BREAKING NEWS

ಶೆಟ್ಟರ್ ಕ್ಷೇತ್ರದಲ್ಲಿ ಸಿಎಂ ಜಾಗರೂಕ ಹೆಜ್ಜೆ : ನಮ್ಮ ಹಿರಿಯರು ಎಂದು ಸಂಬೋಧಿಸಿದ ಬೊಮ್ಮಾಯಿ

ಹುಬ್ಬಳ್ಳಿ : ನಮ್ಮ ಬಿಜೆಪಿ ನಾಯಕರು ಕಾಂಗ್ರೆಸ್ ಸೇರಿದ್ದಾರೆ. ಕಾಂಗ್ರೆಸ್ ಹೊಲಸು ತೆಗೆಯಲು ಯಾರಿಂದಲೂ ಸಾಧ್ಯವಿಲ್ಲ. ಅದು ಅಷ್ಟು ಕೆಟ್ಟು ಹೋಗಿದೆ. ಇವರು ಅಲ್ಲಿ ಹೋಗಿ ಹೊಲಸು ತೆಗೆಯುತ್ತೇನೆ ಎಂದರೆ, ಇವರ ಕೈ ಹೊಲಸಾಗುತ್ತದೆ. ಅದು ಶುದ್ಧವಾಗುವುದಿಲ್ಲ. ಅವರು ಕಾಂಗ್ರೆಸ್ ಸೇರಿದ್ದು ದುರ್ದೈವ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಸ್ಪರ್ಧಿಸಿರುವ ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಪ್ರಚಾರ ಮಾಡುವಾಗ, ಸಿಎಂ ಅನುಸರಿಸಿರುವ ಜಾಣ್ಮೆಯ ನಡೆ. ಕ್ಷೇತ್ರದ ಗೋಪನಕೊಪ್ಪ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ ತೆಂಗಿನಕಾಯಿ ಪರ ಪ್ರಚಾರ ನಡೆಸಿ ಮಾತನಾಡಿದ ಅವರು, ನಮ್ಮ ಬಿಜೆಪಿ ನಾಯಕರು ಕಾಂಗ್ರೆಸ್ ಸೇರಿದ್ದಾರೆ. ಕಾಂಗ್ರೆಸ್ ಹೊಲಸು ತೆಗೆಯಲು ಯಾರಿಂದಲೂ ಸಾಧ್ಯವಿಲ್ಲ. ಅಷ್ಟು ಕೆಟ್ಟು ಹೋಗಿದೆ. ಇವರು ಅಲ್ಲಿ ಹೋಗಿ ಹೊಲಸು ತೆಗೆಯುತ್ತೇನೆ ಎಂದರೆ, ಇವರ ಕೈ ಹೊಲಸಾಗುತ್ತದೆ. ಅದು ಶುದ್ಧವಾಗುವುದಿಲ್ಲ. ಅವರು ಕಾಂಗ್ರೆಸ್ ಸೇರಿದ್ದು ದುರ್ದೈವ ಎಂದರು.

ಇಲ್ಲಿ ಪ್ರಮುಖವಾಗಿ ಗಮನಿಸಬೇಕಾದ್ದು, ಶೆಟ್ಟರ್ ಕಡೆಗೆ ಸಿಎಂ ಬೊಮ್ಮಾಯಿ ಸಾಫ್ಟ್ ಅಸ್ತ್ರ ಬಿಟ್ಟಿರುವುದು. ಇದಕ್ಕೊಂದು ಕಾರಣವೂ ಇದೆ. ಶೆಟ್ಟರ್ ಅಂದರೆ ಹುಬ್ಬಳ್ಳಿ ಧಾರವಾಡ ಕ್ಷೇತ್ರದಲ್ಲಿ ತುಂಬಾ ಗೌರವವಿದೆ. ಅವರ ಮೇಲಷ್ಟೇ ಅಲ್ಲ, ಬಿಜೆಪಿಯ ಹಿಂದಿನ ಅವತಾರವಾಗಿದ್ದ ಜನಸಂಘದಲ್ಲಿ ಶೆಟ್ಟರ್ ತಂದೆ ತೊಡಗಿಸಿಕೊಂಡು ನಾಯಕರಾಗಿ ಬೆಳೆದಿದ್ದವರು. ಹಾಗಾಗಿ, ಅವರ ಕುಟುಂಬದ ಮೇಲೆ ಜನರಿಗೆ ಗೌರವವಿದೆ. ಹಾಗಾಗಿಯೇ, ಇಲ್ಲಿ ಪ್ರಚಾರ ಮಾಡುವಾಗ ಸಿಎಂ ಬೊಮ್ಮಾಯಿ ತೀಕ್ಷ್ಣ ನುಡಿಗಳನ್ನು ಬಳಸಿಲ್ಲ.

‘ನಮ್ಮ ಹಿರಿಯರು’ ಎಂದು ಪರೋಕ್ಷವಾಗಿ ಜಗದೀಶ್ ಶೆಟ್ಟರ್ ಅವರನ್ನು ಸಂಬೋಧಿಸಿರುವ ಸಿಎಂ, ಜಾಗರೂಕ ಹೆಜ್ಜೆಯಿಟ್ಟರು. ಜೊತೆಗೆ, “ಯಾರು ಏನೇ ಮಾಡಲಿ ನಮ್ಮ ಪಕ್ಷ ಕಮಲ. ಕೆಸರಿನಲ್ಲಿ ಅರಳಿ ಅಭಿವೃದ್ಧಿ ಮಾಡುವ ಕಮಲ. ಇದುವರೆಗೂ ಕಮಲಕ್ಕೆ ಬೆಂಬಲ ನೀಡಿದ್ದೀರಿ.‌ ಇದನ್ನು ಮುಂದುವರಿಸಿಕೊಂಡು ಹೋಗಬೇಕು. ತೆಂಗಿನಕಾಯಿ ಅವರ ಜೊತೆಗೆ ನಾನು ಇದ್ದೇನೆ ಎಂದರು. ಕ್ಷೇತ್ರದ ಅಭಿವೃದ್ಧಿಗೆ ಎಲ್ಲ ಮಂಜೂರಾತಿ ಕೊಡುತ್ತೇನೆ’’ ಎಂಬ ವಾಗ್ದಾನವನ್ನೂ ನೀಡಿದರು.

lokesh

Recent Posts

ಶಾಸಕ ಗಾಲಿ ಜನಾರ್ಧನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ

ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಸ್ಥಾನದಿಂದಲೇ ಅನರ್ಹಗೊಂಡು ನ್ಯಾಯಾಲಯದ ತಡೆಯಾಜ್ಞೆಯಿಂದ ಬಚಾವ್ ಆಗಿದ್ದ ಮಾಜಿ ಸಚಿವ ಹಾಗೂ ಶಾಸಕ…

2 hours ago

ಉನ್ನಾವೋ ಅತ್ಯಾಚಾರ ಕೇಸ್:‌ ಆರೋಪಿ ಕುಲದೀಪ್‌ ಸಿಂಗ್‌ ಸೆಂಗರ್‌ ಜಾಮೀನಿಗೆ ಸುಪ್ರೀಂಕೋರ್ಟ್‌ ತಡೆ

ನವದೆಹಲಿ: ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ ದೆಹಲಿ…

2 hours ago

ರಾಜ್ಯದಲ್ಲಿ ಡ್ರಗ್ಸ್‌ ದಂಧೆ: ಸರ್ಕಾರದ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ಮಹಾರಾಷ್ಟ್ರ ಪೊಲೀಸರಿಂದ ಬೆಂಗಳೂರಿನಲ್ಲಿ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್‌ ಸೀಜ್‌ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ…

2 hours ago

ರಾಜ್ಯದ ಶ್ರೀಮಂತ ದೇವಾಲಯಗಳ ಪಟ್ಟಿ ಬಿಡುಗಡೆ : ಯಾವುದು ನಂಬರ್‌ ಒನ್‌ ಗೊತ್ತಾ?

ಬೆಂಗಳೂರು: ರಾಜ್ಯ ಸರ್ಕಾರದ ಮುಜರಾಯಿ ಇಲಾಖೆಯು ಕರ್ನಾಟಕ ರಾಜ್ಯದ ಅತ್ಯಂತ ಶ್ರೀಮಂತ ದೇವಸ್ಥಾನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪ್ರಮುಖವಾಗಿ ಪ್ರಸಿದ್ಧ…

3 hours ago

ತಲಕಾಡಿನತ್ತ ಹರಿದುಬರುತ್ತಿರುವ ಪ್ರವಾಸಿಗರು: ಕಾವೇರಿ ನದಿಯಲ್ಲಿ ಮಿಂದೆದ್ದು ಸಂಭ್ರಮ

ಟಿ.ನರಸೀಪುರ: ಹೊಸ ವರ್ಷದ ಸಂಭ್ರಮಾಚರಣೆ ಆಚರಿಸಲು ಐತಿಹಾಸಿಕ ಪಂಚಲಿಂಗಗಳ ಪುಣ್ಯಕ್ಷೇತ್ರ ತಲಕಾಡಿಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಕಳೆದ ಮೂರು…

3 hours ago

ಕೇರಳ ಸಿಎಂ ಪಿಣರಾಯಿ ವಿಜಯನ್‌ ವಿರುದ್ಧ ಸಚಿವ ಎಚ್.ಸಿ.ಮಹದೇವಪ್ಪ ಕಿಡಿ

ಬೆಂಗಳೂರು: ಬೆಂಗಳೂರಿನಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಶೆಡ್‌ಗಳ ತೆರವು ಪ್ರಕರಣವನ್ನು ಖಂಡಿಸಿ ಟ್ವೀಟ್‌ ಮಾಡಿದ್ದ ಕೇರಳ ಸಿಎಂ ಪಿಣರಾಯಿ ವಿಜಯನ್‌ ವಿರುದ್ಧ…

3 hours ago