BREAKING NEWS

ರಾಜ್ಯದ ಅರ್ಹ ರೈತರಿಗೆ ಬರ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು : ಬರ ಪರಿಹಾರ ಸಂಬಂಧ ಕೇಂದ್ರಕ್ಕೆ ಬರೆದ ಪತ್ರಗಳಿಗೆ ಈ ವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ರಾಜ್ಯದಿಂದ ಮೂವರು ಸಚಿವರು ದೆಹಲಿಗೆ ಹೋದರೂ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿಲ್ಲ. ಕೇಂದ್ರ ಸರ್ಕಾರ ರಾಜ್ಯದ ರೈತರಿಗೆ ಪರಿಹಾರ ಕೊಡಲು ಇನ್ನೂ ಪ್ರಾಥಮಿಕ ಸಭೆಯನ್ನೇ ನಡೆಸದ ಹಿನ್ನೆಲೆಯಲ್ಲಿ ರಾಜ್ಯದಿಂದ ತುರ್ತು ಕ್ರಮ ಕೈಗೊಳ್ಳಲಾಗಿದ್ದು, ಮೊದಲ ಕಂತಿನಲ್ಲಿ ಅರ್ಹ ರೈತರಿಗೆ ತಲಾ ರೂ.2,000 ವರೆಗೆ ಬೆಳೆ ಪರಿಹಾರ ಹಣ ಬಿಡುಗಡೆ ಮಾಡುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಉದ್ಯೋಗ ಖಾತರಿ ಯೋಜನೆಯಡಿ 150 ಮಾನವ ದಿನಗಳ ಉದ್ಯೋಗ ಕೊಡಲು ಕೇಂದ್ರಕ್ಕೆ ಅನುಮತಿ ಕೋರಲಾಗಿತ್ತು. ಆದರೆ ಇನ್ನೂ ಅನುಮತಿ ನೀಡಿಲ್ಲ. ರಾಜ್ಯದ 223 ತಾಲ್ಲೂಕುಗಳನ್ನು ಬರಪೀಡಿತ ಎಂದು ಮೂರು ಹಂತದಲ್ಲಿ ಘೋಷಿಸಿದ್ದೇವೆ‌. ರೂ.18,171 ಕೋಟಿ ಪರಿಹಾರದ ಆರ್ಥಿಕ ನೆರವು ನೀಡಲು ಕೇಂದ್ರಕ್ಕೆ ಪತ್ರ ಬರೆದಿದ್ದೇವೆ. ಕೇಂದ್ರ ನಮ್ಮ ತೆರಿಗೆ ಹಣದ ಪಾಲನ್ನು ನಮಗೆ ವಾಪಾಸ್ ಕೊಟ್ಟರೂ ಸಾಕು ನಮ್ಮ ರೈತರ ಕಷ್ಟಕ್ಕೆ ಸಹಾಯವಾಗುತ್ತಿತ್ತು.

ಸೆಪ್ಟಂಬರ್ 21 ರಂದು ಬರಪರಿಹಾರಕ್ಕಾಗಿ ಕೇಂದ್ರಕ್ಕೆ ಮೊದಲ ಮನವಿ ಮಾಡಿದ್ದೆವು. ಕೇಂದ್ರದ ತಂಡ ಅಕ್ಟೋಬರ್ 4 ರಿಂದ 9ರ ವರೆಗೆ ರಾಜ್ಯ ಪ್ರವಾಸ ಮಾಡಿ ಬರ ಸಮೀಕ್ಷೆ ನಡೆಸಿ, ವರದಿ ನೀಡಿದೆ. ನಾವೆಲ್ಲಾ ಕೇಂದ್ರ ತಂಡವನ್ನು ಭೇಟಿ ಮಾಡಿ ಚರ್ಚಿಸಿ ಬರದ ಸ್ಥಿತಿ ವಿವರಿಸಿದ್ದೇವೆ. 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟ ಆಗಿದೆ. ರೂ.4,663 ಕೋಟಿ ಬೆಳೆ ನಷ್ಟ ಪರಿಹಾರ ಕೇಂದ್ರಕ್ಕೆ ಕೇಳಿದ್ದೆವು. ಕೇಂದ್ರ ಸಚಿವರಿಗೂ ಮನವಿ ಮಾಡಿದ್ದೇವೆ. ಕೇಂದ್ರ ಕೃಷಿ ಮತ್ತು ಗೃಹ ಸಚಿವರನ್ನು ಖುದ್ದು ಭೇಟಿ ಮಾಡಲು ಸಮಯ ಕೊಡಿ ಎಂದು ಪತ್ರ ಬರೆದಿದ್ದೆ. ಇವತ್ತಿನವರೆಗೂ ಸಮಯ ಕೊಟ್ಟಿಲ್ಲ ಎಂದು ವಿವರಿಸಿದರು.

ಇವತ್ತಿನವರೆಗೂ ಕೇಂದ್ರ ಸಭೆಯನ್ನೇ ನಡೆಸಿಲ್ಲ. ಸಮಯ ಕೇಳಿದರೂ ಭೇಟಿಗೆ ಅವಕಾಶ ಕೊಟ್ಟಿಲ್ಲ. ಅಧಿಕಾರಿಗಳನ್ನಾದರೂ ಭೇಟಿ ಮಾಡಿ ಎಂದು ಹೇಳಿ ನಾನು ಮೂವರು ಸಚಿವರನ್ನು ದೆಹಲಿಗೆ ತೆರಳಲು ಹೇಳಿದ್ದೆ. 3 ಜನ‌ ದೆಹಲಿಗೆ ಹೋಗಿ ಅಧಿಕಾರಿಗಳಿಗೆ ವಿವರಿಸಿದ್ದಾರೆ. ವಿತ್ತ ಸಚಿವರನ್ನು ನಮ್ಮ ಮಂತ್ರಿಗಳು ಭೇಟಿ ಮಾಡಿದ್ದಾರೆ. ಆದರೂ ಕೇಂದ್ರ ಸರ್ಕಾರ ಇವತ್ತಿನವರೆಗೆ ಸಭೆ ನಡೆಸಿಲ್ಲ. ಪರಿಹಾರ ನೀಡುವ‌ ಪ್ರಕ್ರಿಯೆಯನ್ನೇ ಶುರು ಮಾಡಿಲ್ಲ ಎಂದರು.

ಬಿತ್ತನೆ ವೈಫಲ್ಯ ಮತ್ತು ಮಧ್ಯಂತರ ವಿಮೆ ಪರಿಹಾರಕ್ಕೆ ರಾಜ್ಯ ಸರ್ಕಾರ ಈಗಾಗಲೇ 6.5 ಲಕ್ಷ ರೈತರಿಗೆ ರೂ.460 ಕೋಟಿ ನಮ್ಮ ಸರ್ಕಾರ ಬಿಡುಗಡೆ ಮಾಡಿದೆ. ಕುಡಿಯುವ ನೀರು, ಮೇವಿಗೆ ರೂ.327 ಕೋಟಿ ಬಿಡುಗಡೆ, ರೂ.780 ಕೋಟಿ DC ಗಳ PD ಖಾತೆಯಲ್ಲಿದೆ. ಅವರೂ ತಹಶೀಲ್ದಾರ್ ಗಳಿಗೆ ಬಿಡುಗಡೆ ಮಾಡಿದ್ದಾರೆ. ಯಾವ ತಾಲ್ಲೂಕುಗಳಲ್ಲೂ ಕುಡಿಯುವ ನೀರಿಗೆ ಸಮಸ್ಯೆ ಇಲ್ಲದಂತೆ ನಿರ್ವಹಿಸಿದ್ದೇವೆ.ವಿವಿಧ ತಾಲ್ಲೂಕುಗಳ 60 ಹಳ್ಳಿಗಳಲ್ಲಿ ಟ್ಯಾಂಕರ್ ನೀರಿನ ವ್ಯವಸ್ಥೆ ಮಾಡಿದ್ದೇವೆ. ಹೊರ ರಾಜ್ಯಕ್ಕೆ ಮೇವು ಹೋಗದಂತೆ ತಡೆದಿದ್ದೇವೆ. ಮೇವಿನ‌ ಬೀಜ ವಿತರಣೆ ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

andolanait

Recent Posts

ಬಡವರ ಮತಗಳನ್ನು ತೆಗೆಯಲು ಎಸ್‌ಐಆರ್‌ ಸಂಚು: ಡಿಸಿಎಂ ಡಿ.ಕೆ.ಶಿವಕುಮಾರ್‌ ಕಿಡಿ

ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್‌ಐಆರ್‌ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ…

4 hours ago

ವಾಟಾಳ್‌ ನಾಗರಾಜ್‌ಗೆ ಬಿಗ್‌ ರಿಲೀಫ್:‌ 10 ಕೇಸ್‌ಗಳು ವಾಪಸ್‌

ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ಗೆ ರಾಜ್ಯ ಸರ್ಕಾರ ರಿಲೀಫ್‌ ನೀಡಿದೆ. ವಾಟಾಳ್‌ ನಾಗರಾಜ್‌ ಮೇಲಿನ ಕೇಸ್‌ಗಳನ್ನು ಸರ್ಕಾರ ಹಿಂಪಡೆಯಲು…

4 hours ago

52 ಪ್ರಕರಣಗಳನ್ನು ಹಿಂಪಡೆಯಲು ಸಂಪುಟ ಸಭೆಯಲ್ಲಿ ತೀರ್ಮಾನ: ಸಚಿವ ಪರಮೇಶ್ವರ್

ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್‌…

5 hours ago

ಆತ್ಮಹತ್ಯೆಯ ಹಾಟ್‌ಸ್ಪಾಟ್ ಆಗುತ್ತಿದೆ ಪ್ರಸಿದ್ದ ವೆಲ್ಲೆಸ್ಲಿ ಸೇತುವೆ

ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್‌ಸ್ಪಾಟ್‌ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…

6 hours ago

ಕೋವಿಡ್‌ಗಿಂತಲೂ ಡೆಡ್ಲಿ ಎಬೋಲಾ ವೈರಸ್:‌ ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸಲು ಕೇಂದ್ರ ಸೂಚನೆ

ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್‌ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್‌ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.…

6 hours ago

24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…

8 hours ago