BREAKING NEWS

ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ರಚನೆಗೆ ಸಿಎಂ ಸಿದ್ದರಾಮಯ್ಯ ಅನುಮೋದನೆ

ಬೆಂಗಳೂರು : ಪ್ರಜಾಪ್ರಭುತ್ವಕ್ಕೆ ಬೆದರಿಕೆ ಹಾಗೂ ಸಮಾಜದ ದೃವೀಕರಣಕ್ಕೆ ಸುಳ್ಳು ಸುದ್ದಿಗಳು ಕಾರಣವಾಗಿದ್ದು, ಇದರ ನಿಯಂತ್ರಣ ಅತ್ಯಗತ್ಯ ಎಂದು ಅಭಿಪ್ರಾಯಪಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆ ಸೇರಿದಂತೆ ಅಗತ್ಯ ಇರುವ ಎಲ್ಲ ನಿಯಮ ಮತ್ತು ಕಾನೂನು ರೂಪಿಸುವ ಪ್ರಯತ್ನಕ್ಕೆ ಹಸಿರು ನಿಶಾನೆ ತೋರಿದರು.

ಸೋಮವಾರ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸೈಬರ್ ಸುರಕ್ಷತೆಗೆ ಸಂಬಂಧಿಸಿದ ಸಭೆಯಲ್ಲಿ, ಸುಳ್ಳು ಸುದ್ದಿಗಳು ಮತ್ತು ಸುಳ್ಳು ಸುದ್ದಿ ಸೃಷ್ಟಿಸುವ ಸಿಂಡಿಕೇಟ್ ಗಳ ಪತ್ತೆ, ಸುಳ್ಳು ಸುದ್ದಿ ಪ್ರಸಾರಕ್ಕೆ ತಡೆ, ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವ ಮೂರು ಹಂತಗಳ ಕ್ರಮಕ್ಕೆ ಅನುಮೋದನೆ ನೀಡಿದರು.

ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ರಚನೆ: ಫ್ಯಾಕ್ಟ್ ಚೆಕ್ ಘಟಕವು ಮೇಲುಸ್ತುವಾರಿ ಸಮಿತಿ, ಎಸ್‍ಒಪಿಸಿ ಪರಿಶೀಲನೆ, ನೋಡಲ್ ಅಧಿಕಾರಿಗಳ ನೇಮಕ ಸೇರಿದಂತೆ ಸತ್ಯ ತಪಾಸಣೆ ತಂಡ ವಿಶ್ಲೇಷಣ ತಂಡವನ್ನು ಒಳಗೊಳ್ಳಲಿದೆ ಹಾಗೂ ಸಾಮಥ್ರ್ಯ ವರ್ಧನೆ ತಂಡ ರಚನೆ ಮಾಡಿ ವ್ಯವಸ್ಥಿತವಾಗಿ ತಂತ್ರಜ್ಞಾನ ಬಳಕೆ ಮಾಡಬಹುದು ಎಂದು ಸಭೆಯಲ್ಲಿ ವಿವರಿಸಲಾಯಿತು.

ಬೆಂಗಳೂರು ಪೊಲೀಸ್ ಕೂಡ ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲವಾಗಿದ್ದರೂ, ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ಅಗತ್ಯವಿದೆ. ಎಐ(ಕೃತಕ ಬುದ್ಧಿಮತ್ತೆ) ಬಳಕೆ ಮಾಡಿ ಡೀಪ್ ಫೇಕ್ ಕೂಡ ಉಪಯೋಗ ಮಾಡಲಾಗುತ್ತಿದೆ. ಇದು ಸುಳ್ಳು ಸುದ್ದಿ ಹರಡುವವರಿಗೆ ಅನುಕೂಲ ವಾಗುತ್ತದೆ ಎಂದು ಐಟಿ, ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ಫೇಕ್(ಸುಳ್ಳು) ಸುದ್ದಿ ಜಾಲ ಜಾಗತಿಕವಾಗಿ ಬಾಲ್ಯಾವಸ್ಥೆಯಲ್ಲಿದ್ದರೂ ಕಾಲಾಂತರದಲ್ಲಿ ವ್ಯಾಪಕವಾಗಿ ಬಳಕೆಯಾಗುವ ಸಾಧ್ಯತೆಯೂ ಇದೆ. ಸುಳ್ಳು ಸುದ್ದಿ ಬಳಕೆ ಮಾಡುವವರಿಗೆ ಶಿಕ್ಷೆ ಕೂಡ ಆಗಬೇಕು. ಈ ಸಮಿತಿ ಕೂಡಲೆ ರಚಿಸಿ ಸಾಮಥ್ರ್ಯ ಹೆಚ್ಚಿಸುವ ಕೆಲಸ ಆಗಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಭಿಪ್ರಾಯಪಟ್ಟರು.

ಸುಳ್ಳು ಸುದ್ದಿ ಗುರುತಿಸುವುದು, ಕಾನೂನು ಸುವ್ಯವಸ್ಥೆ ಕಾಪಾಡಲು ಇದು ಅತ್ಯಗತ್ಯ. ಆರಂಭಿಕ ಹಂತದಲ್ಲಿ ಐಟಿ, ಬಿಟಿ ಇಲಾಖೆ ಸಹಕರಿಸುತ್ತದೆ. ಕಾನೂನಿನ ವ್ಯಾಪ್ತಿಯಲ್ಲಿ ತರಲು ಕ್ರಮ ವಹಿಸಬೇಕು ನಂತರ ಘಟಕವು ಗೃಹ ಇಲಾಖೆಯ ವ್ಯಾಪ್ತಿಯಲ್ಲಿಯೆ ಇರುವುದು ಸೂಕ್ತ ಎಂದು ಪ್ರಿಯಾಂಕ್ ಖರ್ಗೆ ಅಭಿಪ್ರಾಯಪಟ್ಟರು.

ಕಂದಾಯ ಸಚಿವ ಕೃಷ್ಣಬೈರೇಗೌಡ ಮಾತನಾಡಿ, ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆಯಿಂದ ಸುಳ್ಳುಸುದ್ದಿ ಹರಡುವುದನ್ನು ನಿಯಂತ್ರಿಸಿ ಇದು ಶಿಕ್ಷಾರ್ಹ ಅಪರಾಧ ಎಂದು ಜನರಿಗೆ ಮನವರಿಕೆಯಾಗಬೇಕು ಎಂದರು.

ಸಭೆಯಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಪೆÇಲೀಸ್ ಮಹಾನಿರ್ದೇಶಕ ಡಾ.ಅಲೋಕ್ ಮೋಹನ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ನಿಂಬಾಳ್ಕರ್ ಉಪಸ್ಥಿತರಿದ್ದರು.

andolanait

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

5 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

5 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

5 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

5 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

5 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

5 hours ago