ಬೆಂಗಳೂರು : ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯಗಳಿಸಲು ಪ್ರಮುಖ ಪಾತ್ರ ವಹಿಸಿರುವ ಲಿಂಗಾಯತ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ಹಾಗೂ ಸಚಿವ ಸಂಪುಟದಲ್ಲಿ ಹೆಚ್ಚು ಪ್ರಾತಿನಿಧ್ಯ ನೀಡಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ನಾಯಕ ಶಾಮನೂರು ಶಿವಶಂಕರಪ್ಪ ಪತ್ರ ಬರೆದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಗ್ರಹಿಸಿದ್ದಾರೆ.
ಬಿಜೆಪಿಯ ಸಾಂಪ್ರದಾಯಿಕ ಮತದಾರರಾಗಿದ್ದ ಲಿಂಗಾಯತರು ಈ ಬಾರಿ ಕಾಂಗ್ರೆಸ್ಗೆ ನಿಷ್ಠೆ ಪ್ರದರ್ಶಿಸಿದ್ದಾರೆ. ಕಾಂಗ್ರೆಸ್ನಿಂದ ಸಮುದಾಯಕ್ಕೆ 46 ಕ್ಷೇತ್ರದಲ್ಲಿ ಟಿಕೆಟ್ ನೀಡಿದ್ದು ಈ ಪೈಕಿ 34 ಶಾಸಕರು ಆಯ್ಕೆಯಾಗಿ ಶೇ.74 ರಷ್ಟು ಸಾಧನೆಯಾಗಿದೆ. ಸಣ್ಣ ಸಮುದಾಯಗಳ ಅಭ್ಯರ್ಥಿಗಳು 50 ಕ್ಷೇತ್ರಗಳಲ್ಲಿ ಜಯಗಳಿಸಲು ಲಿಂಗಾಯತರು ಪ್ರಮುಖ ಪಾತ್ರ ವಹಿಸಿದ್ದಾರೆ. ಆದ್ದರಿಂದ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಹಾಗೂ ಸಚಿವ ಸಂಪುಟದಲ್ಲಿ ಹೆಚ್ಚು ಪ್ರಾತಿನಿಧ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.
ಲಿಂಗಾಯತ ಸಮುದಾಯ ಹೆಚ್ಚಿನ ಪ್ರಮಾಣದಲ್ಲಿ ಕಾಂಗ್ರೆಸ್ ಬೆಂಬಲಿಸಿದ್ದರಿಂದ ರಾಜ್ಯದಲ್ಲಿ ಪಕ್ಷ 135 ಕ್ಷೇತ್ರದಲ್ಲಿ ಜಯಗಳಿಸಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಪಡೆಯಲು ಸಮುದಾಯದ ಬೆಂಬಲವನ್ನು ಕಾಪಾಡಿಕೊಳ್ಳಬೇಕು. ಆದ್ದರಿಂದ ಲಿಂಗಾಯತ ಸಮುದಾಯಕ್ಕೆ ಮುಖ್ಯಮಂತ್ರಿ ಹುದ್ದೆ ನೀಡಬೇಕು. ಸಂಪುಟದಲ್ಲಿ ಹೆಚ್ಚು ಪ್ರಾತಿನಿಧ್ಯ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…