BREAKING NEWS

ಸಿಎಂ ಹುದ್ದೆ ಖಾಲಿ ಇಲ್ಲ, ಅದರ ಬಗ್ಗೆ ಚರ್ಚೆ ಅನಗತ್ಯ: ಸಂಸದ ಡಿ.ಕೆ ಸುರೇಶ್‌

ಬೆಂಗಳೂರು : ಮುಖ್ಯಮಮತ್ರಿ ಹುದ್ದೆ ಸದ್ಯಕ್ಕೆ ಖಾಲಿ ಇಲ್ಲ. ಹೀಗಾಗಿ ಅದರ ಬಗ್ಗೆ ಚರ್ಚೆ ಅನಗತ್ಯ ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸೇರಿದಂತೆ ಯಾವುದೇ ಅಧಿಕಾರಗಳ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ. ರಾಜ್ಯದ ಜನ ಐದು ವರ್ಷ ಆಡಳಿತ ನಡೆಸಲು ಅವಕಾಶ ಮಾಡಿಕೊಟ್ಟಿದ್ದಾರೆ. ಹೀಗಾಗಿ ನಮ್ಮ ಗುರಿ ಸುಭದ್ರ ಸರ್ಕಾರ ಹಾಗೂ ಜನಪರ ಆಡಳಿತದತ್ತ ಇದೆ ಎಂದರು.

ಸಿದ್ದರಾಮಯ್ಯನವರು ನಮ್ಮ ನಾಯಕರು. ಅದರಲ್ಲಿ ಎರಡು ಮಾತಿಲ್ಲ. ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲದೆ ಇರುವುದರಿಂದ ಆ ಬಗ್ಗೆ ಚರ್ಚೆಯೂ ಅನವಶ್ಯಕ. ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಬೇಕೆಂದು ಹೇಳುತ್ತಾರೆ. ಯಾರ ಅಭಿಪ್ರಾಯಗಳು ಏನೇ ಇದ್ದರೂ ಅಂತಿಮ ತೀರ್ಮಾನ ಮಾತ್ರ ಹೈಕಮಾಂಡ್ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.

ಜಾತಿಗಣತಿ ವರದಿಯನ್ನು ತಿರಸ್ಕರಿಸಬೇಕು ಎಂದು ನಿನ್ನೆ ನಡೆದ ಒಕ್ಕಲಿಗ ಸಮುದಾಯದ ಜನಪ್ರತಿನಿಗಳು ಹಾಗೂ ಸ್ವಾಮೀಜಿಗಳ ಸಭೆಯಲ್ಲಿ ಕೇಳಿಬಂದ ಅಭಿಪ್ರಾಯ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಕಾಂತರಾಜ ವರದಿ ಇನ್ನು ಸಚಿವ ಸಂಪುಟದ ಮುಂದೆ ಮನ್ನಣೆಯಾಗಿಲ್ಲ. ಈ ಕುರಿತು ಬಹಳ ದಿನದಿಂದ ಚರ್ಚೆ ವಿವಾದಗಳಿವೆ. ಅವೇನು ಹೊಸದೇನಲ್ಲ. ಮೊದಲು ವರದಿ ಸಂಪುಟದ ಮುಂದೆ ಮಂಡನೆಯಾಗಲಿ. ಆನಂತರ ಅದರ ಕುರಿತು ಪ್ರತಿಕ್ರಿಯೆ ನೀಡುತ್ತೇವೆ ಎಂದರು.

ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರು ಸಭೆ ಕರೆದಿದ್ದರು. ಅಲ್ಲಿ ಸಮುದಾಯದ ಆಗುಹೋಗುಗಳ ಬಗ್ಗೆ ಚರ್ಚೆಯಾಗಿದೆ. ಸ್ವಾಮೀಜಿಗಳು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಅದರಲ್ಲಿ ತಪ್ಪಿಲ್ಲ. ಸಮಾಜದ ಹಿತದೃಷ್ಟಿಯಿಂದ ಗುರುಗಳು ಮಾತನಾಡುತ್ತಾರೆ ಎಂದು ಹೇಳಿದರು.

ಸರ್ಕಾರ ಎಲ್ಲ ಸಮುದಾಯದ ಹಿತವನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ. ವರದಿ ವೈಜ್ಞಾನಿಕವೋ, ಅವೈಜ್ಞಾನಿಕವೋ ಎಂಬುದು ಮಂಡನೆಯಾದ ಬಳಿಕವಷ್ಟೇ ತಿಳಿಯಲು ಸಾಧ್ಯ ಎಂದರು.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇತ್ತೀಚೆಗೆ ನೀಡುತ್ತಿರುವ ಹೇಳಿಕೆಗಳು ಸಮರ್ಥನೀಯವಾಗಿಲ್ಲ. ಹೀಗಾಗಿ ತಾವು ನಿನ್ನೆ ಅವರ ಕುರಿತು ಮಾತನಾಡಿದ್ದಾಗಿ ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಕಾಂಗ್ರೆಸ್ ನಾಯಕರು ನಾಯಿ ನರಿಗಳಂತೆ ಕಿತ್ತಾಡುತ್ತಿದ್ದಾರೆಂಬ ಹೇಳಿಕೆಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ಅವರ ಬಗ್ಗೆ ನಮಗೆ ಗೌರವವಿದೆ ಹಾಗಾಗಿ ಈ ಬಗ್ಗೆ ಮಾತನಾಡುವುದಿಲ್ಲ ಎಂದು ಹೇಳಿದರು.

ಕಾಂಗ್ರೆಸ್ ನಾಯಕರು ಕಲೆಕ್ಷನ್‍ಗಾಗಿ ರಾಜ್ಯಕ್ಕೆ ಭೇಟಿ ನೀಡಿದ್ದಾರೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿ, ಈ ಹಿಂದೆ ಶೇ.40ರಷ್ಟು ಕಮಿಷನ್ ವಸೂಲಿ ದೇಶಾದ್ಯಂತ ಹರಿದಾಡುತ್ತಿದೆ. ಅದಕ್ಕಾಗಿಯೇ ಈ ಅವಾಂತರಗಳು ನಡೆಯುತ್ತಿವೆ ಎಂದು ತಿರುಗೇಟು ನೀಡಿದರು.

andolanait

Recent Posts

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

53 mins ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

55 mins ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

57 mins ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

58 mins ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

1 hour ago

ಚಾ.ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜೆ.ಯೋಗೇಶ್ ನೇಮಕ

ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ  ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…

1 hour ago