BREAKING NEWS

ಸಿಎಂ ಹುದ್ದೆ ಖಾಲಿ ಇಲ್ಲ, ಅದರ ಬಗ್ಗೆ ಚರ್ಚೆ ಅನಗತ್ಯ: ಸಂಸದ ಡಿ.ಕೆ ಸುರೇಶ್‌

ಬೆಂಗಳೂರು : ಮುಖ್ಯಮಮತ್ರಿ ಹುದ್ದೆ ಸದ್ಯಕ್ಕೆ ಖಾಲಿ ಇಲ್ಲ. ಹೀಗಾಗಿ ಅದರ ಬಗ್ಗೆ ಚರ್ಚೆ ಅನಗತ್ಯ ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸೇರಿದಂತೆ ಯಾವುದೇ ಅಧಿಕಾರಗಳ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ. ರಾಜ್ಯದ ಜನ ಐದು ವರ್ಷ ಆಡಳಿತ ನಡೆಸಲು ಅವಕಾಶ ಮಾಡಿಕೊಟ್ಟಿದ್ದಾರೆ. ಹೀಗಾಗಿ ನಮ್ಮ ಗುರಿ ಸುಭದ್ರ ಸರ್ಕಾರ ಹಾಗೂ ಜನಪರ ಆಡಳಿತದತ್ತ ಇದೆ ಎಂದರು.

ಸಿದ್ದರಾಮಯ್ಯನವರು ನಮ್ಮ ನಾಯಕರು. ಅದರಲ್ಲಿ ಎರಡು ಮಾತಿಲ್ಲ. ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲದೆ ಇರುವುದರಿಂದ ಆ ಬಗ್ಗೆ ಚರ್ಚೆಯೂ ಅನವಶ್ಯಕ. ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಬೇಕೆಂದು ಹೇಳುತ್ತಾರೆ. ಯಾರ ಅಭಿಪ್ರಾಯಗಳು ಏನೇ ಇದ್ದರೂ ಅಂತಿಮ ತೀರ್ಮಾನ ಮಾತ್ರ ಹೈಕಮಾಂಡ್ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.

ಜಾತಿಗಣತಿ ವರದಿಯನ್ನು ತಿರಸ್ಕರಿಸಬೇಕು ಎಂದು ನಿನ್ನೆ ನಡೆದ ಒಕ್ಕಲಿಗ ಸಮುದಾಯದ ಜನಪ್ರತಿನಿಗಳು ಹಾಗೂ ಸ್ವಾಮೀಜಿಗಳ ಸಭೆಯಲ್ಲಿ ಕೇಳಿಬಂದ ಅಭಿಪ್ರಾಯ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಕಾಂತರಾಜ ವರದಿ ಇನ್ನು ಸಚಿವ ಸಂಪುಟದ ಮುಂದೆ ಮನ್ನಣೆಯಾಗಿಲ್ಲ. ಈ ಕುರಿತು ಬಹಳ ದಿನದಿಂದ ಚರ್ಚೆ ವಿವಾದಗಳಿವೆ. ಅವೇನು ಹೊಸದೇನಲ್ಲ. ಮೊದಲು ವರದಿ ಸಂಪುಟದ ಮುಂದೆ ಮಂಡನೆಯಾಗಲಿ. ಆನಂತರ ಅದರ ಕುರಿತು ಪ್ರತಿಕ್ರಿಯೆ ನೀಡುತ್ತೇವೆ ಎಂದರು.

ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರು ಸಭೆ ಕರೆದಿದ್ದರು. ಅಲ್ಲಿ ಸಮುದಾಯದ ಆಗುಹೋಗುಗಳ ಬಗ್ಗೆ ಚರ್ಚೆಯಾಗಿದೆ. ಸ್ವಾಮೀಜಿಗಳು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಅದರಲ್ಲಿ ತಪ್ಪಿಲ್ಲ. ಸಮಾಜದ ಹಿತದೃಷ್ಟಿಯಿಂದ ಗುರುಗಳು ಮಾತನಾಡುತ್ತಾರೆ ಎಂದು ಹೇಳಿದರು.

ಸರ್ಕಾರ ಎಲ್ಲ ಸಮುದಾಯದ ಹಿತವನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ. ವರದಿ ವೈಜ್ಞಾನಿಕವೋ, ಅವೈಜ್ಞಾನಿಕವೋ ಎಂಬುದು ಮಂಡನೆಯಾದ ಬಳಿಕವಷ್ಟೇ ತಿಳಿಯಲು ಸಾಧ್ಯ ಎಂದರು.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇತ್ತೀಚೆಗೆ ನೀಡುತ್ತಿರುವ ಹೇಳಿಕೆಗಳು ಸಮರ್ಥನೀಯವಾಗಿಲ್ಲ. ಹೀಗಾಗಿ ತಾವು ನಿನ್ನೆ ಅವರ ಕುರಿತು ಮಾತನಾಡಿದ್ದಾಗಿ ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಕಾಂಗ್ರೆಸ್ ನಾಯಕರು ನಾಯಿ ನರಿಗಳಂತೆ ಕಿತ್ತಾಡುತ್ತಿದ್ದಾರೆಂಬ ಹೇಳಿಕೆಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ಅವರ ಬಗ್ಗೆ ನಮಗೆ ಗೌರವವಿದೆ ಹಾಗಾಗಿ ಈ ಬಗ್ಗೆ ಮಾತನಾಡುವುದಿಲ್ಲ ಎಂದು ಹೇಳಿದರು.

ಕಾಂಗ್ರೆಸ್ ನಾಯಕರು ಕಲೆಕ್ಷನ್‍ಗಾಗಿ ರಾಜ್ಯಕ್ಕೆ ಭೇಟಿ ನೀಡಿದ್ದಾರೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿ, ಈ ಹಿಂದೆ ಶೇ.40ರಷ್ಟು ಕಮಿಷನ್ ವಸೂಲಿ ದೇಶಾದ್ಯಂತ ಹರಿದಾಡುತ್ತಿದೆ. ಅದಕ್ಕಾಗಿಯೇ ಈ ಅವಾಂತರಗಳು ನಡೆಯುತ್ತಿವೆ ಎಂದು ತಿರುಗೇಟು ನೀಡಿದರು.

andolanait

Recent Posts

ವಾಹನ ದಟ್ಟನೆ : ಸುಗಮ ಸಂಚಾರಕ್ಕೆ ರೈಲ್ವೆ ಅಂಡರ್‌ ಬ್ರಿಡ್ಜ್‌ ವಿಸ್ತರಿಸಲು ಮನವಿ

ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…

5 hours ago

ಮೈಸೂರು–ಜಲ್ಪೈಗುಡಿ ನಡುವೆ ವಿಶೇಷ ರೈಲು ಸಂಚಾರ

ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್‌ ನಡುವೆ ವಿಶೇಷ ಎಕ್ಸ್‌ಪ್ರೆಸ್…

5 hours ago

ಯಮುನಾ ನದಿಯಲ್ಲಿ ಮುಳುಗಿದ ಪ್ರವಾಸಿಗರ ದೋಣಿ ; 6 ಮಂದಿ ಸಾವು, ಹಲವರು ನಾಪತ್ತೆ

ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…

6 hours ago

ಹಡಗುಗಳ ಮೇಲಿನ ಶುಲ್ಕ ನಿಲ್ಲಿಸಿ ; ಇರಾನ್‌ಗೆ ಟ್ರಂಪ್ ಸೂಚನೆ

ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…

6 hours ago

ನಂಜನಗೂಡು | ದೇವರಾಯಶೆಟ್ಟಿಪುರದಲ್ಲಿ ಚಿರತೆ ಪ್ರತ್ಯಕ್ಷ ; ಗ್ರಾಮಸ್ಥರಲ್ಲಿ ಆತಂಕ

ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…

7 hours ago

ಹನೂರು | ಪ್ರತ್ಯೇಕ ಮನೆಕಳ್ಳತನ ; ಐವರ ಬಂಧನ

ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…

8 hours ago