ಮೈಸೂರು: ಇಲ್ಲಿನ ಯರಗನ ಹಳ್ಳಿಯಲ್ಲಿ ಅನಿಲ ಸೋರಿಕೆಯಿಂದ ಸಂಭವಿಸಿದ ಅನಾಹುತದಲ್ಲಿ ಮೃತರಾದ ಇಡೀ ಕುಟುಂಬದವರ ಮನೆಗೆ ಇಂದು (ಗುರುವಾರ, ಮೇ.23) ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಪರಿಶೀಲನೆ ನಡೆಸಿದರು.
ಬಳಿಕ ಮೃತರ ಸಂಬಂಧಿಗಳಿಗೆ ಸಾಂತ್ವನ ಹೇಳಿ ಮೃತ ಕುಟುಂಬಕ್ಕೆ ಸಂತಾಪ ಸಲ್ಲಿಸಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ ಮೃತರಿಗೆ ತಲಾ 3 ಲಕ್ಷ ರೂನಂತೆ ಕುಟುಂಬಕ್ಕೆ 12 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಮಾಧ್ಯಮಗಳ ಜತೆ ಮಾತನಾಡುತ್ತಾ ಸಿಎಂ ಸಿದ್ದರಾಮಯ್ಯ, ಅನಿಲ ಸೋರಿಕೆಯಿಂದ ಕುಮಾರಸ್ವಾಮಿ ಎಂಬುವವರ ಇಡೀ ಕುಟುಂಬ ಸಾವನ್ನಪ್ಪಿದೆ. ಅವರ ಹೆಂಡತಿ ಇಬ್ಬರು ಮಕ್ಕಳು ಮೃತರಾಗಿದ್ದಾರೆ. ಅವರ ತಂದೆ ತಿಮ್ಮಯ್ಯ ಕಡೂರು ತಾಲೂಕಿನವರು. ಇಲ್ಲಿಗೆ 20 ವರ್ಷಗಳ ಹಿಂದೆಯೇ ಬಂದು ನೆಲಸಿದ್ದಾರೆ. ಕಡು ಬಡತನದಿಂದ ಬಂದವರಾಗಿದ್ದಾರೆ. ಹಾಗಾಗಿ ಅವರೆಲ್ಲರಿಗೂ ಸಾಂತ್ವಾನ ಹೇಳಿ ಪರಿಹಾರ ಘೋಷಣೆ ಮಾಡಿದ್ದೇನೆ. ಈ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರು ಘೋಷಿಸಿದ್ದು, ಅದನ್ನು ನಾನು ಅನುಮೋದಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಮಾಧ್ಯಮಳಿಗೆ ಮಾಹಿತಿ ನೀಡಿದರು.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…