BREAKING NEWS

ಮಣಿಪುರದ ಕ್ರೀಡಾಪಟುಗಳನ್ನು ತಮಿಳುನಾಡಿಗೆ ಆಹ್ವಾನಿಸಿದ ಸಿಎಂ ಎಂಕೆ ಸ್ಟಾಲಿನ್

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಭಾನುವಾರ ಹಿಂಸಾಚಾರ ಪೀಡಿತ ಮಣಿಪುರದ ಕ್ರೀಡಾಪಟುಗಳನ್ನು ಆಹ್ವಾನಿಸಿದ್ದು, ರಾಜ್ಯದಲ್ಲಿಯೇ ಅವರಿಗೆ ತರಬೇತಿ ನೀಡುವುದಾಗಿ ತಿಳಿಸಿದ್ದಾರೆ.

ಅಲ್ಲದೆ, ಅವರ ಮಗ ಮತ್ತು ಕ್ರೀಡಾ ಸಚಿವ ಉದಯನಿಧಿ ಈ ಸಂಬಂಧ ಮಣಿಪುರದ ಕ್ರೀಡಾಪಟುಗಳಿಗೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸುವ ಭರವಸೆ ನೀಡಿರುವುದಾಗಿ ತಿಳಿಸಿದ್ದಾರೆ.

ಖೇಲೋ ಇಂಡಿಯಾ ಮತ್ತು ಏಷ್ಯನ್ ಗೇಮ್ಸ್‌ನಂತಹ ಕ್ರೀಡಾಕೂಟಗಳಿಗೆ ತರಬೇತಿ ನೀಡಲು ಮಣಿಪುರದ ಸದ್ಯದ ಪರಿಸ್ಥಿತಿ ಅಲ್ಲಿನ ಕ್ರೀಡಾಪಟುಗಳಿಗೆ ಅನುಕೂಲಕರವಾಗಿಲ್ಲ ಎಂದು ಸ್ಟಾಲಿನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

‘ಮಣಿಪುರದ ಕ್ರೀಡಾ ಪಟುಗಳಿಗೆ ತಮಿಳುನಾಡಿನಲ್ಲಿಯೇ ವ್ಯವಸ್ಥೆ ಕಲ್ಪಿಸುವಂತೆ ಯುವ ಕಲ್ಯಾಣ ಮತ್ತು ಕ್ರೀಡಾ ಅಭಿವೃದ್ಧಿ ಸಚಿವ ಉದಯನಿಧಿ ಸ್ಟಾಲಿನ್ ಅವರಿಗೆ ಸೂಚಿಸಿದ್ದೇನೆ. ಕ್ರೀಡಾ ಇಲಾಖೆಯ ಪರವಾಗಿ ‘ಉತ್ತಮ ಗುಣಮಟ್ಟದ’ ಸೌಲಭ್ಯಗಳನ್ನು ಒದಗಿಸುವುದಾಗಿ ಉದಯನಿಧಿ ಭರವಸೆ ನೀಡಿದ್ದಾರೆ’ ಎಂದು ತಿಳಿಸಿದ್ದಾರೆ.

2024ರ ಆವೃತ್ತಿಯ ಖೇಲೋ ಇಂಡಿಯಾ ಗೇಮ್ಸ್‌ಗೆ ತಮಿಳುನಾಡು ಈ ಭಾರಿ ಆತಿಥ್ಯ ವಹಿಸಲಿದೆ.

‘ಮಣಿಪುರ ರಾಜ್ಯವು ಕ್ರೀಡಾ ರಂಗಕ್ಕೆ ‘ಚಾಂಪಿಯನ್‌ಗಳನ್ನು, ವಿಶೇಷವಾಗಿ ಮಹಿಳಾ ಚಾಂಪಿಯನ್‌ಗಳನ್ನು’ ನೀಡುವಲ್ಲಿ ಹೆಸರುವಾಸಿಯಾಗಿದೆ. ಸದ್ಯದ ಮಣಿಪುರದಲ್ಲಿನ ಪರಿಸ್ಥಿತಿ ಬಗ್ಗೆ ತಮಿಳುನಾಡು ರಾಜ್ಯ ‘ಆಳವಾದ ದುಃಖ’ ವ್ಯಕ್ತಪಡಿಸಿದೆ. ಪರಿಸ್ಥಿತಿ ತಿಳಿಯಾಗಲೆಂದು ಎದುರು ನೋಡುತ್ತಿದೆ’ ಎಂದು ಸ್ಟಾಲಿನ್ ಹೇಳಿದರು.

ಎಮ್‌ಸಿ ಮೇರಿ ಕೋಮ್, ಕುಂಜರಾಣಿ ದೇವಿ, ಮೀರಾಬಾಯಿ ಚಾನು, ಖುಮುಚ್ಚಮ್ ಸಂಜಿತಾ ಚಾನು, ಟಿಂಗೊನ್ಲೀಮಾ ಚಾನು ಮತ್ತು ಅನೇಕ ವರ್ಷಗಳಿಂದ ಹಲವಾರು ಶ್ರೇಷ್ಠ ಕ್ರೀಡಾಪಟುಗಳು ಮಣಿಪುರದಿಂದಲೇ ಬಂದವರಾಗಿದ್ದಾರೆ.

‘ತಮಿಳು ಸಂಸ್ಕೃತಿ ಪ್ರೀತಿ ಮತ್ತು ಕಾಳಜಿಯಿಂದ ಬದುಕುತ್ತಿದೆ ಎಂದು ಹೇಳಿದ ಸಿಎಂ, ‘ಎಲ್ಲವೂ ನನ್ನದು, ಎಲ್ಲ ಜನರು ನನ್ನ ಸಂಬಂಧಿಕರು’ ಎಂಬ ಮಾತಿನಂತೆ ನಡೆದುಕೊಳ್ಳುತ್ತಿದೆ ಎಂದು ಅವರು ಹೇಳಿದರು.

ಈ ಪ್ರಯೋಜನವನ್ನು ಪಡೆಯಲು ಇಚ್ಛಿಸುವವ ಮಣಿಪುರದ ಕ್ರೀಡಾಪಟುಗಳು +91-8925903047 ಅನ್ನು ಸಂಪರ್ಕಿಸಬಹುದು ಅಥವಾ ID ಪುರಾವೆ ಮತ್ತು ತರಬೇತಿ ಅಗತ್ಯತೆಗಳು ಸೇರಿದಂತೆ ವಿವರಗಳನ್ನು sportstn2023@gmail.com ಗೆ ಇಮೇಲ್ ಮಾಡಬಹುದು.

andolanait

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

4 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

4 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

4 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

4 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

4 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

4 hours ago