ಬೆಂಗಳೂರು : ಪ್ರಜಾಪ್ರಭುತ್ವಕ್ಕೆ ಬೆದರಿಕೆ ಹಾಗೂ ಸಮಾಜದ ದೃವೀಕರಣಕ್ಕೆ ಸುಳ್ಳು ಸುದ್ದಿಗಳು ಕಾರಣವಾಗಿದ್ದು, ಇದರ ನಿಯಂತ್ರಣ ಅತ್ಯಗತ್ಯ ಎಂದು ಅಭಿಪ್ರಾಯಪಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆ ಸೇರಿದಂತೆ ಅಗತ್ಯ ಇರುವ ಎಲ್ಲ ನಿಯಮ ಮತ್ತು ಕಾನೂನು ರೂಪಿಸುವ ಪ್ರಯತ್ನಕ್ಕೆ ಹಸಿರು ನಿಶಾನೆ ತೋರಿದರು.
ಸೋಮವಾರ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸೈಬರ್ ಸುರಕ್ಷತೆಗೆ ಸಂಬಂಧಿಸಿದ ಸಭೆಯಲ್ಲಿ, ಸುಳ್ಳು ಸುದ್ದಿಗಳು ಮತ್ತು ಸುಳ್ಳು ಸುದ್ದಿ ಸೃಷ್ಟಿಸುವ ಸಿಂಡಿಕೇಟ್ ಗಳ ಪತ್ತೆ, ಸುಳ್ಳು ಸುದ್ದಿ ಪ್ರಸಾರಕ್ಕೆ ತಡೆ, ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವ ಮೂರು ಹಂತಗಳ ಕ್ರಮಕ್ಕೆ ಅನುಮೋದನೆ ನೀಡಿದರು.
ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ರಚನೆ: ಫ್ಯಾಕ್ಟ್ ಚೆಕ್ ಘಟಕವು ಮೇಲುಸ್ತುವಾರಿ ಸಮಿತಿ, ಎಸ್ಒಪಿಸಿ ಪರಿಶೀಲನೆ, ನೋಡಲ್ ಅಧಿಕಾರಿಗಳ ನೇಮಕ ಸೇರಿದಂತೆ ಸತ್ಯ ತಪಾಸಣೆ ತಂಡ ವಿಶ್ಲೇಷಣ ತಂಡವನ್ನು ಒಳಗೊಳ್ಳಲಿದೆ ಹಾಗೂ ಸಾಮಥ್ರ್ಯ ವರ್ಧನೆ ತಂಡ ರಚನೆ ಮಾಡಿ ವ್ಯವಸ್ಥಿತವಾಗಿ ತಂತ್ರಜ್ಞಾನ ಬಳಕೆ ಮಾಡಬಹುದು ಎಂದು ಸಭೆಯಲ್ಲಿ ವಿವರಿಸಲಾಯಿತು.
ಬೆಂಗಳೂರು ಪೊಲೀಸ್ ಕೂಡ ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲವಾಗಿದ್ದರೂ, ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ಅಗತ್ಯವಿದೆ. ಎಐ(ಕೃತಕ ಬುದ್ಧಿಮತ್ತೆ) ಬಳಕೆ ಮಾಡಿ ಡೀಪ್ ಫೇಕ್ ಕೂಡ ಉಪಯೋಗ ಮಾಡಲಾಗುತ್ತಿದೆ. ಇದು ಸುಳ್ಳು ಸುದ್ದಿ ಹರಡುವವರಿಗೆ ಅನುಕೂಲ ವಾಗುತ್ತದೆ ಎಂದು ಐಟಿ, ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.
ಫೇಕ್(ಸುಳ್ಳು) ಸುದ್ದಿ ಜಾಲ ಜಾಗತಿಕವಾಗಿ ಬಾಲ್ಯಾವಸ್ಥೆಯಲ್ಲಿದ್ದರೂ ಕಾಲಾಂತರದಲ್ಲಿ ವ್ಯಾಪಕವಾಗಿ ಬಳಕೆಯಾಗುವ ಸಾಧ್ಯತೆಯೂ ಇದೆ. ಸುಳ್ಳು ಸುದ್ದಿ ಬಳಕೆ ಮಾಡುವವರಿಗೆ ಶಿಕ್ಷೆ ಕೂಡ ಆಗಬೇಕು. ಈ ಸಮಿತಿ ಕೂಡಲೆ ರಚಿಸಿ ಸಾಮಥ್ರ್ಯ ಹೆಚ್ಚಿಸುವ ಕೆಲಸ ಆಗಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಭಿಪ್ರಾಯಪಟ್ಟರು.
ಸುಳ್ಳು ಸುದ್ದಿ ಗುರುತಿಸುವುದು, ಕಾನೂನು ಸುವ್ಯವಸ್ಥೆ ಕಾಪಾಡಲು ಇದು ಅತ್ಯಗತ್ಯ. ಆರಂಭಿಕ ಹಂತದಲ್ಲಿ ಐಟಿ, ಬಿಟಿ ಇಲಾಖೆ ಸಹಕರಿಸುತ್ತದೆ. ಕಾನೂನಿನ ವ್ಯಾಪ್ತಿಯಲ್ಲಿ ತರಲು ಕ್ರಮ ವಹಿಸಬೇಕು ನಂತರ ಘಟಕವು ಗೃಹ ಇಲಾಖೆಯ ವ್ಯಾಪ್ತಿಯಲ್ಲಿಯೆ ಇರುವುದು ಸೂಕ್ತ ಎಂದು ಪ್ರಿಯಾಂಕ್ ಖರ್ಗೆ ಅಭಿಪ್ರಾಯಪಟ್ಟರು.
ಕಂದಾಯ ಸಚಿವ ಕೃಷ್ಣಬೈರೇಗೌಡ ಮಾತನಾಡಿ, ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆಯಿಂದ ಸುಳ್ಳುಸುದ್ದಿ ಹರಡುವುದನ್ನು ನಿಯಂತ್ರಿಸಿ ಇದು ಶಿಕ್ಷಾರ್ಹ ಅಪರಾಧ ಎಂದು ಜನರಿಗೆ ಮನವರಿಕೆಯಾಗಬೇಕು ಎಂದರು.
ಸಭೆಯಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಪೆÇಲೀಸ್ ಮಹಾನಿರ್ದೇಶಕ ಡಾ.ಅಲೋಕ್ ಮೋಹನ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ನಿಂಬಾಳ್ಕರ್ ಉಪಸ್ಥಿತರಿದ್ದರು.
ಉತ್ತರ ಪ್ರದೇಶ: ಇಲ್ಲಿನ ಪ್ರಯಾಗ್ರಾಜ್ನಲ್ಲಿ ತರಬೇತಿ ಹಾರಾಟ ನಡೆಸುತ್ತಿದ್ದಾಗ ಭಾರತೀಯ ವಾಯುಪಡೆಯ ಮೈಕ್ರೋಲೈಟ್ ವಿಮಾನವೊಂದು ಅಪಘಾತಕ್ಕೀಡಾಗಿದೆ. ವಿಮಾನದಲ್ಲಿದ್ದ ಇಬ್ಬರೂ ಪೈಲಟ್ಗಳನ್ನು…
ಬೆಂಗಳೂರು: ಕರ್ನಾಟಕದಲ್ಲಿ ಜೀವನೋಪಾಯಕ್ಕೆ ಅದರಲ್ಲೂ ಮಹಿಳೆಯರ ಜೀವನೋಪಾಯಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಇದರ ಜೊತೆಗೆ ನೃಸರ್ಗಿಕ ಕೃಷಿ ಪದ್ಧತಿಯ ಬಗ್ಗೆ…
ಮೈಸೂರು: ಪ್ರಸಾದ್ ಯೋಜನೆಯಡಿ ಚಾಮುಂಡಿ ಬೆಟ್ಟದ ಪಾರಂಪರಿಕತೆಗೆ ಯಾವುದೇ ಧಕ್ಕೆ ಆಗದಂತೆ ಅಭಿವೃದ್ಧಿ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ…
ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಮೆಸೇಜ್, ಕಮೆಂಟ್ ಮಾಡಿ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ದರ್ಶನ್ ಪತ್ನಿ ವಿಜಯಲಕ್ಷ್ಮೀಗೆ ಸಿಸಿಬಿ ಪೊಲೀಸರು…
ಹಾಸನ: ಕುಡಿದ ಮತ್ತಿನಲ್ಲಿ ಗೆಳೆಯರು ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಕಬ್ಬೂರು ಗ್ರಾಮದಲ್ಲಿ ನಡೆದಿದೆ. ಗಣೇಶ್…
ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟವನ್ನು ಉಳಿಸುವಂತೆ ಒತ್ತಾಯಿಸಿ ಸಾರ್ವಜನಿಕರು ಹಾಗೂ ಪರಿಸರವಾದಿಗಳು ಪ್ರತಿಭಟನೆ ನಡೆಸಿದರು. ಚಾಮುಂಡೇಶ್ವರಿ ದೇವಸ್ಥಾನದ…