ಬೆಂಗಳೂರು : ಮುಖ್ಯಮಮತ್ರಿ ಹುದ್ದೆ ಸದ್ಯಕ್ಕೆ ಖಾಲಿ ಇಲ್ಲ. ಹೀಗಾಗಿ ಅದರ ಬಗ್ಗೆ ಚರ್ಚೆ ಅನಗತ್ಯ ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸೇರಿದಂತೆ ಯಾವುದೇ ಅಧಿಕಾರಗಳ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ. ರಾಜ್ಯದ ಜನ ಐದು ವರ್ಷ ಆಡಳಿತ ನಡೆಸಲು ಅವಕಾಶ ಮಾಡಿಕೊಟ್ಟಿದ್ದಾರೆ. ಹೀಗಾಗಿ ನಮ್ಮ ಗುರಿ ಸುಭದ್ರ ಸರ್ಕಾರ ಹಾಗೂ ಜನಪರ ಆಡಳಿತದತ್ತ ಇದೆ ಎಂದರು.
ಸಿದ್ದರಾಮಯ್ಯನವರು ನಮ್ಮ ನಾಯಕರು. ಅದರಲ್ಲಿ ಎರಡು ಮಾತಿಲ್ಲ. ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲದೆ ಇರುವುದರಿಂದ ಆ ಬಗ್ಗೆ ಚರ್ಚೆಯೂ ಅನವಶ್ಯಕ. ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಬೇಕೆಂದು ಹೇಳುತ್ತಾರೆ. ಯಾರ ಅಭಿಪ್ರಾಯಗಳು ಏನೇ ಇದ್ದರೂ ಅಂತಿಮ ತೀರ್ಮಾನ ಮಾತ್ರ ಹೈಕಮಾಂಡ್ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.
ಜಾತಿಗಣತಿ ವರದಿಯನ್ನು ತಿರಸ್ಕರಿಸಬೇಕು ಎಂದು ನಿನ್ನೆ ನಡೆದ ಒಕ್ಕಲಿಗ ಸಮುದಾಯದ ಜನಪ್ರತಿನಿಗಳು ಹಾಗೂ ಸ್ವಾಮೀಜಿಗಳ ಸಭೆಯಲ್ಲಿ ಕೇಳಿಬಂದ ಅಭಿಪ್ರಾಯ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಕಾಂತರಾಜ ವರದಿ ಇನ್ನು ಸಚಿವ ಸಂಪುಟದ ಮುಂದೆ ಮನ್ನಣೆಯಾಗಿಲ್ಲ. ಈ ಕುರಿತು ಬಹಳ ದಿನದಿಂದ ಚರ್ಚೆ ವಿವಾದಗಳಿವೆ. ಅವೇನು ಹೊಸದೇನಲ್ಲ. ಮೊದಲು ವರದಿ ಸಂಪುಟದ ಮುಂದೆ ಮಂಡನೆಯಾಗಲಿ. ಆನಂತರ ಅದರ ಕುರಿತು ಪ್ರತಿಕ್ರಿಯೆ ನೀಡುತ್ತೇವೆ ಎಂದರು.
ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರು ಸಭೆ ಕರೆದಿದ್ದರು. ಅಲ್ಲಿ ಸಮುದಾಯದ ಆಗುಹೋಗುಗಳ ಬಗ್ಗೆ ಚರ್ಚೆಯಾಗಿದೆ. ಸ್ವಾಮೀಜಿಗಳು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಅದರಲ್ಲಿ ತಪ್ಪಿಲ್ಲ. ಸಮಾಜದ ಹಿತದೃಷ್ಟಿಯಿಂದ ಗುರುಗಳು ಮಾತನಾಡುತ್ತಾರೆ ಎಂದು ಹೇಳಿದರು.
ಸರ್ಕಾರ ಎಲ್ಲ ಸಮುದಾಯದ ಹಿತವನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ. ವರದಿ ವೈಜ್ಞಾನಿಕವೋ, ಅವೈಜ್ಞಾನಿಕವೋ ಎಂಬುದು ಮಂಡನೆಯಾದ ಬಳಿಕವಷ್ಟೇ ತಿಳಿಯಲು ಸಾಧ್ಯ ಎಂದರು.
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇತ್ತೀಚೆಗೆ ನೀಡುತ್ತಿರುವ ಹೇಳಿಕೆಗಳು ಸಮರ್ಥನೀಯವಾಗಿಲ್ಲ. ಹೀಗಾಗಿ ತಾವು ನಿನ್ನೆ ಅವರ ಕುರಿತು ಮಾತನಾಡಿದ್ದಾಗಿ ತಿಳಿಸಿದರು.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಕಾಂಗ್ರೆಸ್ ನಾಯಕರು ನಾಯಿ ನರಿಗಳಂತೆ ಕಿತ್ತಾಡುತ್ತಿದ್ದಾರೆಂಬ ಹೇಳಿಕೆಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ಅವರ ಬಗ್ಗೆ ನಮಗೆ ಗೌರವವಿದೆ ಹಾಗಾಗಿ ಈ ಬಗ್ಗೆ ಮಾತನಾಡುವುದಿಲ್ಲ ಎಂದು ಹೇಳಿದರು.
ಕಾಂಗ್ರೆಸ್ ನಾಯಕರು ಕಲೆಕ್ಷನ್ಗಾಗಿ ರಾಜ್ಯಕ್ಕೆ ಭೇಟಿ ನೀಡಿದ್ದಾರೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿ, ಈ ಹಿಂದೆ ಶೇ.40ರಷ್ಟು ಕಮಿಷನ್ ವಸೂಲಿ ದೇಶಾದ್ಯಂತ ಹರಿದಾಡುತ್ತಿದೆ. ಅದಕ್ಕಾಗಿಯೇ ಈ ಅವಾಂತರಗಳು ನಡೆಯುತ್ತಿವೆ ಎಂದು ತಿರುಗೇಟು ನೀಡಿದರು.
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…