BREAKING NEWS

ನೈತಿಕ ಪೊಲೀಸ್ ಗಿರಿ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು : ನೈತಿಕ ಪೊಲೀಸ್ ಗಿರಿ ಮಾಡುವವರ‌ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಪ್ರಕರಣಕ್ಕೆ ಆಯಾ ವಿಭಾಗದ ಡಿಸಿಪಿ ಹಾಗೂ ಎಸ್​ಪಿ ಅವರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸರಿಗೆ ಎಚ್ಚರಿಕೆ ನೀಡಿದ್ದಾರೆ. ಇಂದು ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಈ ಸೂಚನೆ ನೀಡಲಾಗಿದೆ.
ನಾಲ್ಕು ವರ್ಷ ಬಿಜೆಪಿ ಅಧಿಕಾರದಲ್ಲಿದ್ದಾಗ ಏನು ಮಾಡಿದ್ದೀರಿ ಅಂತಾ ಗೊತ್ತಿದೆ. ‌

ಆ ತಪ್ಪು ಮರುಕಳಿಸಬಾರದು ಎಂದು ಸೂಚಿಸಿದ ಸಿಎಂ ಸಿದ್ದರಾಮಯ್ಯ, ರೌಡಿಸಂ ಸೇರಿ ಕಾನೂನು ಬಾಹಿರ ಚಟುವಟಿಕೆ ನಿಯಂತ್ರಣ ಅಗಬೇಕು. ಇಲ್ಲಿಗಲ್ ಕ್ಲಬ್ ನಡೆಸಲು ಅವಕಾಶ ನೀಡಬಾರದು. ನೈತಿಕ ಪೊಲೀಸ್ ಗಿರಿ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಆಯಾ ವಿಭಾಗದ ಡಿಸಿಪಿ ಹಾಗೂ ಎಸ್​ಪಿ ಅವರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದರು.
ಯಾರಿಗೂ ತಾರತಮ್ಯ ಮಾಡದೆ ಕಾನೂನು ಪ್ರಕಾರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ. ಯಾವುದೇ ಕಾರಣಕ್ಕೂ ಕಾನೂನು ಸುವ್ಯವಸ್ಥೆ ಹದಗೆಡಬಾರದು. ಚುನಾವಣೆಯಲ್ಲಿ ಯಾವ ರೀತಿ ಕೆಲಸ ಮಾಡಿದ್ದೀರಾ ಅಂತಾ ಗೊತ್ತಿದೆ. ಮುಂದೆ ಯಾರಿಗೂ ತಾರತಮ್ಯ ಮಾಡಬೇಡಿ. ಮುಂದೆ ಜಿಲ್ಲಾ ಎಸ್​​ಪಿಗಳ ಜೊತೆ ಸಭೆ ಮಾಡುತ್ತೇವೆ ಎಂದರು.

ಅಕ್ರಮ ನೈಟ್ ಕ್ಲಬ್​​ಗಳ ಮೇಲೂ ಪೊಲೀಸರು ನಿಗಾ ಇಡಬೇಕು. ಡ್ರಗ್ಸ್​​, ಅಕ್ರಮ ಚಟುವಟಿಕೆ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ. ಸಾಮಾಜಿಕ ಜಾಲತಾಣಗಳ ಮೇಲೆ ಹೆಚ್ಚು ನಿಗಾ ಇಡಬೇಕು. ಸಾಮಾಜಿಕ ಜಾಲತಾಣದಲ್ಲಿ ತೇಜೋವಧೆ ಮಾಡಿದರೆ ಸುಮೋಟೋ ಕೇಸ್ ದಾಖಲಿಸಿ ಕ್ರಮ ಪ್ರಕರಣ ಹಾಕಿರುವ ಬಗ್ಗೆ ಹಾಗೂ ಬಿಜೆಪಿ ವಿರುದ್ಧ ಪ್ರಕರಣ ದಾಖಲಿಸದೇ ಇರುವ ವಿಚಾರವೂ ಸಭೆಯಲ್ಲಿ ಚರ್ಚೆ‌ ನಡೆಯಿತು.

ಸಭೆಯಲ್ಲಿ ಡಿಜಿ ಐಜಿಪಿ ಅಲೋಕ್ ಮೋಹನ್, ಬೆಂಗಳೂರು ನಗರ ಪೊಲೀಸ್ ಆಯುಕ್ತ​​ ಪ್ರತಾಪ್ ರೆಡ್ಡಿ, ಸಚಿವರಾದ ಮುನಿಯಪ್ಪ, ಜಮೀರ್ ಅಹಮದ್ ಖಾನ್, ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್​​, ಸಿಎಂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್​ ಉಪಸ್ಥಿತರಿದ್ದರು.

lokesh

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

17 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

21 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

21 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

21 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

21 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

22 hours ago