BREAKING NEWS

ನಮ್ಮ ಮೆಟ್ರೋ ವಿಸ್ತೃತ ಮಾರ್ಗ ಉದ್ಘಾಟಿಸಿದ ಪ್ರಧಾನಿಗೆ ಧನ್ಯವಾದ ತಿಳಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೆಆರ್ ಪುರ-ಬೈಯಪ್ಪನಹಳ್ಳಿ ಹಾಗೂ ಕೆಂಗೇರಿ-ಚಲ್ಲಘಟ್ಟದವರೆಗೆ ನಮ್ಮ ಮೆಟ್ರೋ ವಿಸ್ತ್ರತ ಮಾರ್ಗವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಶುಕ್ರವಾರ ಉದ್ಘಾಟಿಸಿದರು.

ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ  ಮೋದಿಯವರು ನಮ್ಮ ಮೆಟ್ರೋ ವಿಸ್ತೃತ ಮಾರ್ಗಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದ ವೇಳೆ ಸಿಎಂ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್, ಯಶವಂತಪುರ ಶಾಸಕ ಎಸ್.ಟಿ ಸೋಮಶೇಖರ್, ಸಿಎಸ್ ವಂದಿತಾ ಶರ್ಮಾ, ಮೆಟ್ರೋ ಎಂಡಿ ಅಂಜುಮ್ ಪರ್ವೇಜ್ ಉಪಸ್ಥಿತರಿದ್ದರು.

ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಾನು ಕನ್ನಡದಲ್ಲೇ ಮಾತನಾಡುತ್ತೇನೆಂದು ಹೇಳಿ, ಪ್ರಧಾನಿ ಮೋದಿಯವರಿಗೆ ಧನ್ಯವಾದ ತಿಳಿಸಿದರು.

ಬೆಂಗಳೂರು ನಗರ ಪರವಾಗಿ ಪ್ರಧಾನಿ ಮೋದಿಯವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಟ್ರಾಫಿಕ್ ಸಮಸ್ಯೆ ಹೆಚ್ಚಾಗಿರುವುದರಿಂದ ಮೆಟ್ರೋ ಸೇವೆ ಅತ್ಯಗತ್ಯ. ಮೆಟ್ರೋ ಯೋಜನೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಸೇರಿ ಯೋಜನೆ ಮಾಡಲಾಗುತ್ತಿದೆ. ರೂ.5,600 ಕೋಟಿ ಹಣ ರಾಜ್ಯ ಸರ್ಕಾರ ಮೆಟ್ರೋ ಯೋಜನೆ ನೀಡಲಾಗಿದೆ ಎಂದು ಹೇಳಿದರು. ಇದೇ ವೇಳೆ ಮಾಜಿ ರಾಷ್ಟ್ರಪತಿ ದಿವಂಗತ ಪ್ರಣಬ್ ಮುಖರ್ಜಿಯವರನ್ನು ಸ್ಮರಿಸಿದರು.

ಕೆಆರ್ ಪುರದಿಂದ ಬೈಯಪ್ಪನಳ್ಳಿ, ಕೆಂಗೇರಿ ಯಿಂದ ಚಲ್ಲಗಟ್ಟದವರೆಗೆ ಮೆಟ್ರೋ ಸೇವೆಯನ್ನು ರಾಷ್ಟ್ರಕ್ಕೆ ಸಮರ್ಪಣೆ ಮಾಡಲಾಗಿದೆ. ಕೇಂದ್ರ, ರಾಜ್ಯ ಸರ್ಕಾರ ಜಂಟಿಯಾಗಿ ಮೆಟ್ರೋ ಯೋಜನೆ ಜಾರಿಗೊಳಿಸುತ್ತಿದೆ. ಮೊದಲ ಹಂತದಲ್ಲಿ ಸು. 42.3 ಉದ್ದದ ಯೋಜನೆ ಜಾರಿ ಮಾಡಲಾಗಿದೆ. ಇದಕ್ಕೆ‌ 5630 ಕೋಟಿ ರಾಜ್ಯ ಸರ್ಕಾರ ಖರ್ಚು ಮಾಡಿದೆ. ಕೇಂದ್ರ ರಾಜ್ಯ ಎರಡೂ ಸರ್ಕಾರಗಳು ಜಂಟಿಯಾಗಿ ಮೆಟ್ರೋ ಯೋಜನೆ ಮಾಡಲಾಗುತ್ತಿದೆ. ಎರಡೂ ಹಂತ ಸೇರಿ ಸುಮಾರು 74 ಕಿ.ಲೋ ವಿಸ್ತರಣೆ ಆಗಿದೆ ಎಂದು ಮಾಹಿತಿ ನೀಡಿದರು.

ಸೆಂಟ್ರಲ್ ಸಿಲ್ಕ್ ಬೋರ್ಡ್ ನಿಂದ ಹೆಬ್ಬಾಳ ಜೆಂಕ್ಷನ್ ಮೂಲಕ ಅಂತರಾಷ್ಟ್ರೀಯ ಏರ್ ಪೋರ್ಟ್ ಗೆ 2ಎ ಹಾಗೂ 2ಬಿ ಯೋಜನೆಯನ್ನು ಅಂದಾಜು 14,788 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. 2026ರ ಒಳಗೆ ಪೂರ್ಣಗೊಳಿಸಲು ಯೋಜಿಸಲಾಗಿದೆ. ಕರ್ನಾಟಕದಿಂದ 4775.36 ಕೋಟಿ ಬಿಡುಗಡೆ ಮಾಡಲಾಗಿದೆ. ಯೋಜನೆ ಪೂರ್ಣಗೊಂಡ ನಂತರ 176 ಕಿಲೋಮೀಟರ್ ಆಗಲಿದೆ. ಪ್ರತಿದಿನ 20 ಲಕ್ಷ ಪ್ರಯಾಣಿಕರು ಸಂಚರಿಸಬಹುದಾಗಿದೆ. ಈ ಯೋಜನೆಗೆ ಶೀಘ್ರವಾಗಿ ಅನುಮೋದನೆ ನೀಡುವಂತೆ ಮಾನ್ಯ ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರನ್ನು ಕೊರುತ್ತೇನೆ. ಸರ್ಜಾಪುರದಿಂದ ಹೆಬ್ಬಾಳದವರೆಗೂ 37 ಕಿಲೋ ಮೀಟರ್ ಉದ್ದದ ಹಂತ 3ಎ ಗೆ ಡಿಪಿಆರ್ ತಯಾರಿಸಲಾಗುತ್ತಿದೆ. 257 ಕಿಲೋಮಟರ್ ಯೋಜನೆ ಹಂತದಲ್ಲಿ ಇದೆ. 67 ಕಿಲೋ ಮೀಟರ್ ಮೆಟ್ರೋ ಮಾರ್ಗಗಳ ಸಮೀಕ್ಷೆ ಶೀಘ್ರದಲ್ಲೇ ಕೈಗೊಳ್ಳುತ್ತೇನೆ ಎಂದು ಹೇಳಿದರು.

ಯೋಗಿ ಆದಿತ್ಯನಾಥ್ ಜೊತೆ ಸಿಎಂ ಫೋಟೋ
ಈ ನಡುವೆ ಗಾಜಿಯಾಬಾದ್ ಕಾರ್ಯಕ್ರಮದ ವೇದಿಕೆಯ ಪೋಸ್ಟರ್ ನಲ್ಲಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಜೊತೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ಫೋಟೋ ಕಾಣಿಸಿಕೊಂಡಿದೆ. ಪ್ರಧಾನಿ ಮೋದಿ ಜೊತೆ ಇಬ್ಬರು ಸಿಎಂಗಳ ಫೋಟೋ ಕಾಣಿಸಿಕೊಂಡಿದೆ.

ಇದನ್ನು ನೋಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ನಿಮ್ಮದೂ ಫೋಟೋ ಇದೆ ಎಂದು ಸಿದ್ದರಾಮಯ್ಯ ಅವರಿಗೆ ತಿಳಿಸಿದರು. ಈ ವೇಳೆ ಮಾತನಾಡಿದ ಸಿದ್ದರಾಮಯ್ಯ ಅವರು, ಇಲ್ಲ ಅನ್ಸುತ್ತೆ ಎಂದು ವಿಡಿಯೋ ಕಾನ್ಫರೆನ್ಸ್ ನಲ್ಲಿ ಕಣ್ಣಿಟ್ಟು ನೋಡಿದರು. ಇದೆ.. ಇದೆ.. ನಾನು ನೋಡ್ದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದು, ನಿಮ್ ಫೋಟೋ ಹಾಕಿದ್ದಾರೆ ಸರ್ ಎಂದು ಅಧಿಕಾರಿಗಳು ಕೂಡ ಮಾಹಿತಿ ನೀಡಿದರು. ಬಳಿಕ ಹೌದಾ ಎಂದು ಸಿಎಂ ಸಿದ್ದರಾಮಯ್ಯ ಸುಮ್ಮನಾದರು.

andolanait

Recent Posts

ಓದುಗರ ಪತ್ರ: ಡಿಕೆಶಿಯವರ ನಿಲುವು ಸ್ವಾಗತಾರ್ಹ

ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…

34 seconds ago

ಓದುಗರ ಪತ್ರ: ಬಾಂಗ್ಲಾದಲ್ಲಿ ಹಿಂದೂಗಳ ಸರಣಿ ಹತ್ಯೆ ಖಂಡನೀಯ

ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…

2 mins ago

ಓದುಗರ ಪತ್ರ: ನಂಜನಗೂಡಿನಲ್ಲಿ ಆಟೋಗಳಿಗೆ ಮೀಟರ್ ದರ ಜಾರಿಯಾಗಲಿ

ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…

6 mins ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ‘ನಿಯೋನೇಟಲ್ ಕೇರ್’ ಸೇವೆಯ ಮಾತೆ ಡಾ.ಅರ್ಮಿಡಾ ಫೆರ್ನಾಂಡೀಸ್

ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…

8 mins ago

ಮಲೆ ಮಹದೇಶ್ವರ ಬೆಟ್ಟ| ಕಾಲ್ನಡಿಗೆ ಪಾದಯಾತ್ರಿಗಳಿಗೆ ಸೌಲಭ್ಯ ಕಲ್ಪಿಸಿ: ಡಿಸಿಎಂ ಡಿಕೆಶಿ ಸೂಚನೆ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ…

12 mins ago

ಕೊಳ್ಳೇಗಾಲ: ಕೇರಳ ಲಾಟರಿ ಮಾರಾಟ: ವ್ಯಕ್ತಿಯ ಬಂಧನ

ಕೊಳ್ಳೇಗಾಲ: ಅಕ್ರಮವಾಗಿ ಕೇರಳ ಲಾಟರಿಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಅಗರ ಮಾಂಬಳ್ಳಿ ಠಾಣೆಯ ಪೊಲೀಸರು ಬಂಧಿಸಿರುವ ಘಟನೆ ಮಂಗಳವಾರ ಜರುಗಿದೆ.…

13 mins ago