BREAKING NEWS

ಸಿಎಂ ಆಯ್ಕೆ ಮತ್ತಷ್ಟು ಕಗ್ಗಂಟು : ಡಿಕೆಶಿಯಿಂದ ಇಂದು ಸಂಜೆ ಮತ್ತೆ ಖರ್ಗೆ ರಾಹುಲ್ ಗಾಂಧಿ ಭೇಟಿ

ನವದೆಹಲಿ : ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದಿರುವ ಕಾಂಗ್ರೆಸ್ ಗೆ ಮುಂದಿನ ಮುಖ್ಯಮಂತ್ರಿ ಆಯ್ಕೆ ವಿಚಾರ ಮತ್ತಷ್ಟು ಕಗ್ಗಂಟಾಗಿದ್ದು, ಸಿಎಂ ಹುದ್ದೆಗಾಗಿ ಪಟ್ಟು ಹಿಡಿದಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಬುಧವಾರ ಸಂಜೆ ಮತ್ತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲಿದ್ದಾರೆ.

ಡಿಕೆ ಶಿವಕುಮಾರ್ ಅವರು ಇಂದು ಮಧ್ಯಾಹ್ನ ಮಲ್ಲಿಕಾರ್ಜುನ ಖರ್ಗೆ ಅವರ ಮನೆಗೆ ತೆರಳಿ, ತಮ್ಮನ್ನೇ ಸಿಎಂ ಮಾಡುವಂತೆ ಪಟ್ಟು ಹಿಡಿದಿದ್ದಾರೆ. ಆದರೆ ಇದಕ್ಕೆ ಖರ್ಗೆ ಅವರು ಒಪ್ಪಿಲ್ಲ. ಹೀಗಾಗಿ ಸಂಜೆ ಮತ್ತೊಮ್ಮೆ ಭೇಟಿ ಮಾಡಲು ಡಿಕೆಶಿ ನಿರ್ಧರಿಸಿದ್ದಾರೆ.

ಖರ್ಗೆ ಭೇಟಿ ಬಳಿಕ ಮಾಧ್ಯಮದವರಿಗೆ ಯಾವುದೇ ಪ್ರತಿಕ್ರಿಯೆ ನೀಡದ ಡಿಕೆ ಶಿವಕುಮಾರ್ ಅವರು ರಾಷ್ಟ್ರ ರಾಜಧಾನಿಯಲ್ಲಿರುವ ತಮ್ಮ ಸಹೋದರ ಮತ್ತು ಪಕ್ಷದ ಸಂಸದ ಡಿ ಕೆ ಸುರೇಶ್ ಅವರ ನಿವಾಸಕ್ಕೆ ತೆರಳಿದ್ದಾರೆ.

ಡಿಕೆ ಶಿವಕುಮಾರ್ ಅವರು ಇಂದು ಸಂಜೆ ಖರ್ಗೆ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಲಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.

lokesh

Recent Posts

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

50 mins ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

57 mins ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

6 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

6 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

7 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

7 hours ago