ಹುಬ್ಬಳ್ಳಿ : ನಮ್ಮ ಬಿಜೆಪಿ ನಾಯಕರು ಕಾಂಗ್ರೆಸ್ ಸೇರಿದ್ದಾರೆ. ಕಾಂಗ್ರೆಸ್ ಹೊಲಸು ತೆಗೆಯಲು ಯಾರಿಂದಲೂ ಸಾಧ್ಯವಿಲ್ಲ. ಅದು ಅಷ್ಟು ಕೆಟ್ಟು ಹೋಗಿದೆ. ಇವರು ಅಲ್ಲಿ ಹೋಗಿ ಹೊಲಸು ತೆಗೆಯುತ್ತೇನೆ ಎಂದರೆ, ಇವರ ಕೈ ಹೊಲಸಾಗುತ್ತದೆ. ಅದು ಶುದ್ಧವಾಗುವುದಿಲ್ಲ. ಅವರು ಕಾಂಗ್ರೆಸ್ ಸೇರಿದ್ದು ದುರ್ದೈವ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಸ್ಪರ್ಧಿಸಿರುವ ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಪ್ರಚಾರ ಮಾಡುವಾಗ, ಸಿಎಂ ಅನುಸರಿಸಿರುವ ಜಾಣ್ಮೆಯ ನಡೆ. ಕ್ಷೇತ್ರದ ಗೋಪನಕೊಪ್ಪ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ ತೆಂಗಿನಕಾಯಿ ಪರ ಪ್ರಚಾರ ನಡೆಸಿ ಮಾತನಾಡಿದ ಅವರು, ನಮ್ಮ ಬಿಜೆಪಿ ನಾಯಕರು ಕಾಂಗ್ರೆಸ್ ಸೇರಿದ್ದಾರೆ. ಕಾಂಗ್ರೆಸ್ ಹೊಲಸು ತೆಗೆಯಲು ಯಾರಿಂದಲೂ ಸಾಧ್ಯವಿಲ್ಲ. ಅಷ್ಟು ಕೆಟ್ಟು ಹೋಗಿದೆ. ಇವರು ಅಲ್ಲಿ ಹೋಗಿ ಹೊಲಸು ತೆಗೆಯುತ್ತೇನೆ ಎಂದರೆ, ಇವರ ಕೈ ಹೊಲಸಾಗುತ್ತದೆ. ಅದು ಶುದ್ಧವಾಗುವುದಿಲ್ಲ. ಅವರು ಕಾಂಗ್ರೆಸ್ ಸೇರಿದ್ದು ದುರ್ದೈವ ಎಂದರು.
ಇಲ್ಲಿ ಪ್ರಮುಖವಾಗಿ ಗಮನಿಸಬೇಕಾದ್ದು, ಶೆಟ್ಟರ್ ಕಡೆಗೆ ಸಿಎಂ ಬೊಮ್ಮಾಯಿ ಸಾಫ್ಟ್ ಅಸ್ತ್ರ ಬಿಟ್ಟಿರುವುದು. ಇದಕ್ಕೊಂದು ಕಾರಣವೂ ಇದೆ. ಶೆಟ್ಟರ್ ಅಂದರೆ ಹುಬ್ಬಳ್ಳಿ ಧಾರವಾಡ ಕ್ಷೇತ್ರದಲ್ಲಿ ತುಂಬಾ ಗೌರವವಿದೆ. ಅವರ ಮೇಲಷ್ಟೇ ಅಲ್ಲ, ಬಿಜೆಪಿಯ ಹಿಂದಿನ ಅವತಾರವಾಗಿದ್ದ ಜನಸಂಘದಲ್ಲಿ ಶೆಟ್ಟರ್ ತಂದೆ ತೊಡಗಿಸಿಕೊಂಡು ನಾಯಕರಾಗಿ ಬೆಳೆದಿದ್ದವರು. ಹಾಗಾಗಿ, ಅವರ ಕುಟುಂಬದ ಮೇಲೆ ಜನರಿಗೆ ಗೌರವವಿದೆ. ಹಾಗಾಗಿಯೇ, ಇಲ್ಲಿ ಪ್ರಚಾರ ಮಾಡುವಾಗ ಸಿಎಂ ಬೊಮ್ಮಾಯಿ ತೀಕ್ಷ್ಣ ನುಡಿಗಳನ್ನು ಬಳಸಿಲ್ಲ.
‘ನಮ್ಮ ಹಿರಿಯರು’ ಎಂದು ಪರೋಕ್ಷವಾಗಿ ಜಗದೀಶ್ ಶೆಟ್ಟರ್ ಅವರನ್ನು ಸಂಬೋಧಿಸಿರುವ ಸಿಎಂ, ಜಾಗರೂಕ ಹೆಜ್ಜೆಯಿಟ್ಟರು. ಜೊತೆಗೆ, “ಯಾರು ಏನೇ ಮಾಡಲಿ ನಮ್ಮ ಪಕ್ಷ ಕಮಲ. ಕೆಸರಿನಲ್ಲಿ ಅರಳಿ ಅಭಿವೃದ್ಧಿ ಮಾಡುವ ಕಮಲ. ಇದುವರೆಗೂ ಕಮಲಕ್ಕೆ ಬೆಂಬಲ ನೀಡಿದ್ದೀರಿ. ಇದನ್ನು ಮುಂದುವರಿಸಿಕೊಂಡು ಹೋಗಬೇಕು. ತೆಂಗಿನಕಾಯಿ ಅವರ ಜೊತೆಗೆ ನಾನು ಇದ್ದೇನೆ ಎಂದರು. ಕ್ಷೇತ್ರದ ಅಭಿವೃದ್ಧಿಗೆ ಎಲ್ಲ ಮಂಜೂರಾತಿ ಕೊಡುತ್ತೇನೆ’’ ಎಂಬ ವಾಗ್ದಾನವನ್ನೂ ನೀಡಿದರು.
ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…
ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…