BREAKING NEWS

ಮಣಿಪುರದ ಕ್ರೀಡಾಪಟುಗಳನ್ನು ತಮಿಳುನಾಡಿಗೆ ಆಹ್ವಾನಿಸಿದ ಸಿಎಂ ಎಂಕೆ ಸ್ಟಾಲಿನ್

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಭಾನುವಾರ ಹಿಂಸಾಚಾರ ಪೀಡಿತ ಮಣಿಪುರದ ಕ್ರೀಡಾಪಟುಗಳನ್ನು ಆಹ್ವಾನಿಸಿದ್ದು, ರಾಜ್ಯದಲ್ಲಿಯೇ ಅವರಿಗೆ ತರಬೇತಿ ನೀಡುವುದಾಗಿ ತಿಳಿಸಿದ್ದಾರೆ.

ಅಲ್ಲದೆ, ಅವರ ಮಗ ಮತ್ತು ಕ್ರೀಡಾ ಸಚಿವ ಉದಯನಿಧಿ ಈ ಸಂಬಂಧ ಮಣಿಪುರದ ಕ್ರೀಡಾಪಟುಗಳಿಗೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸುವ ಭರವಸೆ ನೀಡಿರುವುದಾಗಿ ತಿಳಿಸಿದ್ದಾರೆ.

ಖೇಲೋ ಇಂಡಿಯಾ ಮತ್ತು ಏಷ್ಯನ್ ಗೇಮ್ಸ್‌ನಂತಹ ಕ್ರೀಡಾಕೂಟಗಳಿಗೆ ತರಬೇತಿ ನೀಡಲು ಮಣಿಪುರದ ಸದ್ಯದ ಪರಿಸ್ಥಿತಿ ಅಲ್ಲಿನ ಕ್ರೀಡಾಪಟುಗಳಿಗೆ ಅನುಕೂಲಕರವಾಗಿಲ್ಲ ಎಂದು ಸ್ಟಾಲಿನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

‘ಮಣಿಪುರದ ಕ್ರೀಡಾ ಪಟುಗಳಿಗೆ ತಮಿಳುನಾಡಿನಲ್ಲಿಯೇ ವ್ಯವಸ್ಥೆ ಕಲ್ಪಿಸುವಂತೆ ಯುವ ಕಲ್ಯಾಣ ಮತ್ತು ಕ್ರೀಡಾ ಅಭಿವೃದ್ಧಿ ಸಚಿವ ಉದಯನಿಧಿ ಸ್ಟಾಲಿನ್ ಅವರಿಗೆ ಸೂಚಿಸಿದ್ದೇನೆ. ಕ್ರೀಡಾ ಇಲಾಖೆಯ ಪರವಾಗಿ ‘ಉತ್ತಮ ಗುಣಮಟ್ಟದ’ ಸೌಲಭ್ಯಗಳನ್ನು ಒದಗಿಸುವುದಾಗಿ ಉದಯನಿಧಿ ಭರವಸೆ ನೀಡಿದ್ದಾರೆ’ ಎಂದು ತಿಳಿಸಿದ್ದಾರೆ.

2024ರ ಆವೃತ್ತಿಯ ಖೇಲೋ ಇಂಡಿಯಾ ಗೇಮ್ಸ್‌ಗೆ ತಮಿಳುನಾಡು ಈ ಭಾರಿ ಆತಿಥ್ಯ ವಹಿಸಲಿದೆ.

‘ಮಣಿಪುರ ರಾಜ್ಯವು ಕ್ರೀಡಾ ರಂಗಕ್ಕೆ ‘ಚಾಂಪಿಯನ್‌ಗಳನ್ನು, ವಿಶೇಷವಾಗಿ ಮಹಿಳಾ ಚಾಂಪಿಯನ್‌ಗಳನ್ನು’ ನೀಡುವಲ್ಲಿ ಹೆಸರುವಾಸಿಯಾಗಿದೆ. ಸದ್ಯದ ಮಣಿಪುರದಲ್ಲಿನ ಪರಿಸ್ಥಿತಿ ಬಗ್ಗೆ ತಮಿಳುನಾಡು ರಾಜ್ಯ ‘ಆಳವಾದ ದುಃಖ’ ವ್ಯಕ್ತಪಡಿಸಿದೆ. ಪರಿಸ್ಥಿತಿ ತಿಳಿಯಾಗಲೆಂದು ಎದುರು ನೋಡುತ್ತಿದೆ’ ಎಂದು ಸ್ಟಾಲಿನ್ ಹೇಳಿದರು.

ಎಮ್‌ಸಿ ಮೇರಿ ಕೋಮ್, ಕುಂಜರಾಣಿ ದೇವಿ, ಮೀರಾಬಾಯಿ ಚಾನು, ಖುಮುಚ್ಚಮ್ ಸಂಜಿತಾ ಚಾನು, ಟಿಂಗೊನ್ಲೀಮಾ ಚಾನು ಮತ್ತು ಅನೇಕ ವರ್ಷಗಳಿಂದ ಹಲವಾರು ಶ್ರೇಷ್ಠ ಕ್ರೀಡಾಪಟುಗಳು ಮಣಿಪುರದಿಂದಲೇ ಬಂದವರಾಗಿದ್ದಾರೆ.

‘ತಮಿಳು ಸಂಸ್ಕೃತಿ ಪ್ರೀತಿ ಮತ್ತು ಕಾಳಜಿಯಿಂದ ಬದುಕುತ್ತಿದೆ ಎಂದು ಹೇಳಿದ ಸಿಎಂ, ‘ಎಲ್ಲವೂ ನನ್ನದು, ಎಲ್ಲ ಜನರು ನನ್ನ ಸಂಬಂಧಿಕರು’ ಎಂಬ ಮಾತಿನಂತೆ ನಡೆದುಕೊಳ್ಳುತ್ತಿದೆ ಎಂದು ಅವರು ಹೇಳಿದರು.

ಈ ಪ್ರಯೋಜನವನ್ನು ಪಡೆಯಲು ಇಚ್ಛಿಸುವವ ಮಣಿಪುರದ ಕ್ರೀಡಾಪಟುಗಳು +91-8925903047 ಅನ್ನು ಸಂಪರ್ಕಿಸಬಹುದು ಅಥವಾ ID ಪುರಾವೆ ಮತ್ತು ತರಬೇತಿ ಅಗತ್ಯತೆಗಳು ಸೇರಿದಂತೆ ವಿವರಗಳನ್ನು sportstn2023@gmail.com ಗೆ ಇಮೇಲ್ ಮಾಡಬಹುದು.

andolanait

Recent Posts

ಮಹಾರಾಷ್ಟ್ರ| ತೆರೆದ ಬಾವಿಗೆ ಬಿದ್ದ ಪಿಕ್‌ಅಪ್‌ ವಾಹನ: 8 ಮಂದಿ ದುರ್ಮರಣ

ಮುಂಬೈ: ಪಿಕ್‌ ಅಪ್‌ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…

21 mins ago

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

5 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

5 hours ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

5 hours ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

5 hours ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

5 hours ago