BREAKING NEWS

ಮಣಿಪುರದ ಕ್ರೀಡಾಪಟುಗಳನ್ನು ತಮಿಳುನಾಡಿಗೆ ಆಹ್ವಾನಿಸಿದ ಸಿಎಂ ಎಂಕೆ ಸ್ಟಾಲಿನ್

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಭಾನುವಾರ ಹಿಂಸಾಚಾರ ಪೀಡಿತ ಮಣಿಪುರದ ಕ್ರೀಡಾಪಟುಗಳನ್ನು ಆಹ್ವಾನಿಸಿದ್ದು, ರಾಜ್ಯದಲ್ಲಿಯೇ ಅವರಿಗೆ ತರಬೇತಿ ನೀಡುವುದಾಗಿ ತಿಳಿಸಿದ್ದಾರೆ.

ಅಲ್ಲದೆ, ಅವರ ಮಗ ಮತ್ತು ಕ್ರೀಡಾ ಸಚಿವ ಉದಯನಿಧಿ ಈ ಸಂಬಂಧ ಮಣಿಪುರದ ಕ್ರೀಡಾಪಟುಗಳಿಗೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸುವ ಭರವಸೆ ನೀಡಿರುವುದಾಗಿ ತಿಳಿಸಿದ್ದಾರೆ.

ಖೇಲೋ ಇಂಡಿಯಾ ಮತ್ತು ಏಷ್ಯನ್ ಗೇಮ್ಸ್‌ನಂತಹ ಕ್ರೀಡಾಕೂಟಗಳಿಗೆ ತರಬೇತಿ ನೀಡಲು ಮಣಿಪುರದ ಸದ್ಯದ ಪರಿಸ್ಥಿತಿ ಅಲ್ಲಿನ ಕ್ರೀಡಾಪಟುಗಳಿಗೆ ಅನುಕೂಲಕರವಾಗಿಲ್ಲ ಎಂದು ಸ್ಟಾಲಿನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

‘ಮಣಿಪುರದ ಕ್ರೀಡಾ ಪಟುಗಳಿಗೆ ತಮಿಳುನಾಡಿನಲ್ಲಿಯೇ ವ್ಯವಸ್ಥೆ ಕಲ್ಪಿಸುವಂತೆ ಯುವ ಕಲ್ಯಾಣ ಮತ್ತು ಕ್ರೀಡಾ ಅಭಿವೃದ್ಧಿ ಸಚಿವ ಉದಯನಿಧಿ ಸ್ಟಾಲಿನ್ ಅವರಿಗೆ ಸೂಚಿಸಿದ್ದೇನೆ. ಕ್ರೀಡಾ ಇಲಾಖೆಯ ಪರವಾಗಿ ‘ಉತ್ತಮ ಗುಣಮಟ್ಟದ’ ಸೌಲಭ್ಯಗಳನ್ನು ಒದಗಿಸುವುದಾಗಿ ಉದಯನಿಧಿ ಭರವಸೆ ನೀಡಿದ್ದಾರೆ’ ಎಂದು ತಿಳಿಸಿದ್ದಾರೆ.

2024ರ ಆವೃತ್ತಿಯ ಖೇಲೋ ಇಂಡಿಯಾ ಗೇಮ್ಸ್‌ಗೆ ತಮಿಳುನಾಡು ಈ ಭಾರಿ ಆತಿಥ್ಯ ವಹಿಸಲಿದೆ.

‘ಮಣಿಪುರ ರಾಜ್ಯವು ಕ್ರೀಡಾ ರಂಗಕ್ಕೆ ‘ಚಾಂಪಿಯನ್‌ಗಳನ್ನು, ವಿಶೇಷವಾಗಿ ಮಹಿಳಾ ಚಾಂಪಿಯನ್‌ಗಳನ್ನು’ ನೀಡುವಲ್ಲಿ ಹೆಸರುವಾಸಿಯಾಗಿದೆ. ಸದ್ಯದ ಮಣಿಪುರದಲ್ಲಿನ ಪರಿಸ್ಥಿತಿ ಬಗ್ಗೆ ತಮಿಳುನಾಡು ರಾಜ್ಯ ‘ಆಳವಾದ ದುಃಖ’ ವ್ಯಕ್ತಪಡಿಸಿದೆ. ಪರಿಸ್ಥಿತಿ ತಿಳಿಯಾಗಲೆಂದು ಎದುರು ನೋಡುತ್ತಿದೆ’ ಎಂದು ಸ್ಟಾಲಿನ್ ಹೇಳಿದರು.

ಎಮ್‌ಸಿ ಮೇರಿ ಕೋಮ್, ಕುಂಜರಾಣಿ ದೇವಿ, ಮೀರಾಬಾಯಿ ಚಾನು, ಖುಮುಚ್ಚಮ್ ಸಂಜಿತಾ ಚಾನು, ಟಿಂಗೊನ್ಲೀಮಾ ಚಾನು ಮತ್ತು ಅನೇಕ ವರ್ಷಗಳಿಂದ ಹಲವಾರು ಶ್ರೇಷ್ಠ ಕ್ರೀಡಾಪಟುಗಳು ಮಣಿಪುರದಿಂದಲೇ ಬಂದವರಾಗಿದ್ದಾರೆ.

‘ತಮಿಳು ಸಂಸ್ಕೃತಿ ಪ್ರೀತಿ ಮತ್ತು ಕಾಳಜಿಯಿಂದ ಬದುಕುತ್ತಿದೆ ಎಂದು ಹೇಳಿದ ಸಿಎಂ, ‘ಎಲ್ಲವೂ ನನ್ನದು, ಎಲ್ಲ ಜನರು ನನ್ನ ಸಂಬಂಧಿಕರು’ ಎಂಬ ಮಾತಿನಂತೆ ನಡೆದುಕೊಳ್ಳುತ್ತಿದೆ ಎಂದು ಅವರು ಹೇಳಿದರು.

ಈ ಪ್ರಯೋಜನವನ್ನು ಪಡೆಯಲು ಇಚ್ಛಿಸುವವ ಮಣಿಪುರದ ಕ್ರೀಡಾಪಟುಗಳು +91-8925903047 ಅನ್ನು ಸಂಪರ್ಕಿಸಬಹುದು ಅಥವಾ ID ಪುರಾವೆ ಮತ್ತು ತರಬೇತಿ ಅಗತ್ಯತೆಗಳು ಸೇರಿದಂತೆ ವಿವರಗಳನ್ನು sportstn2023@gmail.com ಗೆ ಇಮೇಲ್ ಮಾಡಬಹುದು.

andolanait

Recent Posts

ಸಿಎಂ ಹಾಗೂ ಡಿಸಿಎಂ ಒಪ್ಪಂದದ ಬಗ್ಗೆ ಗೊತ್ತಿಲ್ಲ, ಹೈಕಮಾಂಡ್‌ ನಿರ್ಧಾರಕ್ಕೆ ಎಲ್ಲರೂ ಬದ್ಧ: ಡಾ. ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷದಲ್ಲಾಗಲಿ ಅಥವಾ ಸರ್ಕಾರದಲ್ಲಾಗಲಿ ಯಾವುದೇ ಗೊಂದಲಗಳಿಲ್ಲ. ಸರ್ಕಾರ ಸುಭದ್ರವಾಗಿದೆ. ಸಮರ್ಥ ಆಡಳಿತ ನಡೆಸುತ್ತಿದೆ ಎಂದು ವೈದ್ಯಕೀಯ…

2 mins ago

ರಾಷ್ಟ್ರಮಟ್ಟದಲ್ಲಿ ನದಿಗಳ ಜೋಡಣೆಗೆ ಪ್ರಕ್ರಿಯೆ ಆರಂಭ: ಡಿಸಿಎಂ ಡಿಕೆಶಿಗೆ ಕೇಂದ್ರ ಸರ್ಕಾರ ಆಹ್ವಾನ

ಬೆಂಗಳೂರು: ಕೇಂದ್ರ ಸರ್ಕಾರ ಬಹುದಿನಗಳ ಬೇಡಿಕೆಯಂತೆ ರಾಷ್ಟ್ರಮಟ್ಟದಲ್ಲಿ ನದಿಗಳ ಜೋಡಣೆಗೆ ಪ್ರಕ್ರಿಯೆ ಆರಂಭಿಸಿದ್ದು, ಅದರ ಕುರಿತಂತೆ ಚರ್ಚಿಸಲು ವಿವಿಧ ರಾಜ್ಯಗಳ…

4 mins ago

ಸಚಿವ ಎಚ್.ಕೆ.ಪಾಟೀಲ್‌ಗೆ ಜೀವ ಬೆದರಿಕೆ ಪ್ರಕರಣ: ಆರೋಪಿ ಅರೆಸ್ಟ್‌

ಬೆಂಗಳೂರು: ಸಚಿವ ಎಚ್.ಕೆ.ಪಾಟೀಲ್‌ಗೆ ಜೀವ ಬೆದರಿಕೆ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಚಿವ ಎಚ್.ಕೆ.ಪಾಟೀಲ್‌ ಅವರಿಗೆ ಫೇಸ್‌ಬುಕ್‌ನಲ್ಲಿ ಜೀವ ಬೆದರಿಕೆ…

40 mins ago

ಹೃದಯಾಘಾತದಿಂದ ಹಿರಿಯ ಪತ್ರಕರ್ತ ದೊಡ್ಡ ಬೊಮಯ್ಯ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ಹಿರಿಯ ಪತ್ರಕರ್ತ, ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾದ ದೊಡ್ಡ ಬೊಮಯ್ಯ ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ…

1 hour ago

ನಾಲ್ವರ ಹತ್ಯೆಗೈದ ಅಪರಾಧಿಗೆ ಗಲ್ಲು ಶಿಕ್ಷೆ: ತನಿಖೆಯಲ್ಲಿ ಪಾಲ್ಗೊಂಡ ಅಧಿಕಾರಿ, ಸಿಬ್ಬಂದಿಗೆ ಬೆಳ್ಳಿ ಪದಕದ ಗೌರವ

ಮಡಿಕೇರಿ: ಮಾರ್ಚ್‌ನಲ್ಲಿ ಪೊನ್ನಂಪೇಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲಲಿ ನಡೆದಿದ್ದ ನಾಲ್ವರ ಹತ್ಯೆ ಪ್ರಕರಣ ಸಂಬಂಧ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ…

2 hours ago

ಮಾಗಿ ಉತ್ಸವದ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ ಹಂತದ ಸಿದ್ಧತೆ

ಮೈಸೂರು: ಮೈಸೂರಿನ ಅರಮನೆ ಆವರಣದಲ್ಲಿ ಡಿಸೆಂಬರ್.21ರಿಂದ 31ರವರೆಗೆ ಜರುಗಲಿರುವ ಪ್ರತಿಷ್ಠಿತ ಮಾಗಿ ಉತ್ಸವದ ಅಂಗವಾಗಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ…

2 hours ago