ಬೆಂಗಳೂರು: ಎನ್ಸಿಪಿ ಮುಖ್ಯಸ್ಥ ಮತ್ತು ರಾಜ್ಯಸಭಾ ಸದಸ್ಯ ಶರದ್ ಪವಾರ್ ನೇತೃತ್ವದಲ್ಲಿ ಧಂಗರ್ ಸಮುದಾಯವು ಭಾನುವಾರ ಪುಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸನ್ಮಾನಿಸಲಿದೆ ಎಂದು ಸಿಎಂ ಕಚೇರಿ ಅಧಿಕೃತ ಪ್ರಕಟಣೆ ತಿಳಿಸಿದೆ. ದೊರೆ ಅಹಲ್ಯಾದೇವಿ ಜನ್ಮದಿನದ ಸಂದರ್ಭದಲ್ಲಿ ಈ ಸನ್ಮಾನ ನಡೆಯಲಿದೆ.
ಪವಾರ್ ಅವರು ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಆಹ್ವಾನ ನೀಡಿದ್ದು, ಕರ್ನಾಟಕದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದ್ದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಇತ್ತೀಚಿನ ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶಗಳು ಜಾತ್ಯತೀತ ಶಕ್ತಿಗಳ ಬಲವನ್ನು ಪ್ರದರ್ಶಿಸಿವೆ ಮತ್ತು ರಾಷ್ಟ್ರದ ರಾಜಕೀಯ ಚಲನವಲನದಲ್ಲಿ ಬದಲಾವಣೆಗೆ ದಾರಿ ಮಾಡಿಕೊಟ್ಟಿವೆ ಎಂದು ಅವರು ಹೇಳಿದ್ದಾರೆ.
“ಚುನಾವಣೆ ಪ್ರತಿಧ್ವನಿಯು ಮಹಾರಾಷ್ಟ್ರಕ್ಕೂ ವ್ಯಾಪಿಸಿದ್ದು, ಅಲ್ಲಿನ ಜನರು ತಮ್ಮನ್ನು ಸನ್ಮಾನಿಸುವ ಉತ್ಸಾಹದಲ್ಲಿದ್ದಾರೆ. ಪುಣೆ ಜಿಲ್ಲೆಯ ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಮತ್ತು ಅಹಲ್ಯಾದೇವಿ ವಿಕಾಸ ಪ್ರತಿಷ್ಠಾನದ ಅಧ್ಯಕ್ಷ ವಿಶ್ವಾಸ್ ಡಿಯೋಕಾಟೆ ನೇತೃತ್ವದ ನಿಯೋಗ ಅಹಲ್ಯಾದೇವಿ ಜನ್ಮ ದಿನಾಚರಣೆಯ ಆಹ್ವಾನ ನೀಡಲಿದೆ ಎಂದು ಅವರು ತಿಳಿಸಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…