BREAKING NEWS

ರಾಜ್ಯದ ಅರ್ಹ ರೈತರಿಗೆ ಬರ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು : ಬರ ಪರಿಹಾರ ಸಂಬಂಧ ಕೇಂದ್ರಕ್ಕೆ ಬರೆದ ಪತ್ರಗಳಿಗೆ ಈ ವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ರಾಜ್ಯದಿಂದ ಮೂವರು ಸಚಿವರು ದೆಹಲಿಗೆ ಹೋದರೂ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿಲ್ಲ. ಕೇಂದ್ರ ಸರ್ಕಾರ ರಾಜ್ಯದ ರೈತರಿಗೆ ಪರಿಹಾರ ಕೊಡಲು ಇನ್ನೂ ಪ್ರಾಥಮಿಕ ಸಭೆಯನ್ನೇ ನಡೆಸದ ಹಿನ್ನೆಲೆಯಲ್ಲಿ ರಾಜ್ಯದಿಂದ ತುರ್ತು ಕ್ರಮ ಕೈಗೊಳ್ಳಲಾಗಿದ್ದು, ಮೊದಲ ಕಂತಿನಲ್ಲಿ ಅರ್ಹ ರೈತರಿಗೆ ತಲಾ ರೂ.2,000 ವರೆಗೆ ಬೆಳೆ ಪರಿಹಾರ ಹಣ ಬಿಡುಗಡೆ ಮಾಡುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಉದ್ಯೋಗ ಖಾತರಿ ಯೋಜನೆಯಡಿ 150 ಮಾನವ ದಿನಗಳ ಉದ್ಯೋಗ ಕೊಡಲು ಕೇಂದ್ರಕ್ಕೆ ಅನುಮತಿ ಕೋರಲಾಗಿತ್ತು. ಆದರೆ ಇನ್ನೂ ಅನುಮತಿ ನೀಡಿಲ್ಲ. ರಾಜ್ಯದ 223 ತಾಲ್ಲೂಕುಗಳನ್ನು ಬರಪೀಡಿತ ಎಂದು ಮೂರು ಹಂತದಲ್ಲಿ ಘೋಷಿಸಿದ್ದೇವೆ‌. ರೂ.18,171 ಕೋಟಿ ಪರಿಹಾರದ ಆರ್ಥಿಕ ನೆರವು ನೀಡಲು ಕೇಂದ್ರಕ್ಕೆ ಪತ್ರ ಬರೆದಿದ್ದೇವೆ. ಕೇಂದ್ರ ನಮ್ಮ ತೆರಿಗೆ ಹಣದ ಪಾಲನ್ನು ನಮಗೆ ವಾಪಾಸ್ ಕೊಟ್ಟರೂ ಸಾಕು ನಮ್ಮ ರೈತರ ಕಷ್ಟಕ್ಕೆ ಸಹಾಯವಾಗುತ್ತಿತ್ತು.

ಸೆಪ್ಟಂಬರ್ 21 ರಂದು ಬರಪರಿಹಾರಕ್ಕಾಗಿ ಕೇಂದ್ರಕ್ಕೆ ಮೊದಲ ಮನವಿ ಮಾಡಿದ್ದೆವು. ಕೇಂದ್ರದ ತಂಡ ಅಕ್ಟೋಬರ್ 4 ರಿಂದ 9ರ ವರೆಗೆ ರಾಜ್ಯ ಪ್ರವಾಸ ಮಾಡಿ ಬರ ಸಮೀಕ್ಷೆ ನಡೆಸಿ, ವರದಿ ನೀಡಿದೆ. ನಾವೆಲ್ಲಾ ಕೇಂದ್ರ ತಂಡವನ್ನು ಭೇಟಿ ಮಾಡಿ ಚರ್ಚಿಸಿ ಬರದ ಸ್ಥಿತಿ ವಿವರಿಸಿದ್ದೇವೆ. 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟ ಆಗಿದೆ. ರೂ.4,663 ಕೋಟಿ ಬೆಳೆ ನಷ್ಟ ಪರಿಹಾರ ಕೇಂದ್ರಕ್ಕೆ ಕೇಳಿದ್ದೆವು. ಕೇಂದ್ರ ಸಚಿವರಿಗೂ ಮನವಿ ಮಾಡಿದ್ದೇವೆ. ಕೇಂದ್ರ ಕೃಷಿ ಮತ್ತು ಗೃಹ ಸಚಿವರನ್ನು ಖುದ್ದು ಭೇಟಿ ಮಾಡಲು ಸಮಯ ಕೊಡಿ ಎಂದು ಪತ್ರ ಬರೆದಿದ್ದೆ. ಇವತ್ತಿನವರೆಗೂ ಸಮಯ ಕೊಟ್ಟಿಲ್ಲ ಎಂದು ವಿವರಿಸಿದರು.

ಇವತ್ತಿನವರೆಗೂ ಕೇಂದ್ರ ಸಭೆಯನ್ನೇ ನಡೆಸಿಲ್ಲ. ಸಮಯ ಕೇಳಿದರೂ ಭೇಟಿಗೆ ಅವಕಾಶ ಕೊಟ್ಟಿಲ್ಲ. ಅಧಿಕಾರಿಗಳನ್ನಾದರೂ ಭೇಟಿ ಮಾಡಿ ಎಂದು ಹೇಳಿ ನಾನು ಮೂವರು ಸಚಿವರನ್ನು ದೆಹಲಿಗೆ ತೆರಳಲು ಹೇಳಿದ್ದೆ. 3 ಜನ‌ ದೆಹಲಿಗೆ ಹೋಗಿ ಅಧಿಕಾರಿಗಳಿಗೆ ವಿವರಿಸಿದ್ದಾರೆ. ವಿತ್ತ ಸಚಿವರನ್ನು ನಮ್ಮ ಮಂತ್ರಿಗಳು ಭೇಟಿ ಮಾಡಿದ್ದಾರೆ. ಆದರೂ ಕೇಂದ್ರ ಸರ್ಕಾರ ಇವತ್ತಿನವರೆಗೆ ಸಭೆ ನಡೆಸಿಲ್ಲ. ಪರಿಹಾರ ನೀಡುವ‌ ಪ್ರಕ್ರಿಯೆಯನ್ನೇ ಶುರು ಮಾಡಿಲ್ಲ ಎಂದರು.

ಬಿತ್ತನೆ ವೈಫಲ್ಯ ಮತ್ತು ಮಧ್ಯಂತರ ವಿಮೆ ಪರಿಹಾರಕ್ಕೆ ರಾಜ್ಯ ಸರ್ಕಾರ ಈಗಾಗಲೇ 6.5 ಲಕ್ಷ ರೈತರಿಗೆ ರೂ.460 ಕೋಟಿ ನಮ್ಮ ಸರ್ಕಾರ ಬಿಡುಗಡೆ ಮಾಡಿದೆ. ಕುಡಿಯುವ ನೀರು, ಮೇವಿಗೆ ರೂ.327 ಕೋಟಿ ಬಿಡುಗಡೆ, ರೂ.780 ಕೋಟಿ DC ಗಳ PD ಖಾತೆಯಲ್ಲಿದೆ. ಅವರೂ ತಹಶೀಲ್ದಾರ್ ಗಳಿಗೆ ಬಿಡುಗಡೆ ಮಾಡಿದ್ದಾರೆ. ಯಾವ ತಾಲ್ಲೂಕುಗಳಲ್ಲೂ ಕುಡಿಯುವ ನೀರಿಗೆ ಸಮಸ್ಯೆ ಇಲ್ಲದಂತೆ ನಿರ್ವಹಿಸಿದ್ದೇವೆ.ವಿವಿಧ ತಾಲ್ಲೂಕುಗಳ 60 ಹಳ್ಳಿಗಳಲ್ಲಿ ಟ್ಯಾಂಕರ್ ನೀರಿನ ವ್ಯವಸ್ಥೆ ಮಾಡಿದ್ದೇವೆ. ಹೊರ ರಾಜ್ಯಕ್ಕೆ ಮೇವು ಹೋಗದಂತೆ ತಡೆದಿದ್ದೇವೆ. ಮೇವಿನ‌ ಬೀಜ ವಿತರಣೆ ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

andolanait

Recent Posts

ಹೈಕಮಾಂಡ್‌ ಸೂಚನೆಯಂತೆ ರಾಜೀನಾಮೆ : ಸಿದ್ದರಾಮಯ್ಯ ಸುದ್ದಿಗೋಷ್ಠಿಯ ಹೈಲೆಟ್ಸ್‌

ಬೆಂಗಳೂರು : ಹೈಕಮಾಂಡ್‌ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…

5 mins ago

ಯಾರೇ ಸಿಎಂ ಆದರೂ ಕರ್ನಾಟಕ ಅಭಿವೃದ್ಧಿಯಾಗಲ್ಲ: ವಿಜಯೇಂದ್ರ

ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…

2 hours ago

ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್‌ ನಿರ್ಧಾರ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…

3 hours ago

ಮುಂದೆಯೂ ಇದೇ ರೀತಿ ಸಹಕಾರ ನೀಡಿ: ಮಂತ್ರಿಗಳಿಗೆ ಡಿಸಿಎಂ ಡಿಕೆಶಿ ಮನವಿ

ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…

4 hours ago

ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ: ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ನನಗೆ ಯಾವುದೇ ನೋವಿಲ್ಲ. ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂತ್ರಿಗಳ ಜೊತೆಗಿನ ಉಪಹಾರ ಸಭೆಯಲ್ಲಿ…

4 hours ago

ಬ್ರೇಕ್‌ಫಾಸ್ಟ್‌ ಮೀಟಿಂಗ್:‌ ಸಿದ್ದರಾಮಯ್ಯರನ್ನು ತಬ್ಬಿ ಕಾಲಿಗೆ ಬಿದ್ದ ಡಿಸಿಎಂ ಡಿಕೆಶಿ

ಬೆಂಗಳೂರು: ಇಂದು ಬೆಳಿಗ್ಗೆ ಉಪಹಾರಕ್ಕೆ ಕಾವೇರಿ ನಿವಾಸಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್‌ ಅವರು ಸಿದ್ದರಾಮಯ್ಯರನ್ನು ತಬ್ಬಿಕೊಂಡು ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.…

6 hours ago