BREAKING NEWS

ವಿಶ್ವವಿಖ್ಯಾತ ದಸರಾ ಜಂಬೂ ಸವಾರಿಗೆ ಚಾಲನೆ ನೀಡಿದ ಸಿಎಂ

ಮೈಸೂರು : ಕ್ಯಾಪ್ಟನ್ ಅಭಿಮನ್ಯು ಹೊತ್ತ ಚಿನ್ನದ ಅಂಬಾರಿಯಲ್ಲಿ ಪ್ರತಿಷ್ಠಾಪಿಸಿರುವ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಐತಿಹಾಸಿಕ ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಿದರು.

ಅರಮನೆ ಆವರಣದಲ್ಲಿ ನಿರ್ಮಿಸಲಾಗಿದ್ದ ವೇದಿಕೆ ಬಳಿಗೆ ಕ್ಯಾಪ್ಟನ್ ಅಭಿಮನ್ಯು 750 ಕೆಜಿ ಚಿನ್ನದ ಅಂಬಾರಿ ಹೊತ್ತು ಆಗಮಿಸಿದ್ದು ಅಂಬಾರಿಯಲ್ಲಿ ಪ್ರತಿಷ್ಟಾಪಿಸಲಾದ ತಾಯಿ ಚಾಮುಂಡೇಶ್ವರಿಗೆ ಶುಭ ಮೀನ ಲಗ್ನದಲ್ಲಿ ಸಿಎಂ ಸಿದ್ಧರಾಮಯ್ಯ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.

ಸಿಎಂ ಸಿದ್ಧರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್, ರಾಜವಂಶಸ್ಥ ಯದುವೀರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ ಸಾಥ್ ನೀಡಿದರು.

ಅಭಿಮನ್ಯುಗೆ ಕುಮ್ಕಿ ಆನೆಗಳಾದ ಲಕ್ಷ್ಮೀ, ವಿಜಯಾ ಸಾಥ್ ನೀಡಿದವು. ಸತತ 4ನೇ ಬಾರಿ ಚಿನ್ನದ ಅಂಬಾರಿಯನ್ನು ಅಭಿಮನ್ಯು ಹೊತ್ತಿದ್ದು, ಜಂಬೂ ಸವಾರಿ ಮೆರವಣಿಗೆ, ಕೆ.ಆರ್.ಸರ್ಕಲ್ , ಆರ್ಯವೇದ ಸರ್ಕಲ್‌, ತಿಲಕ್ ನಗರ, ಬಂಬೂ ಬಜಾರ್ ಮೂಲಕ ಬನ್ನಿ ಮಂಟಪ್ಪಕ್ಕೆ ತಲುಪಲಿದೆ. ಸುಮಾರು 5 ಕಿಲೋ ಮೀಟರ್ ಈ ಜಂಬೂ ಸವಾರಿ ನಡೆಯಲಿದೆ.

ಸತತ 4ನೇ ಬಾರಿ 750 ಕೆ.ಜಿ ತೂಕದ ಚಿನ್ನದ ಅಂಬಾರಿ ಹೊತ್ತು ಅಭಿಮನ್ಯು ಸಾಗುತ್ತಿದೆ. ಇನ್ನು ಅಭಿಮನ್ಯುಗೆ ಕುಮ್ಕಿ ಆನೆಗಳಾದ ಲಕ್ಷ್ಮೀ ಹಾಗೂ ವಿಜಯಾ ಸಾಥ್ ನೀಡುತ್ತಿವೆ. ಅರಮನೆಯಿಂದ ಬನ್ನಿಮಂಟಪದವರೆಗೆ ಈ ಮೆರವಣಿಗೆ ನಡೆಯಲಿದೆ. ಜಂಬೂಸವಾರಿಯಲ್ಲಿ ಬರೊಬ್ಬರಿ 49 ಸ್ತಬ್ದಚಿತ್ರಗಳು, ವಿವಿಧ ಕಲಾತಂಡಗಳು ಭಾಗಿಯಾಗಿದ್ದು, ಲಕ್ಷಾಂತರ ಜನರು ದಸರಾ ಜಂಬೂಸವಾರಿಗೆ ಸಾಕ್ಷಿಯಾಗಿದ್ದಾರೆ.

lokesh

Recent Posts

ಡ್ರಗ್ಸ್‌ ಗುಮಾನಿ | ಎನ್‌ಸಿಬಿ ಅಧಿಕಾರಿಗಳ ದಾಳಿ ಫಾಲೋಅಪ್‌ ಅಷ್ಟೇ : ಗೃಹ ಸಚಿವ

ಮೈಸೂರು : ಮೈಸೂರಿನಲ್ಲಿ ಡ್ರಗ್ಸ್‌ ತಯಾರು ಮಾಡುವ ಯಾವ ವಸ್ತುಗಳ ಸಹ ಸಿಕ್ಕಿಲ್ಲ. ಎನ್‌.ಸಿ.ಬಿ ಅಧಿಕಾರಿಗಳು ದಾಳಿ ಮಾಡಿರುವುದು ಫಾಲೋಅಪ್‌…

33 mins ago

ಓದುಗರ ಪತ್ರ: ಮಾನಸ ಗಂಗೋತ್ರಿಯಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ…

4 hours ago

ಓದುಗರ ಪತ್ರ: ಶಾಂತಿ, ಸೌಹಾರ್ದ ಸಭೆಗಳು ಹೆಚ್ಚು ಹೆಚ್ಚು ನಡೆಯಲಿ

ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’…

5 hours ago

ಓದುಗರ ಪತ್ರ: ಶ್ರೇಷ್ಠ ಕಾರ್ಮಿಕ ಧುರೀಣ ಅನಂತ ಸುಬ್ಬರಾವ್

ಹಿರಿಯ ಕಾರ್ಮಿಕ ಧುರೀಣ, ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಅನಂತ ಸುಬ್ಬರಾವ್ ಕಳೆದ ಸುಮಾರು ೪-೫ ದಶಕಗಳಿಂದ ಕಾರ್ಮಿಕ ಚಳವಳಿಗಳಲ್ಲಿ…

5 hours ago

ಬಾಪೂಜಿ ನೆನಪಲ್ಲಿ; ಖಾದಿ ಕೇಂದ್ರದ ಅಂಗಳದಲ್ಲಿ…

ಕೆ.ಎಸ್. ಚಂದ್ರಶೇಖರ್ ಮೂರ್ತಿ ದುಸ್ಥಿತಿಯಲ್ಲಿ ದೇಶದ ಪ್ರಪ್ರಥಮ ತಗಡೂರು ಖಾದಿ ಕೇಂದ್ರ  ಜ.೩೦, ೧೯೪೮ರಂದು ಅಹಿಂಸಾ ಪ್ರತಿಪಾದಕ, ಸ್ವಾತಂತ್ರ್ಯ ಹೋರಾಟಗಾರ…

5 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ನಿರ್ಮಾಪಕರ ಸಂಘ, ವಾಣಿಜ್ಯ ಮಂಡಳಿ ಚುನಾವಣೆ, ಚಿತ್ರನಗರಿ, ಒಟಿಟಿ ವರ್ತಮಾನ

ಹೊಸ ವರ್ಷದಲ್ಲಿ ಕನ್ನಡ ಚಿತ್ರರಂಗದ ಚಟುವಟಿಕೆಗಳು ಗರಿಗೆದರಿವೆ. ಒಂದೆಡೆ ನಿರ್ಮಾಪಕರ ಸಂಘ ಮತ್ತು ಚಲನಚಿತ್ರ ವಾಣಿಜ್ಯ ಮಂಡಳಿಗಳ ಚುನಾವಣೆಯ ಬಿರುಸು,…

5 hours ago