ಮೈಸೂರು: ಇಲ್ಲಿನ ಯರಗನ ಹಳ್ಳಿಯಲ್ಲಿ ಅನಿಲ ಸೋರಿಕೆಯಿಂದ ಸಂಭವಿಸಿದ ಅನಾಹುತದಲ್ಲಿ ಮೃತರಾದ ಇಡೀ ಕುಟುಂಬದವರ ಮನೆಗೆ ಇಂದು (ಗುರುವಾರ, ಮೇ.23) ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಪರಿಶೀಲನೆ ನಡೆಸಿದರು.
ಬಳಿಕ ಮೃತರ ಸಂಬಂಧಿಗಳಿಗೆ ಸಾಂತ್ವನ ಹೇಳಿ ಮೃತ ಕುಟುಂಬಕ್ಕೆ ಸಂತಾಪ ಸಲ್ಲಿಸಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ ಮೃತರಿಗೆ ತಲಾ 3 ಲಕ್ಷ ರೂನಂತೆ ಕುಟುಂಬಕ್ಕೆ 12 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಮಾಧ್ಯಮಗಳ ಜತೆ ಮಾತನಾಡುತ್ತಾ ಸಿಎಂ ಸಿದ್ದರಾಮಯ್ಯ, ಅನಿಲ ಸೋರಿಕೆಯಿಂದ ಕುಮಾರಸ್ವಾಮಿ ಎಂಬುವವರ ಇಡೀ ಕುಟುಂಬ ಸಾವನ್ನಪ್ಪಿದೆ. ಅವರ ಹೆಂಡತಿ ಇಬ್ಬರು ಮಕ್ಕಳು ಮೃತರಾಗಿದ್ದಾರೆ. ಅವರ ತಂದೆ ತಿಮ್ಮಯ್ಯ ಕಡೂರು ತಾಲೂಕಿನವರು. ಇಲ್ಲಿಗೆ 20 ವರ್ಷಗಳ ಹಿಂದೆಯೇ ಬಂದು ನೆಲಸಿದ್ದಾರೆ. ಕಡು ಬಡತನದಿಂದ ಬಂದವರಾಗಿದ್ದಾರೆ. ಹಾಗಾಗಿ ಅವರೆಲ್ಲರಿಗೂ ಸಾಂತ್ವಾನ ಹೇಳಿ ಪರಿಹಾರ ಘೋಷಣೆ ಮಾಡಿದ್ದೇನೆ. ಈ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರು ಘೋಷಿಸಿದ್ದು, ಅದನ್ನು ನಾನು ಅನುಮೋದಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಮಾಧ್ಯಮಳಿಗೆ ಮಾಹಿತಿ ನೀಡಿದರು.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…