ನವದೆಹಲಿ : ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದಿರುವ ಕಾಂಗ್ರೆಸ್ ಗೆ ಮುಂದಿನ ಮುಖ್ಯಮಂತ್ರಿ ಆಯ್ಕೆ ವಿಚಾರ ಮತ್ತಷ್ಟು ಕಗ್ಗಂಟಾಗಿದ್ದು, ಸಿಎಂ ಹುದ್ದೆಗಾಗಿ ಪಟ್ಟು ಹಿಡಿದಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಬುಧವಾರ ಸಂಜೆ ಮತ್ತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲಿದ್ದಾರೆ.
ಡಿಕೆ ಶಿವಕುಮಾರ್ ಅವರು ಇಂದು ಮಧ್ಯಾಹ್ನ ಮಲ್ಲಿಕಾರ್ಜುನ ಖರ್ಗೆ ಅವರ ಮನೆಗೆ ತೆರಳಿ, ತಮ್ಮನ್ನೇ ಸಿಎಂ ಮಾಡುವಂತೆ ಪಟ್ಟು ಹಿಡಿದಿದ್ದಾರೆ. ಆದರೆ ಇದಕ್ಕೆ ಖರ್ಗೆ ಅವರು ಒಪ್ಪಿಲ್ಲ. ಹೀಗಾಗಿ ಸಂಜೆ ಮತ್ತೊಮ್ಮೆ ಭೇಟಿ ಮಾಡಲು ಡಿಕೆಶಿ ನಿರ್ಧರಿಸಿದ್ದಾರೆ.
ಖರ್ಗೆ ಭೇಟಿ ಬಳಿಕ ಮಾಧ್ಯಮದವರಿಗೆ ಯಾವುದೇ ಪ್ರತಿಕ್ರಿಯೆ ನೀಡದ ಡಿಕೆ ಶಿವಕುಮಾರ್ ಅವರು ರಾಷ್ಟ್ರ ರಾಜಧಾನಿಯಲ್ಲಿರುವ ತಮ್ಮ ಸಹೋದರ ಮತ್ತು ಪಕ್ಷದ ಸಂಸದ ಡಿ ಕೆ ಸುರೇಶ್ ಅವರ ನಿವಾಸಕ್ಕೆ ತೆರಳಿದ್ದಾರೆ.
ಡಿಕೆ ಶಿವಕುಮಾರ್ ಅವರು ಇಂದು ಸಂಜೆ ಖರ್ಗೆ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಲಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…