BREAKING NEWS

ಪ್ರವಾಹ, ಬರಗಾಲ ಬಂದಾಗ ಬರಲಿಲ್ಲ; ಚುನಾವಣೆ ಬಂತು ಓಡಿ ಬಂದ್ರಿ-ಸುಳ್ಳು ಹೇಳಿ ಹೋದ್ರಿ: ಸಿಎಂ ವ್ಯಂಗ್ಯ!

ಮೈಸೂರು : ಮೋದಿಯವರೇ ಚುನಾವಣೆ ಟೈಮಲ್ಲಿ ಬಿಟ್ರೆ ಬೇರೆ ಟೈಮಲ್ಲಿ ಕರ್ನಾಟಕ ನೆನಪಾಗಲ್ವಾ ನಿಮಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾರವಾಗಿ ಪ್ರಶ್ನಿಸಿದರು.

ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಎನ್.ಆರ್.ಮೊಹಲ್ಲಾದಲ್ಲಿ ನಡೆದ ‘ಪ್ರಜಾಧ್ವನಿ-2’ ಜನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ರಾಜ್ಯಕ್ಕೆ ಪ್ರವಾಹ ಬಂದಾಗಲೂ ಬರಲಿಲ್ಲ, ಬರಗಾಲ ಬಂದಾಗಲೂ ಬರಲಿಲ್ಲ. ಚುನಾವಣೆ ಬಂತು ಓಡಿ ಬಂದ್ರಿ. ಸುಳ್ಳು ಹೇಳಿ ಹೋದ್ರಿ. ಯಾವ‌ ಮುಖ ಹೊತ್ತುಕೊಂಡು ರಾಜ್ಯಕ್ಕೆ ಬಂದ್ರಿ? ಇಷ್ಟೊಂದು ಸುಳ್ಳು ಹೇಳೋಕೇ ಬಂದ್ರಾ ಇಲ್ಲಿಗೆ ಎಂದು ಪ್ರಶ್ನಿಸಿದರು.

ಬಾಂಡ್ ಗಳ ಮೂಲಕ ಸಂಗ್ರಹಿಸಿದ 7600 ಕೋಟಿಗೆ ನೀವು ತೆರಿಗೆ ಕಟ್ಟಿಲ್ಲ? ಇದು ಕ್ರೈಂ ಅಲ್ವೇ? ಈ ಕ್ರೈಂನ ಹೊಣೆ ಹೊರುವವರು ಯಾರು? ಉತ್ತರ ಕೊಡಿ ಮೋದಿಯವರೇ ಎಂದು ಸಿ.ಎಂ.ಆಗ್ರಹಿಸಿದರು.

ನಮ್ಮ ರಾಜ್ಯದ ಜನ ಬರಗಾಲದಲ್ಲಿ ಬೆಂದಿದ್ದಾರೆ. ನಮ್ಮ ರೈತರು ಕಷ್ಟದಲ್ಲಿದ್ದಾರೆ. ನಮ್ಮ ಪಾಲಿನ ಹಣ ಕೊಡಿ ಎಂದು ಕೇಳಿಕೊಂಡಿದ್ದೆವು. ನಾನೇ ಬಂದು ನಿಮ್ಮನ್ನು ಮತ್ತು ಅಮಿತ್ ಶಾ ಇಬ್ಬರನ್ನೂ ಭೇಟಿ ಮಾಡಿ ಮನವಿ ಕೊಟ್ಟಿದ್ದೆನ್ನೆಲ್ಲಾ, ಇವತ್ತಿನವರೆಗೂ ಒಂದೇ ಒಂದು ರೂಪಾಯಿಯನ್ನೂ ರಾಜ್ಯಕ್ಜೆ ಕೊಡಲಿಲ್ಲವಲ್ಲಾ? ಯಾವ ಮುಖ ಹೊತ್ತುಕೊಂಡು ರಾಜ್ಯಕ್ಕೆ ಬಂದು ಮತ ಕೇಳ್ತಾ ಇದೀರಿ ಎಂದು ಖಾರವಾಗಿ ಪ್ರಶ್ನಿಸಿದರು.

ಮೋದಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಸ್ವತಂತ್ರ ಭಾರತದಲ್ಲಿ ಮೋದಿಯಷ್ಟು ಸುಳ್ಳು ಹೇಳುವ ಪ್ರಧಾನಿ ಯಾರೂ ಬಂದಿಲ್ಲ. ಅಪರೂಪಕ್ಕಾದರೂ ಸತ್ಯ ಹೇಳಿ ಎಂದು ವ್ಯಂಗ್ಯವಾಡಿದರು.

40% ಸರ್ಕಾರ ಅಂತ ಗುತ್ತಿಗೆದಾರರಿಂದಲೇ ಕರೆಸಿಕೊಂಡ ಏಕೈಕ ಸರ್ಕಾರ ನಿಮ್ಮ ಬಿಜೆಪಿ ಸರ್ಕಾರ. ಈಗ ನಾವು ನಾಗಮೋಹನ್ ದಾಸ್ ನೇತೃತ್ವದಲ್ಲಿ ಇರುವ ತನಿಖಾ ಆಯೋಗ ರಚನೆಯಾಗಿದೆ. ನಮ್ಮ ಭ್ರಷ್ಟಾಚಾರದ ಬಗ್ಗೆ ದಾಖಲೆಗಳಿದ್ದರೆ ತೋರಿಸಿ, ದಾಖಲೆ ತಂದು ಒಪ್ಪಿಸಿ ಎಂದು ಸವಾಲು ಹಾಕಿದರು.

ಹತ್ತತ್ತು ವರ್ಷ ಪ್ರಧಾನಿ ಆಗಿ ಈ ದೇಶದ ರೈತರು, ಕಾರ್ಮಿಕರು, ಮಹಿಳೆಯರು, ಬಡವರ ಪರವಾಗಿ ಒಂದೇ ಒಂದು ಕಾರ್ಯಕ್ರಮ ಮಾಡಿದ್ದರೆ ತೋರಿಸಿ. ವಿದೇಶದಿಂದ ಕಪ್ಪು ಹಣ ತಂದು ಭಾರತೀಯರ ಖಾತೆಗೆ 15 ಲಕ್ಷ ಹಾಕ್ತೀನಿ ಅಂದ್ರಲ್ಲಾ 15 ರೂಪಾಯಿನಾದ್ರೂ ಹಾಕಿದ್ರಾ ಎಂದು ಪ್ರಶ್ನಿಸಿದರು.

ಅಚ್ಛೇ ದಿನ್ ಆಯೆಗಾ ಅಂದ್ರಲ್ಲಾ ಮೋದಿಜಿ, ಎಲ್ಲಿದೆ ತೋರ್ಸಿ ಅಚ್ಚೆ ದಿನ್ ?

*ಡೀಸೆಲ್ ಬೆಲೆ ಕಡಿಮೆ ಆಗಿದೆಯಾ?
*ಪೆಟ್ರೋಲ್ ಬೆಲೆ ಕಡಿಮೆ ಆಗಿದೆಯಾ?
*ಗ್ಯಾಸ್ ಬೆಲೆ ಕಡಿಮೆ ಆಗಿದೆಯಾ?
*ಗೊಬ್ಬರದ ಬೆಲೆ ಕಡಿಮೆ ಆಗಿದೆಯಾ?
*ಬೇಳೆಕಾಳು ಬೆಲೆ ಕಡಿಮೆ ಆಗಿದೆಯಾ?
*ಅಡುಗೆ ಎಣ್ಣೆ ಬೆಲೆ ಕಡಿಮೆ ಆಗಿದೆಯಾ?
*ನಿರುದ್ಯೋಗ ಸಮಸ್ಯೆ ಬಗೆಹರಿಸಿದ್ರಾ?
*ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡಿದ್ರಾ?
*ರೈತರ ಆದಾಯ ದುಪ್ಪಟ್ಟು ಮಾಡಿದ್ರಾ?
*ವಿದೇಶದಿಂದ ಕಪ್ಪು ಹಣ ತಂದ್ರಾ?
*ಮತೆ ಎಲ್ಲಿದೆ ನಿಮ್ಮ ಅಚ್ಚೆ ದಿನ್? ಬನ್ನಿ ಸ್ಚಾಮಿ ತೋರ್ಸಿ ಎಂದು ವ್ಯಂಗ್ಯವಾಡಿದರು.

ರಾಜ್ಯದಲ್ಲಿರುವ ಪರಿಶಿಷ್ಟ ಜಾತಿ, ವರ್ಗದ ಜನ ಸಮುದಾಯಗಳಿಗೆ ನಾವು ಅನುದಾನ ಮೀಸಲಿಡಲು ಕಾನೂನು ಮಾಡಿದ್ದು ನಮ್ಮ ಸರ್ಕಾರ. ನೀವು ಹತ್ತತ್ತು ವರ್ಷ ಪ್ರಧಾನಿಯಾಗಿ ದಲಿತ ಸಮುದಾಯದ , ಹಿಂದುಳಿದ ಜಾತಿ ಸಮುದಾಯಗಳ ಪ್ರಗತಿಗೆ ಒಂದೇ ಒಂದು ಕಾರ್ಯಕ್ರಮವನ್ನಾದರೂ ರೂಪಿಸಿದ್ದೀರಾ ಎಂದು ಪ್ರಶ್ನಿಸಿದರು.

ನಾನು ಮೊದಲ ಮುಖ್ಯಮಂತ್ರಿಯಾಗಿ ಕೊಟ್ಟ ಆಶ್ವಾಸನೆಗಳಲ್ಲಿ ಶೇ95 ರಷ್ಟು ಈಡೇರಿಸಿದೆ. ಈ ಬಾರಿ ನಾವು ಹೇಳಿದ್ದ ಐದೂ ಗ್ಯಾರಂಟಿಗಳನ್ನೂ ಜಾರಿ ಮಾಡಿದ್ದೇವೆ. ನುಡಿದಂತೆ ನಡೆದಿದ್ದೇವೆ. ನೀವು ನಮ್ಮ ರಾಜ್ಯದ ಜನತೆಗೆ ಏನಾದ್ರೂ ಮಾಡಿದ್ರೆ ಬನ್ನಿ ತೋರ್ಸಿ ಸ್ವಾಮಿ ಎಂದು ಸವಾಲು ಹಾಕಿದರು.

ರಾಹುಲ್ ಗಾಂಧಿ ನ್ಯಾಯಪತ್ರ ನಿಮ್ಮ ಮನೆ ಬಾಗಿಲಿಗೆ ಬರತ್ತೆ : ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳ ಜತೆಗೆ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿಯವರು 25 ಗ್ಯಾರಂಟಿಗಳನ್ನು ಘೋಷಿಸಿದ್ದಾರೆ. ಕೇಂದ್ರದಲ್ಲಿ ನಮ್ಮ ಸರ್ಕಾರ ಬಂದ ತಕ್ಷಣ ಎಲ್ಲಾ 25 ಗ್ಯಾರಂಟಿಗಳು ಜಾರಿ ಆಗುತ್ತವೆ ಎಂದರು.

ಎಚ್‌ಡಿಕೆ ವಿರುದ್ಧ ಕಿಡಿಕಾರಿದ ಸಿಎಂ, ರಾಜ್ಯ ಸರ್ಕಾರದ ಗ್ಯಾರಂಟಿಗಳಿಂದ ಮಹಿಳೆಯರು ಹಾದಿ ತಪ್ಪಿದ್ದಾರೆ ಎಂದು ಎಚ್.ಡಿ.ಕುಮಾರಸ್ವಾಮಿಯವರು ನೀಡಿದ ಹೇಳಿಕೆ ಇಡೀ ಮಹಿಳಾ ಸಮುದಾಯದ ಸ್ವಾಭಿಮಾನವನ್ನು ಕೆಣಕಿದೆ. ಮಹಿಳೆಯರಿಗೆ ಈ ಮಟ್ಟದ ಅವಮಾನ ಖಂಡನೀಯ ಎಂದರು.

ಇನ್ನು ಬ್ರಿಟೀಷರ ವಿರುದ್ಧದ ಭಾರತೀಯರ ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿ, RSS ನ ಒಬ್ಬೇ ಒಬ್ಬನೂ ಹುತಾತ್ಮ ಆಗಲಿಲ್ಲ. ಬ್ರಿಟೀಷರೇ ಭಾರತ ಬಿಟ್ಟು ತೊಲಗಿ ಎನ್ನುವ ಸ್ವತಂತ್ರ ಹೋರಾಟದಲ್ಲಿ ಇಡೀ ಭಾರತೀಯರು ದುಮುಕಿದರು. ಆದರೆ 1925 ರಲ್ಲೇ ಹುಟ್ಟಿದ್ದ BJP ಯ ಮಾತೃಸಂಸ್ಥೆ RSS ನ ಒಬ್ಬೇ ಒಬ್ಬರೂ ಏಕೆ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಲಿಲ್ಲ ಎನ್ನುವುದಕ್ಕೆ ಇಡಿ ದೇಶದ ಜನರಿಗೆ ಉತ್ತರಿಸಬೇಕು ಎಂದು ಆಗ್ರಹಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಈ ಭಾರಿ ವಾಡಿಕೆಗಿಂತ ಹೆಚ್ಚು ಬಿಸಿಲು ; ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು : ಈ ವರ್ಷ ರಾಜ್ಯದಲ್ಲಿ ಬೇಸಿಗೆಯ ಬಿಸಿಲು ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)…

1 hour ago

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅರ್ಜಿ ವಜಾ

ಬೆಂಗಳೂರು : ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರು ಹೂಡಿರುವ ಮಾನಹಾನಿ ಪ್ರಕರಣವನ್ನು ರದ್ದುಗೊಳಿಸುವಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ…

2 hours ago

HPCLನಲ್ಲಿ 608 ಅಪ್ರೆಂಟಿಸ್ ಟ್ರೈನಿ ನೇಮಕಾತಿ

ಬೆಂಗಳೂರು : ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) 608 ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದು…

2 hours ago

ಬಾಯಿ ಮುಚ್ಚಿಕೊಂಡಿದ್ದರೆ ಒಳ್ಳೆದು ; ಮೂವರು ಶಾಸಕರಿಗೆ ಡಿಸಿಎಂ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಸಿಎಂ ಸ್ಥಾನ ಬದಲಾವಣೆ, ಡಿಸಿಎಂ ದಿಲ್ಲಿ ಪ್ರವಾಸ, ಹೈಕಮಾಂಡ್ ಭೇಟಿ ಹೀಗೆ ಹೇಳಿಕೆಗಳನ್ನು ನೀಡುತ್ತಿರುವ ಕಾಂಗ್ರೆಸ್ ಶಾಸಕರು…

2 hours ago

ದಿಲ್ಲಿಯಲ್ಲಿ ದಾಳಿಗೆ ಸಂಚು : 8 ಮಂದಿ ಬಂಧನ

ಹೊಸದಿಲ್ಲಿ : ದೆಹಲಿಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಗುಂಪುಗಳ ಬೆಂಬಲದೊಂದಿಗೆ ಭಯೋತ್ಪಾದಕ ಪಿತೂರಿ ನಡೆಸುತ್ತಿದ್ದ…

4 hours ago

ಸಿಎಸ್‌ ಹೆಸರು ಪ್ರಸ್ತಾಪಿಸಿದ್ದಕ್ಕೆ ಕ್ಷಮೆ : ಸ್ನೇಹಮಯಿ ಕೃಷ್ಣ ಸ್ಪಷ್ಟನೆ

ಮೈಸೂರು : ಮುಡಾ ಆಯುಕ್ತ ನಟೇಶ್ ಅವರಿಗೆ ಬಡ್ತಿ ನೀಡುವ ವಿಚಾರದಲ್ಲಿ ಸುಳ್ಳು ಆರೋಪ ಮಾಡಿದ್ದೇನೆಂದು ನಾನು ಕ್ಷಮೆ ಕೋರಿಲ್ಲ.…

4 hours ago