ನವದೆಹಲಿ : ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದಿರುವ ಕಾಂಗ್ರೆಸ್ ಗೆ ಮುಂದಿನ ಮುಖ್ಯಮಂತ್ರಿ ಆಯ್ಕೆ ವಿಚಾರ ಮತ್ತಷ್ಟು ಕಗ್ಗಂಟಾಗಿದ್ದು, ಸಿಎಂ ಹುದ್ದೆಗಾಗಿ ಪಟ್ಟು ಹಿಡಿದಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಬುಧವಾರ ಸಂಜೆ ಮತ್ತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲಿದ್ದಾರೆ.
ಡಿಕೆ ಶಿವಕುಮಾರ್ ಅವರು ಇಂದು ಮಧ್ಯಾಹ್ನ ಮಲ್ಲಿಕಾರ್ಜುನ ಖರ್ಗೆ ಅವರ ಮನೆಗೆ ತೆರಳಿ, ತಮ್ಮನ್ನೇ ಸಿಎಂ ಮಾಡುವಂತೆ ಪಟ್ಟು ಹಿಡಿದಿದ್ದಾರೆ. ಆದರೆ ಇದಕ್ಕೆ ಖರ್ಗೆ ಅವರು ಒಪ್ಪಿಲ್ಲ. ಹೀಗಾಗಿ ಸಂಜೆ ಮತ್ತೊಮ್ಮೆ ಭೇಟಿ ಮಾಡಲು ಡಿಕೆಶಿ ನಿರ್ಧರಿಸಿದ್ದಾರೆ.
ಖರ್ಗೆ ಭೇಟಿ ಬಳಿಕ ಮಾಧ್ಯಮದವರಿಗೆ ಯಾವುದೇ ಪ್ರತಿಕ್ರಿಯೆ ನೀಡದ ಡಿಕೆ ಶಿವಕುಮಾರ್ ಅವರು ರಾಷ್ಟ್ರ ರಾಜಧಾನಿಯಲ್ಲಿರುವ ತಮ್ಮ ಸಹೋದರ ಮತ್ತು ಪಕ್ಷದ ಸಂಸದ ಡಿ ಕೆ ಸುರೇಶ್ ಅವರ ನಿವಾಸಕ್ಕೆ ತೆರಳಿದ್ದಾರೆ.
ಡಿಕೆ ಶಿವಕುಮಾರ್ ಅವರು ಇಂದು ಸಂಜೆ ಖರ್ಗೆ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಲಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.
ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…