನಡೆಸಲು ತರಬೇತಿ ೨೦೧೪ರಲ್ಲಿ ದೆಹಲಿಯ ಅಂಶು ರಜಪೂತ್ ೧೫ ವರ್ಷದವಳಾಗಿದ್ದಾಗ ಎಂದಿನಂತೆ ತನ್ನ…
ಎಸ್.ಸಿ. ದಿನೇಶ್ ಕುಮಾರ್, ಹಿರಿಯ ಪತ್ರಕರ್ತರು ಕಾಕ್ರೋಚ್ ಜನತಾ ಪಾರ್ಟಿ ನಮ್ಮ ದೇಶದ ಯುವಜನರ ಹತಾಶೆ, ಸಿಟ್ಟು, ಆಕ್ರೋಶಕ್ಕೆ ಹಿಡಿದ…