BREAKING NEWS

ಮೌಢ್ಯಕ್ಕೆ ಸೆಡ್ಡು ಹೊಡೆದ ಸಿಎಂ: ದೇವಸ್ಥಾನಕ್ಕೆ ಭೇಟಿ ನೀಡದೆಯೇ ಬಜೆಟ್ ಮಂಡನೆ

ಬೆಂಗಳೂರು: ಸಾಮಾನ್ಯವಾಗಿ ಬಜೆಟ್ ಮಂಡನೆಗೂ ಮುನ್ನ ದೇವಸ್ಥಾನಕ್ಕೆ ಭೇಟಿ ನೀಡುವ ಸಂಪ್ರದಾಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಲಾಂಜಲಿ ಇಟ್ಟಿದ್ದು, ದೇಗುಲಕ್ಕೆ ಭೇಟಿ ನೀಡದೆಯೇ ನೇರವಾಗಿ ವಿಧಾನಸಭೆಗೆ ತೆರಳಿ ಶುಕ್ರವಾರ 2023-24ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ನೇರವಾಗಿ ವಿಧಾನಸೌಧಕ್ಕೆ ಆಗಮಿಸಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ಅಧ್ಯಕ್ಷತೆ ವಹಿಸುವ ಮೂಲಕ, ಬಜೆಟ್ ಮಂಡನೆಗೂ ಮುನ್ನ ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುವ ಸಂಪ್ರದಾಯವನ್ನು ಮುರಿದರು.

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ತಮ್ಮ ಅಧಿಕಾರಾವಧಿಯಲ್ಲಿ ಬಜೆಟ್ ಅಧಿವೇಶನದಲ್ಲಿ ಪಾಲ್ಗೊಳ್ಳಲು ಬರುವ ಮುನ್ನ ಎರಡು ದೇವಸ್ಥಾನಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು. ಬೊಮ್ಮಾಯಿ ಅವರು ಆರ್‌.ಟಿ ನಗರದ ಶ್ರೀಕಂಠೇಶ್ವರ ದೇವಸ್ಥಾನ ಮತ್ತು ಆಂಜನೇಯನ ದೇಗುಲಕ್ಕೆ ಭೇಟಿ ನೀಡಿದ್ದರು.

ಅಂಧಶ್ರದ್ಧೆಗಳಿಗೆ ಉತ್ತೇಜನ ನೀಡದ ಸಿಎಂ ಸಿದ್ದರಾಮಯ್ಯನವರು ವಾಸ್ತು ಕಾರಣಕ್ಕೆ ಮುಚ್ಚಲಾಗಿದ್ದ ವಿಧಾನಸೌಧದ ಕಚೇರಿಯ ದಕ್ಷಿಣ ದ್ವಾರವನ್ನು ತೆಗೆಸಿದ್ದರು. ಅವರು ಸಿಎಂ ಆಗಿದ್ದ ಅವಧಿಯಲ್ಲಿ ಹಲವು ಬಾರಿ ಚಾಮರಾಜನಗರ ನಗರಕ್ಕೆ ಭೇಟಿ ನೀಡಿದ್ದರು. ಚಾಮರಾಜನಗರಕ್ಕೆ ಭೇಟಿ ನೀಡಿದವರು ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ನಂಬಿಕೆ ಇತ್ತು.

ಬಜೆಟ್ ಮಂಡನೆ ವೇಳೆ ಹಾಜರಿರುವಂತೆ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದರು. ಒಗ್ಗಟ್ಟು ಪ್ರದರ್ಶಿಸಿ ಪ್ರತಿಪಕ್ಷಗಳ ದಾಳಿಗೆ ತಕ್ಕ ಉತ್ತರ ನೀಡುವಂತೆಯೂ ಕೇಳಿಕೊಂಡರು. ಖಾತರಿ ಯೋಜನೆಗಳನ್ನು ಅನುಷ್ಠಾನಗೊಳಿಸಿಯೇ ತೀರುವ ಒತ್ತಡದಲ್ಲಿರುವುದರಿಂದ ತಮ್ಮತಮ್ಮ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನಕ್ಕಾಗಿ ಒತ್ತಾಯ ಮಾಡಬೇಡಿ ಎಂದು ಅವರು ಶಾಸಕರನ್ನು ಕೋರಿದರು.

andolanait

Recent Posts

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

23 mins ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

39 mins ago

ಆಂದೋಲನ ಸಂಪಾದಕೀಯ | ಇಂಧನ ದರ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಮುಂದಾಗಲಿ

ಕೇವಲ ಹತ್ತು ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಮೂರು ಬಾರಿ ಹೆಚ್ಚಳವಾಗಿದೆ. ಇದು ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ…

58 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.25 ಸೋಮವಾರ

3 hours ago

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

20 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

23 hours ago