ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಭಾರೀ ಸದ್ದು ಮಾಡುತ್ತಿವೆ. ಕಾಂಗ್ರೆಸ್ ಚುನಾವಣಾ ಪೂರ್ವ ನೀಡಿದ್ದ 5 ಖಾತರಿಗಳಲ್ಲಿ 3 ಖಾತರಿಗಳನ್ನು ಜಾರಿಗೆ ತರುವ ದಿನಾಂಕಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿನ್ನೆ ಅಧಿಕೃತವಾಗಿ ಘೋಷಿಸಿದ್ದಾರೆ.
ಅದರಲ್ಲಿ ಮೊದಲನೆಯದಾಗಿ ಸರ್ಕಾರಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವಾದ ಶಕ್ತಿ ಯೋಜನೆ(Shakti scheme) ಇದೇ ಭಾನುವಾರ ಜಾರಿಗೆ ಬರಲಿದ್ದು ರಾಜಧಾನಿ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಚಾಲನೆ ನೀಡಲಿದ್ದಾರೆ.
ನಿರ್ವಾಹಕರಾಗಲಿದ್ದಾರೆ ಸಿದ್ದರಾಮಯ್ಯ: ಶಕ್ತಿ ಯೋಜನೆಗೆ ವಿಭಿನ್ನವಾಗಿ ಚಾಲನೆ ನೀಡಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಅದರಂತೆ ಜೂನ್ 11ರಂದು ಬೆಳಗ್ಗೆ ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧ ಮುಂಭಾಗದಲ್ಲಿ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ವಿಧಾನಸೌಧಕ್ಕೆ ತೆರಳುವ ರೂಟ್ ನಂಬರ್ 43ರ ಬಸ್ಸಿನಲ್ಲಿ ಕೆಲಹೊತ್ತು ಸಿಎಂ ಕಂಡಕ್ಟರ್ ಆಗಿ ಮಹಿಳೆಯರಿಗೆ ಶೂನ್ಯದರದ ಟಿಕೆಟ್ ನೀಡಲಿದ್ದಾರೆ. ವಿಧಾನಸೌಧದಿಂದ ಮೆಜೆಸ್ಟಿಕ್ ಗೆ ಕಂಡಕ್ಟರ್ ಆಗಿ ಕಾರ್ಯನಿರ್ವಹಿಸುತ್ತಾ ಕೆಲಹೊತ್ತು ಪ್ರಯಾಣಿಸಲಿದ್ದಾರೆ.
ಅನಂತರ ವಿಧಾನಸೌಧದಲ್ಲಿ ನಡೆಯುವ ಅದ್ಧೂರಿ ಕಾರ್ಯಕ್ರಮದಲ್ಲಿ ಯೋಜನೆಗೆ ಅಧಿಕೃತ ಚಾಲನೆ ನೀಡಲಿದ್ದಾರೆ. ಇಡೀ ರಾಷ್ಟ್ರದ ಗಮನ ಸೆಳೆದಿರುವ ಗ್ಯಾರಂಟಿ ಯೋಜನೆಗಳ ಉದ್ಘಾಟನೆಯೂ ಸಹ ವಿಭಿನ್ನವಾಗಿರಬೇಕು ಎಂಬ ಆಲೋಚನೆಯಲ್ಲಿರುವ ಸಿದ್ದರಾಮಯ್ಯ ಅವರ ಥಿಂಕ್ ಟ್ಯಾಂಕ್ ಈ ಶೈಲಿಯಲ್ಲಿ ಕಾರ್ಯಕ್ರಮ ರೂಪಿಸಲು ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ.
ಮುಂಬೈ : ನೀಟ್ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…