ಮೈಸೂರು: ಇಲ್ಲಿನ ಯರಗನ ಹಳ್ಳಿಯಲ್ಲಿ ಅನಿಲ ಸೋರಿಕೆಯಿಂದ ಸಂಭವಿಸಿದ ಅನಾಹುತದಲ್ಲಿ ಮೃತರಾದ ಇಡೀ ಕುಟುಂಬದವರ ಮನೆಗೆ ಇಂದು (ಗುರುವಾರ, ಮೇ.23) ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಪರಿಶೀಲನೆ ನಡೆಸಿದರು.
ಬಳಿಕ ಮೃತರ ಸಂಬಂಧಿಗಳಿಗೆ ಸಾಂತ್ವನ ಹೇಳಿ ಮೃತ ಕುಟುಂಬಕ್ಕೆ ಸಂತಾಪ ಸಲ್ಲಿಸಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ ಮೃತರಿಗೆ ತಲಾ 3 ಲಕ್ಷ ರೂನಂತೆ ಕುಟುಂಬಕ್ಕೆ 12 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಮಾಧ್ಯಮಗಳ ಜತೆ ಮಾತನಾಡುತ್ತಾ ಸಿಎಂ ಸಿದ್ದರಾಮಯ್ಯ, ಅನಿಲ ಸೋರಿಕೆಯಿಂದ ಕುಮಾರಸ್ವಾಮಿ ಎಂಬುವವರ ಇಡೀ ಕುಟುಂಬ ಸಾವನ್ನಪ್ಪಿದೆ. ಅವರ ಹೆಂಡತಿ ಇಬ್ಬರು ಮಕ್ಕಳು ಮೃತರಾಗಿದ್ದಾರೆ. ಅವರ ತಂದೆ ತಿಮ್ಮಯ್ಯ ಕಡೂರು ತಾಲೂಕಿನವರು. ಇಲ್ಲಿಗೆ 20 ವರ್ಷಗಳ ಹಿಂದೆಯೇ ಬಂದು ನೆಲಸಿದ್ದಾರೆ. ಕಡು ಬಡತನದಿಂದ ಬಂದವರಾಗಿದ್ದಾರೆ. ಹಾಗಾಗಿ ಅವರೆಲ್ಲರಿಗೂ ಸಾಂತ್ವಾನ ಹೇಳಿ ಪರಿಹಾರ ಘೋಷಣೆ ಮಾಡಿದ್ದೇನೆ. ಈ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರು ಘೋಷಿಸಿದ್ದು, ಅದನ್ನು ನಾನು ಅನುಮೋದಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಮಾಧ್ಯಮಳಿಗೆ ಮಾಹಿತಿ ನೀಡಿದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…