BREAKING NEWS

ಪಂಚರತ್ನ ರಥಯಾತ್ರೆಯ ಸಮಾರೋಪ ಸಮಾರಂಭಕ್ಕೆ ಆಗಮಿಸುವಂತೆ ಕೋರಿ ಪತ್ರ ಬರೆದ ಸಿ.ಎಂ.ಇಬ್ರಾಹಿಂ

ಬೆಂಗಳೂರು : ಮೈಸೂರಿನಲ್ಲಿ ಮಾ.26ರಂದು ನಡೆಯಲಿರುವ ಪಂಚರತ್ನ ರಥಯಾತ್ರೆಯ ಸಮಾರೋಪ ಸಮಾರಂಭಕ್ಕೆ ಕಾರ್ಯಕರ್ತರೊಂದಿಗೆ ಆಗಮಿಸುವಂತೆ ಪಕ್ಷದ ಜಿಲ್ಲಾಧ್ಯಕ್ಷರು, ಶಾಸಕರು, ಸಂಸದರು, ಮಾಜಿ ಸಚಿವರು, ಮುಖಂಡರಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಪತ್ರ ಬರೆದಿದ್ದಾರೆ.
ಮೈಸೂರಿನ ವರ್ತುಲ ರಸ್ತೆ ಬಳಿ ಜ್ವಾಲಾಮುಖಿ ತ್ರಿಪುರಸುಂದರಿಯಮ್ಮ ದೇವಸ್ಥಾನ ಪಕ್ಕದ ಮೈದಾನದಲ್ಲಿ ಪಕ್ಷದ ಪಂಚರತ್ನ ಸಮಾರೋಪ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಸಮಾವೇಶಕ್ಕೆ ತಮ್ಮ ಜಿಲ್ಲೆಯ ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ಆಗಮಿಸಿ ಸಮಾವೇಶವನ್ನು ಯಶಸ್ವಿಗೊಳಸಲು ಕೋರಿ ಅವರುಸಿ.ಎಂ.ಇಬ್ರಾಹಿಂ ಪತ್ರ ಬರೆದಿದ್ದಾರೆ.

ಈ ಸಮಾವೇಶದಲ್ಲಿ ಮಾಜಿ ಪ್ರಧಾನ ಮಂತ್ರಿ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡರು ಉಪಸ್ಥಿತರಿದ್ದು, ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಕುಮಾರಸ್ವಾಮಿ, ಪಕ್ಷದ ಮುಖಂಡರುಗಳು, ಹಾಲಿ ಹಾಗೂ ಮಾಜಿ ಲೋಕಸಭಾ ಸದಸ್ಯರು, ರಾಜ್ಯಸಭಾ ಸದಸ್ಯರು, ಮಾಜಿ ಸಚಿವರು, ಹಾಲಿ ಹಾಗೂ ಮಾಜಿ ವಿಧಾನಸಭೆ ಮತ್ತು ವಿಧಾನ ಪರಿಷತ್ತು ಸದಸ್ಯರುಗಳು,ಜಿಲ್ಲಾಧ್ಯಕ್ಷರುಗಳು,ಮುಂದಿನ ವಿಧಾನಸಭಾ ಚುನಾವಣೆಯ ಪಕ್ಷದ ಅಭ್ಯರ್ಥಿಗಳು, ರಾಜ್ಯ ಪದಾಕಾರಿಗಳು, ವಿವಿಧ ವಿಭಾಗಗಳ ಅಧ್ಯಕ್ಷರು, ನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ತಾಲ್ಲೂಕು, ಜಿಲ್ಲಾ ಪಂಚಾಯತಿ ಹಾಲಿ ಹಾಗೂ ಮಾಜಿ ಸದಸ್ಯರು, ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

lokesh

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

6 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

6 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

6 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

9 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

9 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

9 hours ago