ಬೆಂಗಳೂರು: ರಾಜ್ಯದಲ್ಲಿ ಪ್ರತಿದಿನ ಸರಾಸರಿ 72 ಲಕ್ಷ ಲೀಟರ್ ಉತ್ಪಾದನೆಯಾಗುತ್ತಿದ್ದ ಹಾಲು ಇಂದು ಒಂದು ಕೋಟಿ ಲೀಟರ್ ಗೆ ತಲುಪಿದೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ, ಈ ಶ್ರೇಯ ನಾಡಿನ ಪ್ರತಿಯೊಬ್ಬ ಶ್ರಮಜೀವಿ ಹೈನುಗಾರನಿಗೂ ಸಲ್ಲಬೇಕು ಎಂದು ತಿಳಿಸಿದ್ದಾರೆ.
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹೈನುಗಾರರಿಂದ ಖರೀದಿಸುವ ಹಾಲಿಗೆ ರೂ.3 ಹೆಚ್ಚಳ ನೀಡುತ್ತಿರುವುದು, ಉತ್ತಮ ಮುಂಗಾರಿನಿಂದಾಗಿ ಜಾನುವಾರುಗಳಿಗೆ ಹಸಿರು ಮೇವು ಲಭ್ಯವಾಗುತ್ತಿರುವುದು ಈ ಎಲ್ಲಾ ಕಾರಣದಿಂದಾಗಿ ಕಳೆದ ವರ್ಷ ನಿತ್ಯ ಸರಾಸರಿ 72 ಲಕ್ಷ ಲೀಟರ್ ಉತ್ಪಾದನೆಯಾಗುತ್ತಿದ್ದ ಹಾಲು ಇಂದು ಒಂದು ಕೋಟಿ ಲೀಟರ್ ಗೆ ತಲುಪಿದೆ.
ಯಾವ ಕೆಎಂಎಫ್ ಸಂಸ್ಥೆಯನ್ನು ಹಿಂದಿನ ಬಿಜೆಪಿ ಸರ್ಕಾರ ನಷ್ಟದ ಹಾದಿಗೆ ತಳ್ಳಿ ಗುಜರಾತ್ನ ಅಮೂಲ್ ಜೊತೆ ವಿನೀಲ ಮಾಡುವ ಕುತಂತ್ರ ನಡೆಸಿತ್ತೋ, ಕನ್ನಡಿಗ ರೈತರು ದಶಕಗಳ ಕಾಲ ಶ್ರಮದಿಂದ ಕಟ್ಟಿದ ಸಂಸ್ಥೆಯನ್ನು ಯಾರದೋ ಮರ್ಜಿಗೆ ಒಳಗಾಗಿ ವಿಲೀನದ ಹೆಸರಲ್ಲಿ ಮುಳುಗಿಸಲು ಹೊರಟಿತ್ತೋ, ಅದೇ ಕೆಎಂಎಫ್ ಇಂದು ಒಂದು ಕೋಟಿ ಲೀಟರ್ ಹಾಲನ್ನು ಸಂಗ್ರಹಿಸಿ, ಇತಿಹಾಸದಲ್ಲೇ ಹೊಸದೊಂದು ದಾಖಲೆ ಬರೆದಿದೆ ಎಂದು ಬಿಜೆಪಿಯನ್ನು ಟೀಕಿಸುವುದರ ಜೊತೆಗೆ ಕೆಎಂಎಫ್ನ ಸಾಧನೆಯನ್ನು ಸಿಎಂ ಸಿದ್ದರಾಮಯ್ಯ ಕೊಂಡಾಡಿದ್ದಾರೆ.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…
ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…
ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…
ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್ ಪೀಠದ ಕಡೆಗೆ ಪೇಪರ್ ಹರಿದು…
ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…