BREAKING NEWS

ರಾಜ್ಯದ ಅರ್ಹ ರೈತರಿಗೆ ಬರ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು : ಬರ ಪರಿಹಾರ ಸಂಬಂಧ ಕೇಂದ್ರಕ್ಕೆ ಬರೆದ ಪತ್ರಗಳಿಗೆ ಈ ವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ರಾಜ್ಯದಿಂದ ಮೂವರು ಸಚಿವರು ದೆಹಲಿಗೆ ಹೋದರೂ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿಲ್ಲ. ಕೇಂದ್ರ ಸರ್ಕಾರ ರಾಜ್ಯದ ರೈತರಿಗೆ ಪರಿಹಾರ ಕೊಡಲು ಇನ್ನೂ ಪ್ರಾಥಮಿಕ ಸಭೆಯನ್ನೇ ನಡೆಸದ ಹಿನ್ನೆಲೆಯಲ್ಲಿ ರಾಜ್ಯದಿಂದ ತುರ್ತು ಕ್ರಮ ಕೈಗೊಳ್ಳಲಾಗಿದ್ದು, ಮೊದಲ ಕಂತಿನಲ್ಲಿ ಅರ್ಹ ರೈತರಿಗೆ ತಲಾ ರೂ.2,000 ವರೆಗೆ ಬೆಳೆ ಪರಿಹಾರ ಹಣ ಬಿಡುಗಡೆ ಮಾಡುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಉದ್ಯೋಗ ಖಾತರಿ ಯೋಜನೆಯಡಿ 150 ಮಾನವ ದಿನಗಳ ಉದ್ಯೋಗ ಕೊಡಲು ಕೇಂದ್ರಕ್ಕೆ ಅನುಮತಿ ಕೋರಲಾಗಿತ್ತು. ಆದರೆ ಇನ್ನೂ ಅನುಮತಿ ನೀಡಿಲ್ಲ. ರಾಜ್ಯದ 223 ತಾಲ್ಲೂಕುಗಳನ್ನು ಬರಪೀಡಿತ ಎಂದು ಮೂರು ಹಂತದಲ್ಲಿ ಘೋಷಿಸಿದ್ದೇವೆ‌. ರೂ.18,171 ಕೋಟಿ ಪರಿಹಾರದ ಆರ್ಥಿಕ ನೆರವು ನೀಡಲು ಕೇಂದ್ರಕ್ಕೆ ಪತ್ರ ಬರೆದಿದ್ದೇವೆ. ಕೇಂದ್ರ ನಮ್ಮ ತೆರಿಗೆ ಹಣದ ಪಾಲನ್ನು ನಮಗೆ ವಾಪಾಸ್ ಕೊಟ್ಟರೂ ಸಾಕು ನಮ್ಮ ರೈತರ ಕಷ್ಟಕ್ಕೆ ಸಹಾಯವಾಗುತ್ತಿತ್ತು.

ಸೆಪ್ಟಂಬರ್ 21 ರಂದು ಬರಪರಿಹಾರಕ್ಕಾಗಿ ಕೇಂದ್ರಕ್ಕೆ ಮೊದಲ ಮನವಿ ಮಾಡಿದ್ದೆವು. ಕೇಂದ್ರದ ತಂಡ ಅಕ್ಟೋಬರ್ 4 ರಿಂದ 9ರ ವರೆಗೆ ರಾಜ್ಯ ಪ್ರವಾಸ ಮಾಡಿ ಬರ ಸಮೀಕ್ಷೆ ನಡೆಸಿ, ವರದಿ ನೀಡಿದೆ. ನಾವೆಲ್ಲಾ ಕೇಂದ್ರ ತಂಡವನ್ನು ಭೇಟಿ ಮಾಡಿ ಚರ್ಚಿಸಿ ಬರದ ಸ್ಥಿತಿ ವಿವರಿಸಿದ್ದೇವೆ. 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟ ಆಗಿದೆ. ರೂ.4,663 ಕೋಟಿ ಬೆಳೆ ನಷ್ಟ ಪರಿಹಾರ ಕೇಂದ್ರಕ್ಕೆ ಕೇಳಿದ್ದೆವು. ಕೇಂದ್ರ ಸಚಿವರಿಗೂ ಮನವಿ ಮಾಡಿದ್ದೇವೆ. ಕೇಂದ್ರ ಕೃಷಿ ಮತ್ತು ಗೃಹ ಸಚಿವರನ್ನು ಖುದ್ದು ಭೇಟಿ ಮಾಡಲು ಸಮಯ ಕೊಡಿ ಎಂದು ಪತ್ರ ಬರೆದಿದ್ದೆ. ಇವತ್ತಿನವರೆಗೂ ಸಮಯ ಕೊಟ್ಟಿಲ್ಲ ಎಂದು ವಿವರಿಸಿದರು.

ಇವತ್ತಿನವರೆಗೂ ಕೇಂದ್ರ ಸಭೆಯನ್ನೇ ನಡೆಸಿಲ್ಲ. ಸಮಯ ಕೇಳಿದರೂ ಭೇಟಿಗೆ ಅವಕಾಶ ಕೊಟ್ಟಿಲ್ಲ. ಅಧಿಕಾರಿಗಳನ್ನಾದರೂ ಭೇಟಿ ಮಾಡಿ ಎಂದು ಹೇಳಿ ನಾನು ಮೂವರು ಸಚಿವರನ್ನು ದೆಹಲಿಗೆ ತೆರಳಲು ಹೇಳಿದ್ದೆ. 3 ಜನ‌ ದೆಹಲಿಗೆ ಹೋಗಿ ಅಧಿಕಾರಿಗಳಿಗೆ ವಿವರಿಸಿದ್ದಾರೆ. ವಿತ್ತ ಸಚಿವರನ್ನು ನಮ್ಮ ಮಂತ್ರಿಗಳು ಭೇಟಿ ಮಾಡಿದ್ದಾರೆ. ಆದರೂ ಕೇಂದ್ರ ಸರ್ಕಾರ ಇವತ್ತಿನವರೆಗೆ ಸಭೆ ನಡೆಸಿಲ್ಲ. ಪರಿಹಾರ ನೀಡುವ‌ ಪ್ರಕ್ರಿಯೆಯನ್ನೇ ಶುರು ಮಾಡಿಲ್ಲ ಎಂದರು.

ಬಿತ್ತನೆ ವೈಫಲ್ಯ ಮತ್ತು ಮಧ್ಯಂತರ ವಿಮೆ ಪರಿಹಾರಕ್ಕೆ ರಾಜ್ಯ ಸರ್ಕಾರ ಈಗಾಗಲೇ 6.5 ಲಕ್ಷ ರೈತರಿಗೆ ರೂ.460 ಕೋಟಿ ನಮ್ಮ ಸರ್ಕಾರ ಬಿಡುಗಡೆ ಮಾಡಿದೆ. ಕುಡಿಯುವ ನೀರು, ಮೇವಿಗೆ ರೂ.327 ಕೋಟಿ ಬಿಡುಗಡೆ, ರೂ.780 ಕೋಟಿ DC ಗಳ PD ಖಾತೆಯಲ್ಲಿದೆ. ಅವರೂ ತಹಶೀಲ್ದಾರ್ ಗಳಿಗೆ ಬಿಡುಗಡೆ ಮಾಡಿದ್ದಾರೆ. ಯಾವ ತಾಲ್ಲೂಕುಗಳಲ್ಲೂ ಕುಡಿಯುವ ನೀರಿಗೆ ಸಮಸ್ಯೆ ಇಲ್ಲದಂತೆ ನಿರ್ವಹಿಸಿದ್ದೇವೆ.ವಿವಿಧ ತಾಲ್ಲೂಕುಗಳ 60 ಹಳ್ಳಿಗಳಲ್ಲಿ ಟ್ಯಾಂಕರ್ ನೀರಿನ ವ್ಯವಸ್ಥೆ ಮಾಡಿದ್ದೇವೆ. ಹೊರ ರಾಜ್ಯಕ್ಕೆ ಮೇವು ಹೋಗದಂತೆ ತಡೆದಿದ್ದೇವೆ. ಮೇವಿನ‌ ಬೀಜ ವಿತರಣೆ ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

andolanait

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

7 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

8 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

8 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

10 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

10 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

14 hours ago