BREAKING NEWS

ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ರಚನೆಗೆ ಸಿಎಂ ಸಿದ್ದರಾಮಯ್ಯ ಅನುಮೋದನೆ

ಬೆಂಗಳೂರು : ಪ್ರಜಾಪ್ರಭುತ್ವಕ್ಕೆ ಬೆದರಿಕೆ ಹಾಗೂ ಸಮಾಜದ ದೃವೀಕರಣಕ್ಕೆ ಸುಳ್ಳು ಸುದ್ದಿಗಳು ಕಾರಣವಾಗಿದ್ದು, ಇದರ ನಿಯಂತ್ರಣ ಅತ್ಯಗತ್ಯ ಎಂದು ಅಭಿಪ್ರಾಯಪಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆ ಸೇರಿದಂತೆ ಅಗತ್ಯ ಇರುವ ಎಲ್ಲ ನಿಯಮ ಮತ್ತು ಕಾನೂನು ರೂಪಿಸುವ ಪ್ರಯತ್ನಕ್ಕೆ ಹಸಿರು ನಿಶಾನೆ ತೋರಿದರು.

ಸೋಮವಾರ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸೈಬರ್ ಸುರಕ್ಷತೆಗೆ ಸಂಬಂಧಿಸಿದ ಸಭೆಯಲ್ಲಿ, ಸುಳ್ಳು ಸುದ್ದಿಗಳು ಮತ್ತು ಸುಳ್ಳು ಸುದ್ದಿ ಸೃಷ್ಟಿಸುವ ಸಿಂಡಿಕೇಟ್ ಗಳ ಪತ್ತೆ, ಸುಳ್ಳು ಸುದ್ದಿ ಪ್ರಸಾರಕ್ಕೆ ತಡೆ, ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವ ಮೂರು ಹಂತಗಳ ಕ್ರಮಕ್ಕೆ ಅನುಮೋದನೆ ನೀಡಿದರು.

ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ರಚನೆ: ಫ್ಯಾಕ್ಟ್ ಚೆಕ್ ಘಟಕವು ಮೇಲುಸ್ತುವಾರಿ ಸಮಿತಿ, ಎಸ್‍ಒಪಿಸಿ ಪರಿಶೀಲನೆ, ನೋಡಲ್ ಅಧಿಕಾರಿಗಳ ನೇಮಕ ಸೇರಿದಂತೆ ಸತ್ಯ ತಪಾಸಣೆ ತಂಡ ವಿಶ್ಲೇಷಣ ತಂಡವನ್ನು ಒಳಗೊಳ್ಳಲಿದೆ ಹಾಗೂ ಸಾಮಥ್ರ್ಯ ವರ್ಧನೆ ತಂಡ ರಚನೆ ಮಾಡಿ ವ್ಯವಸ್ಥಿತವಾಗಿ ತಂತ್ರಜ್ಞಾನ ಬಳಕೆ ಮಾಡಬಹುದು ಎಂದು ಸಭೆಯಲ್ಲಿ ವಿವರಿಸಲಾಯಿತು.

ಬೆಂಗಳೂರು ಪೊಲೀಸ್ ಕೂಡ ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲವಾಗಿದ್ದರೂ, ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ಅಗತ್ಯವಿದೆ. ಎಐ(ಕೃತಕ ಬುದ್ಧಿಮತ್ತೆ) ಬಳಕೆ ಮಾಡಿ ಡೀಪ್ ಫೇಕ್ ಕೂಡ ಉಪಯೋಗ ಮಾಡಲಾಗುತ್ತಿದೆ. ಇದು ಸುಳ್ಳು ಸುದ್ದಿ ಹರಡುವವರಿಗೆ ಅನುಕೂಲ ವಾಗುತ್ತದೆ ಎಂದು ಐಟಿ, ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ಫೇಕ್(ಸುಳ್ಳು) ಸುದ್ದಿ ಜಾಲ ಜಾಗತಿಕವಾಗಿ ಬಾಲ್ಯಾವಸ್ಥೆಯಲ್ಲಿದ್ದರೂ ಕಾಲಾಂತರದಲ್ಲಿ ವ್ಯಾಪಕವಾಗಿ ಬಳಕೆಯಾಗುವ ಸಾಧ್ಯತೆಯೂ ಇದೆ. ಸುಳ್ಳು ಸುದ್ದಿ ಬಳಕೆ ಮಾಡುವವರಿಗೆ ಶಿಕ್ಷೆ ಕೂಡ ಆಗಬೇಕು. ಈ ಸಮಿತಿ ಕೂಡಲೆ ರಚಿಸಿ ಸಾಮಥ್ರ್ಯ ಹೆಚ್ಚಿಸುವ ಕೆಲಸ ಆಗಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಭಿಪ್ರಾಯಪಟ್ಟರು.

ಸುಳ್ಳು ಸುದ್ದಿ ಗುರುತಿಸುವುದು, ಕಾನೂನು ಸುವ್ಯವಸ್ಥೆ ಕಾಪಾಡಲು ಇದು ಅತ್ಯಗತ್ಯ. ಆರಂಭಿಕ ಹಂತದಲ್ಲಿ ಐಟಿ, ಬಿಟಿ ಇಲಾಖೆ ಸಹಕರಿಸುತ್ತದೆ. ಕಾನೂನಿನ ವ್ಯಾಪ್ತಿಯಲ್ಲಿ ತರಲು ಕ್ರಮ ವಹಿಸಬೇಕು ನಂತರ ಘಟಕವು ಗೃಹ ಇಲಾಖೆಯ ವ್ಯಾಪ್ತಿಯಲ್ಲಿಯೆ ಇರುವುದು ಸೂಕ್ತ ಎಂದು ಪ್ರಿಯಾಂಕ್ ಖರ್ಗೆ ಅಭಿಪ್ರಾಯಪಟ್ಟರು.

ಕಂದಾಯ ಸಚಿವ ಕೃಷ್ಣಬೈರೇಗೌಡ ಮಾತನಾಡಿ, ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆಯಿಂದ ಸುಳ್ಳುಸುದ್ದಿ ಹರಡುವುದನ್ನು ನಿಯಂತ್ರಿಸಿ ಇದು ಶಿಕ್ಷಾರ್ಹ ಅಪರಾಧ ಎಂದು ಜನರಿಗೆ ಮನವರಿಕೆಯಾಗಬೇಕು ಎಂದರು.

ಸಭೆಯಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಪೆÇಲೀಸ್ ಮಹಾನಿರ್ದೇಶಕ ಡಾ.ಅಲೋಕ್ ಮೋಹನ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ನಿಂಬಾಳ್ಕರ್ ಉಪಸ್ಥಿತರಿದ್ದರು.

andolanait

Recent Posts

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…

9 hours ago

ಪ.ಬಂಗಾಳ | ವಿಟೋ ಅಧಿಕಾರ ಬಳಸಿ ಮಂತ್ರಿಮಂಡಳ ವಿಸರ್ಜಿಸಿದ ರಾಜ್ಯಪಾಲ ; ದೀದಿಗೆ ಹಿನ್ನೆಡೆ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…

9 hours ago

ಹನೂರು | ಕಾಡು ಹಂದಿ ದಾಳಿ ; ರೈತನಿಗೆ ಗಂಭೀರ ಗಾಯ

ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…

9 hours ago

ಡಿಎಂಕೆ-ಎಐಎಡಿಎಂಕೆ ಮೈತ್ರಿ ವದಂತಿ ; ಸ್ಟಾಲಿನ್‌ ಹೇಳಿದ್ದೇನು?

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…

10 hours ago

ಮೇಲು-ಕೀಳು ಕಳೆಯಲಿ ; ಸರ್ವರೂ ಒಂದೇ ಎಂಬ ಮನೋಭಾವ ಮೂಡಲಿ : ಮೋಹನ್‌ ಭಾಗವತ್‌

ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…

10 hours ago

ಬೆಂಗಳೂರು ಕೈತಪ್ಪಿದ ಐಪಿಎಲ್‌ ಫೈನಲ್‌ ಪಂದ್ಯ : ಕೆಎಸ್‌ಸಿಎ ಹೇಳಿದ್ದೇನು?

ಬೆಂಗಳೂರು : ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…

10 hours ago