ಬೆಂಗಳೂರು : ಇತ್ತೀಚೆಗೆ ಚೀನಾದಲ್ಲಿ ನಡೆದ 19ನೇ ಏಷ್ಯನ್ ಗೇಮ್ಸ್ನಲ್ಲಿ ಪದಕ ಪಡೆದ ರಾಜ್ಯದ ಕ್ರೀಡಾಪಟುಗಳು ಮತ್ತು ತರಬೇತುದಾರರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಸನ್ಮಾನಿಸಿ, ನಗದು ಪುರಸ್ಕಾರ ನೀಡಿ ಗೌರವಿಸಿದರು.
ಬಳಿಕ ಮಾತನಾಡಿದ ಅವರು, ʻʻಪೊಲೀಸ್ ಮತ್ತು ಅರಣ್ಯ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ ನೇಮಕಾತಿಯಲ್ಲಿ ಶೇ.3 ರಷ್ಟು ಮೀಸಲಾತಿ ನೀಡಲಾಗುತ್ತಿದ್ದು, ಇತರ ಇಲಾಖೆಗಳಲ್ಲಿಯೂ ಶೇ.2 ರಷ್ಟು ಮೀಸಲಾತಿ ನೀಡುವ ಕುರಿತು ಸಕಾರಾತ್ಮಕವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದುʻʻ ಎಂದು ಭರವಸೆ ನೀಡಿದರು.
ʻʻಈ ಬಾರಿ ಚೀನಾದಲ್ಲಿ ನಡೆದ ಏಷ್ಯನ್ ಗೇಮ್ಸ್ನಲ್ಲಿ ಭಾರತೀಯ ಕ್ರೀಡಾಪಟುಗಳು ಅತ್ಯಧಿಕ ಪದಕಗಳನ್ನು ಗೆದ್ದಿದ್ದಾರೆ. ಕಳೆದ ಬಾರಿ 70, ಈ ಬಾರಿ 107 ಪದಕ ಗೆದ್ದಿದ್ದಾರೆ. ದೇಶದ ಕ್ರೀಡಾಪಟುಗಳ ಸಾಧನೆ ದೇಶ ಮತ್ತು ರಾಜ್ಯದ ಗೌರವ ಹೆಚ್ಚಿಸಿದೆ. ಸಮಸ್ತ ಕನ್ನಡಿಗರಿಗೆ ಇದು ಹೆಮ್ಮೆಯ ವಿಷಯ. ಇಡೀ ಜಗತ್ತಿನಲ್ಲಿ ಜನಸಂಖ್ಯೆಯಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ. ಏಷ್ಯನ್ ಗೇಮ್ಸ್ನಲ್ಲಿಯೂ ಮೊದಲ-ಎರಡನೇ ಸ್ಥಾನ ಬಂದರೆ ಇನ್ನಷ್ಟು ಗೌರವ ಹೆಚ್ಚಲಿದೆʻʻ ಎಂದು ನುಡಿದರು.
ʻʻರಾಜ್ಯ ಸರ್ಕಾರ ಕ್ರೀಡೆಗೆ ಉತ್ತೇಜನ ನೀಡಲು ಬದ್ಧವಾಗಿದ್ದು, ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದಾಗ ಏಷ್ಯನ್ ಗೇಮ್ಸ್, ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಬಹುಮಾನ ಮೊತ್ತ ನೀಡುವ ಕುರಿತು ಘೋಷಿಸಿದ್ದೆ. ಅತಿ ಹೆಚ್ಚು ಮೊತ್ತದ ಬಹುಮಾನ ಘೋಷಿಸಿದ ಮೊದಲ ರಾಜ್ಯ ನಮ್ಮದುʻʻ ಎಂದು ತಿಳಿಸಿದರು.
ʻʻಈಗ ನಮ್ಮ ರಾಜ್ಯದಿಂದ 8 ಜನ ಪದಕ ಪಡೆದಿದ್ದಾರೆ, ಸರ್ಕಾರ ಮತ್ತು ಏಳು ಕೋಟಿ ಕನ್ನಡಿಗರ ವತಿಯಿಂದ ಅಭಿನಂದನೆಗಳು. ಅಂತರರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆಲ್ಲುವುದು ಸಣ್ಣ ವಿಷಯವಲ್ಲ. ಇದಕ್ಕೆ ಅಪಾರ ಪರಿಶ್ರಮದ ಅಗತ್ಯವಿದೆ. ಇದು ಅದ್ಭುತ ಸಾಧನೆ. ಭಾರತೀಯ ಕ್ರೀಡಾಪಟುಗಳು ಒಲಿಂಪಿಕ್ಸ್ನಲ್ಲಿಯೂ ಹೆಚ್ಚೆಚ್ಚು ಪದಕ ಗೆಲ್ಲುವಂತಾಗಲಿ ಎಂದು ಶುಭ ಹಾರೈಸುತ್ತೇನೆʻʻ ಎಂದು ಅವರು ಹಾರೈಸಿದರು.
ಈ ಸಂದರ್ಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾಗೇಂದ್ರ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು ಮತ್ತು ನಸೀರ್ ಅಹ್ಮದ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…